'ಕಾಶ್ಮೀರದ ಇಂದಿನ ಸಮಸ್ಯೆಗೆ ಕಾರಣ ನೆಹರೂ-ಗಾಂಧಿ, ಅಬ್ದುಲ್ಲಾ ಕುಟುಂಬ!'
ನವದೆಹಲಿ, ಜುಲೈ 22: 'ಕಾಶ್ಮೀರದ ಇಂದಿನ ಎಲ್ಲಾ ಸಮಸ್ಯೆಗಳಿಗೂ ನೆಹರೂ, ಗಾಂಧಿ ಮತ್ತು ಅಬ್ದುಲ್ಲಾ ಕುಟುಂಬವೇ ಕಾರಣ'. ಹಾಗೆಂದು ಗುಡುಗಿದ್ದು ಬಿಜೆಪಿ ಮುಖ್ಯಸ್ಥ ಸುಧಾಂಶು ತ್ರಿವೇದಿ.
'ಬಿಜೆಪಿಗೆ ಕಾಶ್ಮೀರ ಸಮಸ್ಯೆಯನ್ನು ಪರಿಹರಿಸುವುದಕ್ಕೆ ಬರುವುದಿಲ್ಲ. ಅದಕ್ಕಾಗಿ ಮೂರನೆಯವರೊಬ್ಬರ ಮಧ್ಯಸ್ಥಿಕೆಯ ಅವಶ್ಯಕತೆ ಇದೆ' ಎಂಬ ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಮಾತಿಗೆ, ನವದೆಹಲಿಯಲ್ಲಿಂದು (ಜುಲೈ 22) ಪ್ರತಿಕ್ರಿಯೆ ನೀಡಿದ ಸುಧಾಂಶು ತ್ರಿವೇದಿ ಈ ಹೇಳಿಕೆ ನೀಡಿದರು.

'ಫಾರೂಖ್ ಅಬ್ದುಲ್ಲಾ ಅವರು ಕಾಶ್ಮೀರದ ಸಮಸ್ಯೆಗೆ ಆಡಿದ ಮಾತು ಬೇಜವಾಬ್ದಾರಿ ಮತ್ತು ಅರ್ಥವಿಲ್ಲದ್ದು. ಕಾಶ್ಮೀರದಲ್ಲಿ ಇಂದಿಗೂ ಹೊತ್ತಿ ಉರಿಯುತ್ತಿರುವ ಬೆಂಕಿಗೆ ಕಾರಣ ಇದೇ ಅಬ್ದುಲ್ಲಾ ಕುಟುಂಬ ಮತ್ತು ನೆಹರೂ, ಗಾಂಧಿ ಕುಟುಂಬ' ಎಂದು ಅವರು ಅಬ್ದುಲ್ಲಾ ವಿರುದ್ಧ ಹರಿಹಾಯ್ದರು.
ನಿನ್ನೆ (ಜುಲೈ 21) ಕಾಶ್ಮೀರದ ಸಮಸ್ಯೆಯ ಬಗ್ಗೆ ಪತ್ರಕರ್ತರೊಂದಿಗೆ ಮಾತನಾಡಿದ್ದ ನ್ಯಾಶನಲ್ ಕಾನ್ಫರೆನ್ಸ್ ಪಕ್ಷದ ಮುಖ್ಯಸ್ಥ, 79 ವರ್ಷದ ಫಾರೂಖ್ ಅಬ್ದುಲ್ಲಾ, 'ಕಾಶ್ಮೀರದ ಇಂದಿನ ಸ್ಥಿತಿಗೆ ಬಿಜೆಪಿಯೇ ಕಾರಣ, ಅದಕ್ಕೆ ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಸಾಧ್ಯವಾಗುತ್ತಿಲ್ಲ. ಇದಕ್ಕಾಗಿ ಮೂರನೆಯವರ ಮಧ್ಯಸ್ಥಿಕೆಯ ಅಗತ್ಯವಿದೆ' ಎಂದಿದ್ದರು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications