ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತ-ಚೀನಾ ನಡುವೆ ಶಾಂತಿ ಮಂತ್ರ ಜಪಿಸಿದ ನೇಪಾಳ

|
Google Oneindia Kannada News

ದೆಹಲಿ, ಜೂನ್ 20: ಚೀನಾ ಮತ್ತು ಭಾರತ ದೇಶಗಳ ನಡುವೆ ಹುಟ್ಟಿಕೊಂಡಿರುವ ಗಡಿ ವಿವಾದ ಶಾಂತಿಯುತವಾಗಿ ಬಗೆಹರಿಯಲಿದೆ ಎಂದು ನೇಪಾಳ ವಿಶ್ವಾಸ ವ್ಯಕ್ತಪಡಿಸಿದೆ.

Recommended Video

ಕೊರೊನ ಸೋಂಕಿತ MLA ಹೊರಗೆ ಬಂದು ಮತ ಚಲಾಯಿಸಿದ ವಿಚಿತ್ರ ಘಟನೆ | Oneindia Kannada

ಈ ಕುರಿತು ನೇಪಾಳ ಸರ್ಕಾರ ಶನಿವಾರ ಮಾಧ್ಯಮ ಪ್ರಕಟಣೆ ಬಿಡುಗಡೆಗೊಳಿಸಿದ್ದು, ಲಡಾಖ್ ಕಣಿವೆಯ ಗಡಿಗೆ ಸಂಬಂಧಿಸಿದಂತೆ ಚೀನಾ ಮತ್ತು ಭಾರತ ಮಧ್ಯೆ ಉಂಟಾಗಿರುವ ಬಿಕ್ಕಟ್ಟನ್ನು ಶಾಂತಿಯುತ ವಿಧಾನಗಳ ಮೂಲಕ ಪರಿಹರಿಸಲಿದೆ ಎಂದು ಹೇಳಿದೆ.

ನೇಪಾಳದ ವಿವಾದಿತ ನಕ್ಷೆಗೆ ರಾಷ್ಟ್ರಪತಿ ಬಿಧ್ಯಾ ದೇವಿ ಭಂಡಾರಿ ಅಂಕಿತನೇಪಾಳದ ವಿವಾದಿತ ನಕ್ಷೆಗೆ ರಾಷ್ಟ್ರಪತಿ ಬಿಧ್ಯಾ ದೇವಿ ಭಂಡಾರಿ ಅಂಕಿತ

''ನಮ್ಮ ಸ್ನೇಹಪರ ನೆರೆಯ ರಾಷ್ಟ್ರಗಳಾದ ಭಾರತ ಮತ್ತು ಚೀನಾ ಉತ್ತಮ ನೆರೆಹೊರೆಯ ಮನೋಭಾವದಿಂದ, ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ವಿಶ್ವ ಶಾಂತಿ ಮತ್ತು ಸ್ಥಿರತೆಯ ಪರವಾಗಿ ಶಾಂತಿಯುತ ವಿಧಾನಗಳ ಮೂಲಕ ಪರಸ್ಪರ ಭಿನ್ನಾಭಿಪ್ರಾಯಗಳನ್ನು ಪರಿಹರಿಸುತ್ತದೆ ಎಂದು ನೇಪಾಳ ವಿಶ್ವಾಸ ಹೊಂದಿದೆ'' ಎಂದು ಹೇಳಿದೆ.

ಪೂರ್ವ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಸೋಮವಾರ ರಾತ್ರಿ ನಡೆದ ಘರ್ಷಣೆಯಲ್ಲಿ ಕರ್ನಲ್ ಸೇರಿದಂತೆ 20 ಭಾರತೀಯ ಸೇನಾ ಯೋಧರು ಹುತಾತ್ಮರಾಗಿದ್ದರು. ಈ ಘಟನೆ ಬಳಿಕ ಭಾರತ ಮತ್ತು ಚೀನಾ ಗಡಿಯಲ್ಲಿ ಪರಿಸ್ಥಿತಿ ಹದಗೆಟ್ಟಿತ್ತು.

Nepal Is Confident That India & China Will Resolve Problem In Peaceful Means

ಭಾರತ ಮತ್ತು ನೇಪಾಳ ಗಡಿಯಲ್ಲಿರುವ ಲಿಪುಲೇಖ್, ಕಲಪನಿ, ಹಾಗೂ ಲಿಂಪಿಯಾಧುರ ಭೂಪ್ರದೇಶಗಳನ್ನೂ ಒಳಗೊಂಡಂತೆ ಭೂಪಟವನ್ನು ನೇಪಾಳ ಸಿದ್ದಪಡಿಸಿದೆ. ಇದಕ್ಕೆ ಭಾರತ ವಿರೋಧ ವ್ಯಕ್ತಪಡಿಸಿತ್ತು. ಈ ನಡುವೆ ನೇಪಾಳದ ಬೌಗೋಳಿಕ ಮತ್ತು ರಾಜಕೀಯ ಭೂಪಟವನ್ನು ಮಾರ್ಪಡಿಸುವ ಮಸೂದೆಯನ್ನು ಅಲ್ಲಿನ ಸಂಸತ್‌ನಲ್ಲಿ ಸರ್ಕಾರ ಅನುಮೋದಿಸಿದೆ.

English summary
Nepal is confident that our friendly neighbours India & China will resolve, in the spirit of good neighbourliness, their mutual differences through peaceful means in favour of bilateral, regional & world peace and stability: Govt of Nepal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X