ಕರಿದ ಕೋಳಿ ಮಾಂಸ ಮಾರದಂತೆ ರೆಸ್ಟೊರೆಂಟ್ ಗಳಿಗೆ ದೆಹಲಿ ಪಾಲಿಕೆ ಸೂಚನೆ
ನವದೆಹಲಿ, ಜನವರಿ 12: ಸುಮಾರು ಹತ್ತು ಹದಿನೈದು ದಿನಗಳಿಂದೀಚೆಗೆ ದೇಶದ ಹಲವೆಡೆ ವಲಸೆ ಹಕ್ಕಿಗಳು, ಕೋಳಿ, ಬಾತುಕೋಳಿಗಳು ಸಾವಿರಾರು ಸಂಖ್ಯೆಯಲ್ಲಿ ಇದ್ದಕ್ಕಿದ್ದಂತೆ ಸಾವನ್ನಪ್ಪಿದ್ದು, ಪರೀಕ್ಷೆ ನಂತರ, ಹತ್ತು ರಾಜ್ಯಗಳಲ್ಲಿ ಹಕ್ಕಿ ಜ್ವರದ ಪ್ರಕರಣಗಳಿರುವುದು ದೃಢಪಟ್ಟಿದೆ. ಇದರಿಂದಾಗಿ ಎಲ್ಲೆಡೆ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ ನೀಡಿದೆ.
ಕೇರಳ, ರಾಜಸ್ಥಾನ, ಹಿಮಾಚಲ ಪ್ರದೇಶ, ಗುಜರಾತ್, ಹರಿಯಾಣ, ಪಂಜಾಬ್, ಉತ್ತರ ಪ್ರದೇಶ, ಮಧ್ಯ ಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಪ್ರಕರಣ ದೃಢಪಟ್ಟಿದ್ದು, ದೆಹಲಿಯಲ್ಲಿಯೂ ಸೋಮವಾರ ಹಕ್ಕಿ ಜ್ವರದ ಪ್ರಕರಣ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಉತ್ತರ ದೆಹಲಿ ನಗರ ಪಾಲಿಕೆಯ ಸಾರ್ವಜನಿಕ ಆರೋಗ್ಯಾಧಿಕಾರಿಗಳು ರೆಸ್ಟೊರೆಂಟ್ ಗಳಿಗೆ ಕೋಳಿ ಮಾಂಸ ಮಾರಾಟದ ಕುರಿತಂತೆ ಸೂಚನೆ ಹೊರಡಿಸಿದ್ದಾರೆ. ಮುಂದೆ ಓದಿ...

ಕರಿದ ಕೋಳಿ ಮಾಂಸ ಮಾರದಂತೆ ಸೂಚನೆ
ನವದೆಹಲಿಯಲ್ಲಿ ಸೋಮವಾರ ಹಕ್ಕಿ ಜ್ವರ ದೃಢಪಟ್ಟ ಹಿನ್ನೆಲೆಯಲ್ಲಿ ಉತ್ತರ ದೆಹಲಿ ನಗರ ಪಾಲಿಕೆಯು ಸೋಮವಾರ ಸಭೆ ನಡೆಸಿದ್ದು, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಹಕ್ಕಿ ಜ್ವರ ನಿವಾರಣೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಿ ಉತ್ತರ ದೆಹಲಿಯ ಆರು ವಲಯಗಳಲ್ಲಿ ಮೇಲ್ವಿಚಾರಣಾ ಸಮಿತಿ ರಚನೆ ಹಾಗೂ ಜಾನುವಾರು ಮಾರುಕಟ್ಟೆ ಮೇಲೆ ನಿಗಾ ವಹಿಸಲು ಸಮಿತಿ ರಚನೆಗೆ ತಿರ್ಮಾನಿಸಿರುವುದಾಗಿ ತಿಳಿಸಿದರು.

ಹಕ್ಕಿ ಜ್ವರ ತಗ್ಗುವವರೆಗೂ ನಿಯಮ ಪಾಲಿಸಲು ಮನವಿ
ಪ್ರತಿ ವಾರ್ಡ್ ನ ಸಾರ್ವಜನಿಕ ಆರೋಗ್ಯಾಧಿಕಾರಿಗಳಿಗೆ ವಾರ್ಡ್ ನಲ್ಲಿನ ರೆಸ್ಟೊರೆಂಟ್ ಗಳಿಗೆ ಹಕ್ಕಿ ಜ್ವರದ ಪ್ರಕರಣಗಳು ತಗ್ಗುವವರೆಗೂ ಕರಿದ ಕೋಳಿ ಮಾಂಸವನ್ನು ಮಾರದೇ ಇರುವಂತೆ ಸೂಚಿಸಲು ತಿಳಿಸಿರುವುದಾಗಿ ಮೇಯರ್ ಜೈ ಪ್ರಕಾಶ್ ಮಾಹಿತಿ ನೀಡಿದರು.

ಮಾಂಸವನ್ನು ಸರಿಯಾಗಿ ಬೇಯಿಸಿ ತಿನ್ನುವಂತೆ ಸೂಚನೆ
ಹಕ್ಕಿ ಜ್ವರದ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಜನರಲ್ಲಿ ಆತಂಕ ಸೃಷ್ಟಿಯಾಗಿರುವ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಹೈನುಗಾರಿಕಾ ಸಚಿವ ಗಿರಿರಾಜ್ ಸಿಂಗ್, "ಹಕ್ಕಿ ಜ್ವರದಿಂದ ಜನರು ಆತಂಕ ಪಡುವ ಅಗತ್ಯವಿಲ್ಲ" ಎಂದಿದ್ದಾರೆ. ಜನರು ಆತಂಕ ಪಡುವ ಅಗತ್ಯವಿಲ್ಲ. ಈ ಸೋಂಕಿನ ಕುರಿತು ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ. ಕೋಳಿ ಮಾಂಸ, ಉತ್ಪನ್ನಗಳನ್ನು ಸೂಕ್ತ ರೀತಿ ಬೇಯಿಸಿ ಸೇವಿಸಿದರೆ ಮನುಷ್ಯರಿಗೆ ಯಾವುದೇ ರೀತಿ ತೊಂದರೆ ಇಲ್ಲ ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

ಸಿಎಂಗಳಿಗೆ ಪ್ರಧಾನಿ ಮೋದಿ ಸಲಹೆ
ಕೊರೊನಾ ಲಸಿಕೆ ಸಂಬಂಧಿ ಸೋಮವಾರ ಕರೆದಿದ್ದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಹಕ್ಕಿ ಜ್ವರ ಪ್ರಕರಣಗಳ ಕುರಿತೂ ಪ್ರಸ್ತಾಪಿಸಿದರು. ಇದುವರೆಗೂ ಹತ್ತು ರಾಜ್ಯಗಳಲ್ಲಿ ಹಕ್ಕಿ ಜ್ವರದ ಪ್ರಕರಣಗಳು ಕಂಡುಬಂದಿದ್ದು, ಕೋಳಿ ಸಾಗಣೆ, ಮೃಗಾಲಯ, ನೀರಿನ ಸ್ಥಳಗಳನ್ನು ನಿರಂತರವಾಗಿ ನಿಗಾ ವಹಿಸುವಂತೆ ಸೂಚಿಸಿದರು. ಕೇರಳ, ರಾಜಸ್ಥಾನ, ಹಿಮಾಚಲ ಪ್ರದೇಶ, ಗುಜರಾತ್, ಹರಿಯಾಣ, ಪಂಜಾಬ್, ಉತ್ತರ ಪ್ರದೇಶ, ಮಧ್ಯ ಪ್ರದೇಶ, ದೆಹಲಿ ಹಾಗೂ ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಪ್ರಕರಣ ದೃಢಪಟ್ಟಿರುವುದಾಗಿ ತಿಳಿಸಿದರು.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು












Click it and Unblock the Notifications