'ನೆಗಟಿವ್ ಪ್ರಚಾರ ಎಲ್ಲೆ ಮೀರಿದ್ದೇ ಕಾಂಗ್ರೆಸ್ ಸೋಲಿಗೆ ಕಾರಣ'
ನವದೆಹಲಿ, ಮೇ 24: 'ಮೋದಿ ಸರ್ಕಾರದ ಹುಳುಕುಗಳನ್ನು ಜನರ ಮುಂದಿಟ್ಟು, ವೋಟು ಕೇಳುವ ಬದಲು, ಮೋದಿ ವಿರುದ್ಧ ವೈಯಕ್ತಿಕ ನಿಂದನೆ ಮಾಡುವ ಮಟ್ಟಕ್ಕಿಳಿದಿದ್ದು ಕಾಂಗ್ರೆಸ್ ಸೋಲಿಗೆ ಮುಖ್ಯ ಕಾರಣ' ಎಂದು ಕಾಂಗ್ರೆಸ್ ನಾಯಕ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮಗ ಅನಿಲ್ ಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.
ಪುಲ್ವಾಮಾ ಬಗ್ಗೆ ಕಾಂಗ್ರೆಸ್ ನಾಯಕರು ಸಾಕ್ಷಿ ಕೇಳಿದ್ದು ಜನರ ಮನಸ್ಸಿಗೆ ಹಿಡಿಸಲಿಲ್ಲ, ಚುನಾವಣೆ ಎಂದ ಮೇಲೆ, ನೆಗಟಿವ್ ಪ್ರಚಾರ ಇದ್ದಿದ್ದೆ, ಸರ್ಕಾರದ ಹುಳುಕುಗಳನ್ನು ತೋರಿಸುವುದು ವಿರೋಧ ಪಕ್ಷದ ಕರ್ತವ್ಯ, ಆದರೆ, ಇದು ಮಿತಿ ಮೀರಿದ್ದರಿಂದ ರಾಜಸ್ಥಾನ, ಛತ್ತೀಸ್ ಗಢ, ಮಧ್ಯಪ್ರದೇಶದಲ್ಲಿ ಅಧಿಕಾರದಲ್ಲಿದ್ದರೂ ಸಿಂಧಿಯಾ ಅವರು ಗೆಲ್ಲಲಿಲ್ಲ. ಎಲ್ಲಾ ಕಡೆಗಳಲ್ಲೂ ಈ ನಕಾರಾತ್ಮಕ ಧೋರಣೆ ಕಾಂಗ್ರೆಸ್ಸಿಗೆ ಯಶಸ್ಸು ತಂದುಕೊಡಲಿಲ್ಲ ಎಂದಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ನೆಗಟಿವ್ ಪ್ರಚಾರ ಮಾಡುವ ನಿಟ್ಟಿನಲ್ಲಿ 'ಚೌಕಿದಾರ್ ಚೋರ್ ಹೈ' ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪದೇ ಪದೆ ಹೇಳುತ್ತಿದ್ದರು, ಇದು ಜನರು ಒಪ್ಪಿಗೆಯಾಗಲಿಲ್ಲ. ಈ ಕುರಿತಂತೆ ಕೋರ್ಟ್ ಮೆಟ್ಟಿಲೇರಬೇಕಾಯಿತು. ಸಾರ್ವಜನಿಕ ಸಮಸ್ಯೆಗಳನ್ನು ಗುರುತಿಸುವಲ್ಲಿ ಕಾಂಗ್ರೆಸ್ ವಿಫಲವಾಯಿತು. ನ್ಯಾಯ್ ಯೋಜನೆ ಬಗ್ಗೆ ಜನರಿಗೆ ಮನವರಿಕೆ ಮೆಚ್ಚುಗೆಯಾಗುವಷ್ಟರಲ್ಲಿ ಕಾಲ ಮೀರಿತ್ತು.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ವಿಜಯ ಸಾಧಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಸೋಲಿನ ಪರಾಮರ್ಶೆ, ಆತ್ಮಾವಲೋಕನ ನಡೆಯುತ್ತಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications