'ಮೋದಿ ಎಂಬ ಚಾಯ್ ವಾಲಾನನ್ನೂ ಪ್ರಧಾನಿ ಮಾಡಿದ್ದು ನೆಹರು!'
Recommended Video

ನವದೆಹಲಿ, ನವೆಂಬರ್ 14: "ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಈ ದೇಶಕ್ಕೊಂದು ಪ್ರಜಾಪ್ರಭುತ್ವದ ಭದ್ರ ತಳಪಾಯ ಹಾಕಿದ್ದರಿಂದಲೇ ಒಬ್ಬ ಚಾಯ್ ವಾಲಾ ನರೇಂದ್ರ ಮೋದಿ ಸಹ ಇಂದು ಪ್ರಧಾನಿಯಾಗುವುದಕ್ಕೆ ಸಾಧ್ಯವಾಗಿದ್ದು" ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಹೇಳಿದ್ದಾರೆ.
ರಾಜಧಾನಿ ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ತಿರುವನಂತಪುರಂ ಸಂಸದ ಶಶಿ ತರೂರ್, ಜವಾಹರಲಾಲ್ ನೆಹರು ಅವರ ಜನ್ಮದಿನ(ನವೆಂಬರ್ 14)ದ ಹಿನ್ನೆಲೆಯಲ್ಲಿ ಅವರ ಗುಣಗಾನ ಮಾಡಿದರು.
"ಇಂದು ನಾವು ಒಬ್ಬ ಚಾಯ್ ವಾಲಾನನ್ನು ಪ್ರಧಾನಿಯಾಗಿ ಪಡೆದಿದ್ದರೆ ಅದಕ್ಕೆ ಕಾರಣ ನೆಹರುಜೀ! ಭಾರತದ ಸಾಂಸ್ಥಿಕ ವ್ಯವಸ್ಥೆಯನ್ನು ಅತ್ಯಂತ ಶಿಸ್ತುಬದ್ಧವಾಗಿ ನಿರ್ಮಿಸಿ, ಒಬ್ಬ ಸಾಮಾನ್ಯ ವ್ಯಕ್ತಿ ಸಹ ಪ್ರಧಾನಿಯಾಗುವಂತೆ ಮಾಡಿದವರು ನೆಹರು" ಎಂದು ತರೂರ್ ಅಭಿಪ್ರಾಯ ಪಟ್ಟರು.

"ಇಂದು ಸರ್ಕಾರ ಮಂಗಳಯಾನವನ್ನು ಕೈಗೊಳ್ಳಲು ಮುಂದಾದರೆ, ಕೇಳಿ ಇಸ್ರೋವನ್ನು ಆರಂಭಿಸಿದ್ದು ಯಾರು? ಬಡ ಭಾರತ ಕೂಡ ಆಕಾಶದಲ್ಲಿ ಹಾರುವಂತೆ ಮಾಡಿದವರು ಯಾರು? ಭಾರತದ ಹಲವು ಬುದ್ಧಿವಂತ ವಿದ್ಯಾರ್ಥಿಗಳನ್ನು ಸೃಷ್ಟಿಸಿದ ಐಐಟಿಯನ್ನು ಆರಂಭಿಸಿದ್ದು ಯಾರು?" ಎಂದು ಶಶಿ ತರೂರ್ ಪ್ರಶ್ನಿಸಿದರು.
"ಇಂದು ಸಾಮಾಜಿಕ ಮಾಧ್ಯಮಗಳಲ್ಲಿ ನೆಹರು ಅವರ ವ್ಯಕ್ತಿತ್ವವನ್ನು ಕೀಳಾಗಿ ಚಿತ್ರಿಸುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿರುವುದು ವಿಷಾದನೀಯ" ಎಂದು ತರೂರ್ ಬೇಸರ ವ್ಯಕ್ತಪಡಿಸಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications