ವಿದೇಶಕ್ಕೆ ತೆರಳದಂತೆ ಎನ್ಡಿಟಿವಿ ಸಂಸ್ಥಾಪಕರಿಗೆ ನಿರ್ಬಂಧ
ನವದೆಹಲಿ, ಆಗಸ್ಟ್ 10: ವಿದೇಶಕ್ಕೆ ಹೊರಟಿದ್ದ ಎನ್ಡಿಟಿವಿ ಸಹ ಸಂಸ್ಥಾಪಕರಾದ ಪ್ರಣಯ್ ರಾಯ್ ಮತ್ತು ಅವರ ಪತ್ನಿ ರಾಧಿಕಾ ರಾಯ್ ಅವರನ್ನು ವಿದೇಶಕ್ಕೆ ತೆರಳದಂತೆ ಶುಕ್ರವಾರ ರಾತ್ರಿ ಮುಂಬೈ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ.
ಸಿಬಿಐ ಮಾಡಿದ ಮನವಿಯ ಮೇರೆಗೆ ವಿಮಾನ ನಿಲ್ದಾಣದ ಅಧಿಕಾರಿಗಳು ರಾಯ್ ದಂಪತಿಗೆ ವಿದೇಶಕ್ಕೆ ತೆರಳಲು ನಿರ್ಬಂಧ ವಿಧಿಸಿದ್ದಾರೆ ಎನ್ನಲಾಗಿದೆ.
ಸಾಲ ಮರುಪಾವತಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಿಬಿಐ, ಪ್ರಣಯ್ ಮತ್ತು ರಾಧಿಕಾ ಅವರ ವಿರುದ್ಧ ತನಿಖೆ ನಡೆಸುತ್ತಿದೆ.

ಈ ಘಟನೆಯನ್ನು ಖಂಡಿಸಿ ಟ್ವೀಟ್ ಮಾಡಿರುವ ಎನ್ಡಿಟಿವಿ, ಇದು ಮಾಧ್ಯಮ ಸ್ವಾತಂತ್ರ್ಯದ ಸಂಪೂರ್ಣ ಹರಣ ಎಂದು ಆರೋಪಿಸಿದೆ. ಎನ್ಡಿಟಿವಿ ಸಂಸ್ಥಾಪಕರನ್ನು ವಿದೇಶಕ್ಕೆ ತೆರಳದಂತೆ ನಿರ್ಬಂಧಿಸಲಾಗಿದೆ. ಇದು ಮೂಲಭೂತ ಹಕ್ಕುಗಳ ಮೇಲಿನ ಪ್ರಹಾರ ಎಂದು ಅದು ಸರಣಿ ಟ್ವೀಟ್ಗಳಲ್ಲಿ ಆರೋಪಿಸಿದೆ.
ರಾಯ್ ದಂಪತಿ ವಿರುದ್ಧ ಸಿಬಿಐ ಲುಕ್ ಔಟ್ ನೋಟಿಸ್ ಹೊರಡಿಸಿತ್ತು. ಐಸಿಐಸಿಐ ಬ್ಯಾಂಕ್ 48 ಕೋಟಿ ರೂಪಾಯಿ ನಷ್ಟ ಉಂಟಾಗುವಂತೆ ಮಾಡಿದ ಆರೋಪದಲ್ಲಿ 2017ರಲ್ಲಿ ಅವರ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿತ್ತು. ಇಬ್ಬರೂ ಕೀನ್ಯಾದ ನೈರೋಬಿಗೆ ಹೊರಟಿದ್ದರು. ಅವರ ಜತೆ ಇನ್ನೂ ಕೆಲವು ಮಂದಿ ತೆರಳುತ್ತಿದ್ದರು.
ಇಬ್ಬರೂ ಆಗಸ್ಟ್ 15ರಂದು ಭಾರತಕ್ಕೆ ಮರಳಲಿದ್ದರು. ಅದಕ್ಕಾಗಿ ಟಿಕೆಟ್ ಕೂಡ ಬುಕ್ ಮಾಡಿಕೊಂಡಿದ್ದರು. ಸುಳ್ಳು ಮತ್ತು ಆಧಾರ ರಹಿತ ಭ್ರಷ್ಟಾಚಾರ ಆರೋಪ ಪ್ರಕರಣಗಳಲ್ಲಿ ಸಿಬಿಐ ತನಿಖೆ ನಡೆಸುತ್ತಿದ್ದು, ಅದಕ್ಕೆ ಇಬ್ಬರೂ ಸಹಕರಿಸುತ್ತಿದ್ದಾರೆ. ಇಂದಿನ ಕೃತ್ಯ, ಮಾಧ್ಯಮ ಮಾಲೀಕರ ಮೇಲಿನ ದಾಳಿಗಳು ಹೇಳಿದಂತೆ ಕೇಳಬೇಕು, ಇಲ್ಲದಿದ್ದರೆ ಅನುಭವಿಸಬೇಕು ಎಂದು ಮಾಧ್ಯಮಗಳಿಗೆ ಎಚ್ಚರಿಕೆ ನೀಡಿದಂತಿದೆ ಎಂದು ಎನ್ಡಿಟಿವಿ ಆರೋಪಿಸಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications