ಮೀಸಲಾತಿ ಕುರಿತು ಸೌಹಾರ್ದಯುತ ಚರ್ಚೆ ಅಗತ್ಯ: ಮೋಹನ್ ಭಾಗವತ್
ನವದೆಹಲಿ, ಆಗಸ್ಟ್ 19: ಮೀಸಲಾತಿಯ ಪರವಾಗಿರುವವರು ಮತ್ತು ಅದನ್ನು ವಿರೋಧಿಸುವವರ ನಡುವೆ ಸೌಹಾರ್ದಯುತ ವಾತಾವರಣದಲ್ಲಿ ಚರ್ಚೆ ನಡೆಯುವ ಅಗತ್ಯವಿದೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಹೇಳಿದರು.
'ನಾನು ಮೀಸಲಾತಿ ಕುರಿತು ಈ ಹಿಂದೆಯೂ ಹೇಳಿಕೆ ನೀಡಿದ್ದೆ. ಆದರೆ, ಅದು ಸಾಕಷ್ಟು ಗದ್ದಲ ಸೃಷ್ಟಿಸಿತು. ವಾಸ್ತವ ವಿಚಾರದಿಂದ ಚರ್ಚೆ ಬೇರೆಡೆಗೆ ಹೊರಳಿತು. ಮೀಸಲಾತಿಯ ಪರ ವಾದಿಸುತ್ತಿರುವವರು ಅದರ ವಿರುದ್ಧ ಇರುವವರ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಮಾತನಾಡಬೇಕು. ಹಾಗೆಯೇ ಅದನ್ನು ವಿರೋಧಿಸುವವರು ಪರವಾಗಿರುವವರ ಹಿತಾಸಕ್ತಿಗಳನ್ನು ಪರಿಗಣಿಸಬೇಕು' ಎಂದರು.
ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ನಡೆದ 'ಜ್ಞಾನ ಉತ್ಸವ' ಕಾರ್ಯಕ್ರಮದ ಸಮಾರೋಪದಲ್ಲಿ ಮಾತನಾಡಿದ ಅವರು, ಮೀಸಲಾತಿಯ ಕುರಿತು ಚರ್ಚೆಗಳು ಪ್ರತಿಬಾರಿಯೂ ತೀಕ್ಷ್ಣವಾದ ಕ್ರಿಯೆ ಮತ್ತು ಪ್ರತಿಕ್ರಿಯೆಯ ಫಲಿತಾಂಶ ಹೊಂದಿರುತ್ತದೆ. ಈ ವಿಚಾರವಾಗಿ ಸಮಾಜದ ವಿವಿಧ ವರ್ಗಗಳ ನಡುವೆ ಸೌಹಾರ್ದತೆ ಇರಬೇಕಾದ ಅಗತ್ಯವಿದೆ ಎಂದು ಹೇಳಿದರು.

ಮೀಸಲಾತಿ ನೀತಿಯನ್ನು ಪರಾಮರ್ಶೆಗೆ ಒಡ್ಡಬೇಕಾದ ಅಗತ್ಯವಿದೆ ಎಂದು ಈ ಹಿಮದೆ ಭಾಗವತ್ ಹೇಳಿದ್ದರು. ಅದಕ್ಕೆ ವಿವಿಧ ಪಕ್ಷಗಳು ಮತ್ತು ಜಾತಿ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದವು.
ಆರೆಸ್ಸೆಸ್, ಬಿಜೆಪಿ ಮತ್ತು ಪಕ್ಷ ಮುನ್ನಡೆಸುತ್ತಿರುವ ಸರ್ಕಾರ, ಮೂರೂ ವಿಭಿನ್ನ ಸಂಸ್ಥೆಗಳಾಗಿವೆ. ಒಂದು ತೆಗೆದುಕೊಳ್ಳುವ ಕ್ರಮಕ್ಕೆ ಇನ್ನೊಂದನ್ನು ಹೊಣೆಗಾರನನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಭಾಗವತ್ ಹೇಳಿದರು.ನರೇಂದ್ರ ಮೋದಿ ಸರ್ಕಾರದ ಮೇಲೆ ಆರೆಸ್ಸೆಸ್ನ ಪ್ರಭಾವದ ಕುರಿತ ಅಭಿಪ್ರಾಯಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಮತ್ತು ಈ ಸರ್ಕಾರದಲ್ಲಿ ಸಂಘದ ಕಾರ್ಯಕರ್ತರು ಇರುವುದರಿಂದ ಅವರು ಆರೆಸ್ಸೆಸ್ ಅಭಿಪ್ರಾಯ ಕೇಳುತ್ತಾರೆ. ಆದರೆ ಅವರು ನಮ್ಮ ಮಾತನ್ನು ಒಪ್ಪಿಕೊಳ್ಳಬೇಕೆನ್ನುವುದು ಕಡ್ಡಾಯವಲ್ಲ. ಅದಕ್ಕೆ ಅವರು ಅಸಮ್ಮತಿಯನ್ನೂ ವ್ಯಕ್ತಪಡಿಸಬಹುದು ಎಂದರು.
ಒಮ್ಮೆ ಪಕ್ಷವು ಅಧಿಕಾರಕ್ಕೆ ಬಂದಾಗ ಆರೆಸ್ಸೆಸ್ಗೆ ಸರ್ಕಾರ ಮತ್ತು ರಾಷ್ಟ್ರೀಯ ಹಿತಾಸಕ್ತಿ ಆದ್ಯತೆ ಆಗುತ್ತದೆ ಎಂದು ಹೇಳಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications