ನ್ಯಾಯಮೂರ್ತಿಗಳ ನಡುವೆ ಸಂಧಾನ, ವಿವಾದ ಇತ್ಯರ್ಥ
ನವದೆಹಲಿ, ಜನವರಿ 15: ದೇಶದ ಗಮನ ಸೆಳೆದಿದ್ದ ನಾಲ್ವರು ಸುಪ್ರಿಂಕೋರ್ಟ್ ನ್ಯಾಯಮೂರ್ತಿಗಳ ಐತಿಹಾಸಿಕ ಸುದ್ದಿಗೋಷ್ಠಿ ಮತ್ತು ಮುಖ್ಯನ್ಯಾಯಮೂರ್ತಿ ಮೇಲಿನ ಆರೋಪ ವಿವಾದ ಮೂರೇ ದಿನದಲ್ಲಿ ಸುಖಾಂತ್ಯ ಕಂಡಿದೆ.
ಬಂಡಾಯ ಎದ್ದಿದ್ದ ನ್ಯಾಯಮೂರ್ತಿಗಳು ಹಾಗೂ ಮುಖ್ಯನ್ಯಾಯಮೂರ್ತಿ ನಡುವೆ ಸಂಧಾನ ಮಾಡಿರುವ ಬಾರ್ ಕೌನ್ಸಿಲ್ ಆಫ್ ಇಂಡಿಯಾ ನ್ಯಾಯಮೂರ್ತಿಗಳ ನಡುವಿನ ಬಿಕ್ಕಟ್ಟನ್ನು ಶಮನ ಮಾಡಿವೆ.
ಇಂದು ಬೆಳಿಗ್ಗೆ ಬಂಡಾಯ ಎದ್ದಿದ್ದ ನ್ಯಾಯಮೂರ್ತಿ ಚೆಲಮೇಶ್ವರ್, ರಂಜನ್ ಗೊಗೋಯಿ, ಮದನ್ ಲೋಕೂರ್, ಕುರಿಯನ್ ಜೋಸೆಫ್ ಅವರುಗಳು ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ಜೊತೆ ಚಹಾ ಕುಡಿಯುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ.

ಈ ವಿಷಯವನ್ನು ಸುದ್ದಿಗೋಷ್ಠಿ ನಡೆಸಿ ಹಂಚಿಕೊಂಡ ಬಾರ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷ ಮನನ್ ಮಿಶ್ರಾ, ನ್ಯಾಯಮೂರ್ತಿಗಳ ನಡುವಿನ ವಿವಾದ ಬಗೆಹರಿದಿದ್ದು, ನ್ಯಾಯಾಲಯ ಪ್ರಕ್ರಿಯೆ ಸಾಮಾನ್ಯದಂತೆ ನಡೆಯಲಿದೆ ಎಂದಿದ್ದಾರೆ.
ನ್ಯಾಯಾಂಗದ ವಿಷಯದಲ್ಲಿ ಯಾವುದೇ ಮೂರನೇ ವ್ಯಕ್ತಿಗಳು ಮಧ್ಯಪ್ರವೇಶಿಸುವುದು ಒಳ್ಳೆಯದಲ್ಲ, ರಾಜಕಾರಣಿಗಳು ನ್ಯಾಯಾಂಗದಲ್ಲಿ ಹಸ್ತಕ್ಷೇಪ ಮಾಡುವುದು ಸಲ್ಲ ಎಂದ ಅವರು ನ್ಯಾಯಾಂಗದ ಘನತೆಯನ್ನು ಎತ್ತಿ ಹಿಡಿಯುವ ಕಾರ್ಯವನ್ನು ಎಲ್ಲರೂ ಮಾಡಬೇಕಿದೆ ಎಂದಿದ್ದಾರೆ.

ಸಂಧಾನ ವಿಚಾರವಾಗಿ 15 ನ್ಯಾಯಮೂರ್ತಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವ ಬಾರ್ ಕೌನ್ಸಿಲ್, ಮುಖ್ಯನ್ಯಾಯಮೂರ್ತಿಗಳ ವಿರುದ್ಧ ಬಂಡಾಯ ಎದ್ದಿದ್ದ ನಾಲ್ವರು ನ್ಯಾಯಾಧೀಶರನ್ನು ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರೊಂದಿಗೆ ಎದುರು-ಬದುರು ಮಾಡಿಸಿ ಚರ್ಚೆ ಮೂಲಕ ವಿವಾದವನ್ನು ಇತ್ಯರ್ಥಗೊಳಿಸಿದ್ದಾರೆ.
ಸಂಧಾನದ ಬಳಿಕ ಇನ್ನು ಮುಂದೆ ಕೇಸುಗಳ ಹಂಚಿಕೆ ಹೇಗೆ ನಡೆಯಲಿದೆ ಎಂಬ ಕುತೂಹಲ ಇದ್ದು, ರೋಸ್ಟರ್ ಪದ್ಧತಿಯಲ್ಲಿ ಕೇಸುಗಳ ಹಂಚಿಕೆಯಾಗುತ್ತದೆಯೊ ಎಂಬುದು ಗಮನಿಸಬೇಕಾದ ಅಂಶ. ಸುದ್ದಿಗೋಷ್ಠಿ ಕರೆದಿದ್ದ ನ್ಯಾಯಮೂರ್ತಿಗಳು ನ್ಯಾ.ಲೋಯಾ ಅವರ ಸಾವಿನ ತನಿಖೆ ಬಗ್ಗೆ ಅಪಸ್ವರ ಎದ್ದಿದ್ದರು ಆದರೆ ನಿನ್ನೆ ಲೋಯಾ ಕುಟುಂಬದವರೆ 'ಲೋಯಾ ಸಾವಿನ ಬಗ್ಗೆ ಅನುಮಾನವಿಲ್ಲ' ಎಂದಿರುವ ಕಾರಣ ಸಾವಿನ ಮರುತನಿಖೆ ಮಾಡುವ ಸಾಧ್ಯತೆ ಇಲ್ಲ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications