ನ್ಯಾಯಮೂರ್ತಿಗಳ ನಡುವೆ ಸಂಧಾನ, ವಿವಾದ ಇತ್ಯರ್ಥ
ನವದೆಹಲಿ, ಜನವರಿ 15: ದೇಶದ ಗಮನ ಸೆಳೆದಿದ್ದ ನಾಲ್ವರು ಸುಪ್ರಿಂಕೋರ್ಟ್ ನ್ಯಾಯಮೂರ್ತಿಗಳ ಐತಿಹಾಸಿಕ ಸುದ್ದಿಗೋಷ್ಠಿ ಮತ್ತು ಮುಖ್ಯನ್ಯಾಯಮೂರ್ತಿ ಮೇಲಿನ ಆರೋಪ ವಿವಾದ ಮೂರೇ ದಿನದಲ್ಲಿ ಸುಖಾಂತ್ಯ ಕಂಡಿದೆ.
ಬಂಡಾಯ ಎದ್ದಿದ್ದ ನ್ಯಾಯಮೂರ್ತಿಗಳು ಹಾಗೂ ಮುಖ್ಯನ್ಯಾಯಮೂರ್ತಿ ನಡುವೆ ಸಂಧಾನ ಮಾಡಿರುವ ಬಾರ್ ಕೌನ್ಸಿಲ್ ಆಫ್ ಇಂಡಿಯಾ ನ್ಯಾಯಮೂರ್ತಿಗಳ ನಡುವಿನ ಬಿಕ್ಕಟ್ಟನ್ನು ಶಮನ ಮಾಡಿವೆ.
ಇಂದು ಬೆಳಿಗ್ಗೆ ಬಂಡಾಯ ಎದ್ದಿದ್ದ ನ್ಯಾಯಮೂರ್ತಿ ಚೆಲಮೇಶ್ವರ್, ರಂಜನ್ ಗೊಗೋಯಿ, ಮದನ್ ಲೋಕೂರ್, ಕುರಿಯನ್ ಜೋಸೆಫ್ ಅವರುಗಳು ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ಜೊತೆ ಚಹಾ ಕುಡಿಯುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ.

ಈ ವಿಷಯವನ್ನು ಸುದ್ದಿಗೋಷ್ಠಿ ನಡೆಸಿ ಹಂಚಿಕೊಂಡ ಬಾರ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷ ಮನನ್ ಮಿಶ್ರಾ, ನ್ಯಾಯಮೂರ್ತಿಗಳ ನಡುವಿನ ವಿವಾದ ಬಗೆಹರಿದಿದ್ದು, ನ್ಯಾಯಾಲಯ ಪ್ರಕ್ರಿಯೆ ಸಾಮಾನ್ಯದಂತೆ ನಡೆಯಲಿದೆ ಎಂದಿದ್ದಾರೆ.
ನ್ಯಾಯಾಂಗದ ವಿಷಯದಲ್ಲಿ ಯಾವುದೇ ಮೂರನೇ ವ್ಯಕ್ತಿಗಳು ಮಧ್ಯಪ್ರವೇಶಿಸುವುದು ಒಳ್ಳೆಯದಲ್ಲ, ರಾಜಕಾರಣಿಗಳು ನ್ಯಾಯಾಂಗದಲ್ಲಿ ಹಸ್ತಕ್ಷೇಪ ಮಾಡುವುದು ಸಲ್ಲ ಎಂದ ಅವರು ನ್ಯಾಯಾಂಗದ ಘನತೆಯನ್ನು ಎತ್ತಿ ಹಿಡಿಯುವ ಕಾರ್ಯವನ್ನು ಎಲ್ಲರೂ ಮಾಡಬೇಕಿದೆ ಎಂದಿದ್ದಾರೆ.

ಸಂಧಾನ ವಿಚಾರವಾಗಿ 15 ನ್ಯಾಯಮೂರ್ತಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವ ಬಾರ್ ಕೌನ್ಸಿಲ್, ಮುಖ್ಯನ್ಯಾಯಮೂರ್ತಿಗಳ ವಿರುದ್ಧ ಬಂಡಾಯ ಎದ್ದಿದ್ದ ನಾಲ್ವರು ನ್ಯಾಯಾಧೀಶರನ್ನು ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರೊಂದಿಗೆ ಎದುರು-ಬದುರು ಮಾಡಿಸಿ ಚರ್ಚೆ ಮೂಲಕ ವಿವಾದವನ್ನು ಇತ್ಯರ್ಥಗೊಳಿಸಿದ್ದಾರೆ.
ಸಂಧಾನದ ಬಳಿಕ ಇನ್ನು ಮುಂದೆ ಕೇಸುಗಳ ಹಂಚಿಕೆ ಹೇಗೆ ನಡೆಯಲಿದೆ ಎಂಬ ಕುತೂಹಲ ಇದ್ದು, ರೋಸ್ಟರ್ ಪದ್ಧತಿಯಲ್ಲಿ ಕೇಸುಗಳ ಹಂಚಿಕೆಯಾಗುತ್ತದೆಯೊ ಎಂಬುದು ಗಮನಿಸಬೇಕಾದ ಅಂಶ. ಸುದ್ದಿಗೋಷ್ಠಿ ಕರೆದಿದ್ದ ನ್ಯಾಯಮೂರ್ತಿಗಳು ನ್ಯಾ.ಲೋಯಾ ಅವರ ಸಾವಿನ ತನಿಖೆ ಬಗ್ಗೆ ಅಪಸ್ವರ ಎದ್ದಿದ್ದರು ಆದರೆ ನಿನ್ನೆ ಲೋಯಾ ಕುಟುಂಬದವರೆ 'ಲೋಯಾ ಸಾವಿನ ಬಗ್ಗೆ ಅನುಮಾನವಿಲ್ಲ' ಎಂದಿರುವ ಕಾರಣ ಸಾವಿನ ಮರುತನಿಖೆ ಮಾಡುವ ಸಾಧ್ಯತೆ ಇಲ್ಲ.
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications