ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಎನ್ ಡಿಟಿವಿ
ನವದೆಹಲಿ, ನವೆಂಬರ್ 07: ಎನ್ ಡಿಟಿವಿ ಹಿಂದಿ ಸುದ್ದಿವಾಹಿನಿ ವಿರುದ್ಧ ಒಂದು ದಿನದ ನಿಷೇಧದ ಆದೇಶ ನೀಡಿರುವ ಕೇಂದ್ರ ಸರ್ಕಾರದ ವಿರುದ್ಧ ಎನ್ ಡಿಟಿವಿ ತಿರುಗಿ ನಿಂತಿದೆ. ಕೇಂದ್ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೇಟ್ಟಿಲೇರಿದೆ.
ಸೂಕ್ಷ್ಮ ಹಾಗೂ ಪ್ರಚೋದನಕಾರಿ ಅಂಶಗಳುಳ್ಳ ಸುದ್ದಿಯನ್ನು ಪ್ರಸಾರ ಮಾಡಿರುವ ಹಿನ್ನಲೆಯಲ್ಲಿ ಬುಧವಾರದಂದು ಎನ್ ಡಿಟಿವಿ ಹಿಂದಿ ವಾಹಿನಿ ಒಂದು ದಿನದ ಮಟ್ಟಿಗೆ ಪ್ರಸಾರ ಸ್ಥಗಿತಗೊಳಿಸುವ ಶಿಕ್ಷೆಯನ್ನು ಕೇಂದ್ರ ಸರ್ಕಾರ ವಿಧಿಸಿದೆ. [ಎನ್ ಡಿಟಿವಿಗೆ 24 ಗಂಟೆ ಶಿಕ್ಷೆ: ನಿರ್ಧಾರಕ್ಕೆ ವ್ಯಾಪಕ ಖಂಡನೆ]

ಪಠಾಣ್ ಕೋಟ್ ವಾಯುನೆಲೆಯಲ್ಲಿದ್ದ ಶಸ್ತ್ರಾಸ್ತ್ರಗಳ ದಾಸ್ತಾನು, ಯುದ್ಧ ವಿಮಾನ, ಮಾರ್ಟರ್, ಹೆಲಿಕಾಪ್ಟರ್, ಇಂಧನ ಟ್ಯಾಂಕ್ ಇತ್ಯಾದಿಗಳ ವಿವರಗಳನ್ನು ಎನ್ ಡಿಟಿವಿ ಪ್ರಸಾರ ಮಾಡಿತ್ತು. [NDTV ಮೇಲೆ ಕೇಂದ್ರ ಸರಕಾರದ 'ಸರ್ಜಿಕಲ್ ಸ್ಟ್ರೈಕ್': ಒಂದು ದಿನ ಬ್ಯಾನ್!]
ಜನವರಿ ತಿಂಗಳಿನಲ್ಲಿ ನಡೆದ ಪಠಾಣ್ ಕೋಟ್ ವಿಮಾನ ನಿಲ್ದಾಣ ಬಳಿಯ ದಾಳಿಯ ಬಗ್ಗೆ ಎನ್ ಡಿಟಿವಿ ಇಂಡಿಯಾದ ಹಿಂದಿ ವಾಹಿನಿ ಪ್ರಸಾರ ಮಾಡಿದ್ದ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ.
ಆದರೆ, ಇದೇ ಸುದ್ದಿಯನ್ನು ಎಲ್ಲಾ ವಾಹಿನಿಗಳು ಬೇರೆ ಬೇರೆ ಶೀರ್ಷಿಕೆಯಡಿಯಲ್ಲಿ ಪ್ರಸಾರ ಮಾಡಿರುವಾಗ ಎನ್ ಡಿಟಿವಿಗೆ ಮಾತ್ರ ಶಿಕ್ಷೆ ಏಕೆ ಎಂದು ಎನ್ ಡಿಟಿವಿ ಪ್ರಶ್ನಿಸಿದೆ. 1970ರ ತುರ್ತು ಪರಿಸ್ಥಿತಿ ಸಂದರ್ಭದ ನಂತರ ಇದೇ ಮೊದಲ ಬಾರಿಗೆ ಇಂಥದ್ದೊಂದು ಆದೇಶವನ್ನು ಎದುರಿಸಬೇಕಾಗಿದೆ ಎಂದು ದೇಶದ ಹಲವಾರು ಪತ್ರಕರ್ತರು, ಸಂಪಾದಕರು, ಪ್ರೆಸ್ ಕೌನ್ಸಿಲ್ ಗಳು ಕೇಂದ್ರ ಸರ್ಕಾರದ ಆದೇಶವನ್ನು ಖಂಡಿಸಿವೆ.
ಆದರೆ, ನಿಷೇಧ ಹೇರಿಕೆಯನ್ನು ಸಮರ್ಥಿಸಿಕೊಂಡಿರುವ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ವೆಂಕಯ್ಯ ನಾಯ್ಡು, ದೇಶದ ಸುರಕ್ಷತೆ, ಭದ್ರತಾ ಹಿತದೃಷ್ಟಿಯಿಂದ ಇಂಥ ನಿರ್ಣಯ ಅನಿವಾರ್ಯ ಎಂದಿದ್ದಾರೆ.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications