ನೇತಾಜಿ ಸಾವಿನ ನಿಗೂಢತೆಗೆ ಇನ್ನೂ ಅಂತ್ಯ ಸಿಕ್ಕಿಲ್ಲ!
ಇದ್ದಕ್ಕಿದ್ದಂತೆಯೇ ಯೂಟರ್ನ್ ತೆಗೆದುಕೊಂಡಿರುವ ಕೇಂದ್ರ ಗೃಹ ಸಚಿವಾಲಯ, ನೇತಾಜಿ ಸಾವಿನ ಕುರಿತು ಆರ್ ಟಿ ಐ ಅರ್ಜಿಗೆ ನೀಡಿದ ಪ್ರತಿಕ್ರಿಯೆಯಲ್ಲಿ ಮುದ್ರಣ ದೋಷವಿದೆ ಎಂಬ ಹೊಸ ಬಾಂಬ್ ಸಿಡಿಸಿದೆ.
ನವದೆಹಲಿ, ಜೂನ್ 03: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು 1945 ರಲ್ಲಿ ನಡೆದ ವಿಮಾನ ಅಪಘಾತದಲ್ಲೇ ಅಸುನಿಗಿದ್ದರು ಎಂದು ಕೇಂದ್ರ ಸರ್ಕಾರ ಮಾಹಿತಿ ಹಕ್ಕು ಕಾಯ್ದೆಯನ್ವಯ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಗೆ ಉತ್ತರಿಸಿತ್ತು ಎಂದು ಸುದ್ದಿಯಾಗಿತ್ತು.
ಆದರೆ ಇದೀಗ ಇದ್ದಕ್ಕಿದ್ದಂತೆಯೇ ಯೂಟರ್ನ್ ತೆಗೆದುಕೊಂಡಿರುವ ಕೇಂದ್ರ ಗೃಹ ಸಚಿವಾಲಯ, ನೇತಾಜಿ ಸಾವಿನ ಕುರಿತು ಆರ್ ಟಿ ಐ ಅರ್ಜಿಗೆ ನೀಡಿದ ಪ್ರತಿಕ್ರಿಯೆಯಲ್ಲಿ ಮುದ್ರಣ ದೋಷವಿದೆ ಎಂಬ ಹೊಸ ಬಾಂಬ್ ಸಿಡಿಸಿದೆ.[ನೇತಾಜಿ ಸಾವಿನ ನಿಗೂಢತೆಗೆ ತೆರೆ ಎಳೆದ ಕೇಂದ್ರ ಸರ್ಕಾರ]

ನೇತಾಜಿ ಸಾವಿನ ಕುರಿತು ತನಿಖೆ ನಡೆಸುವುದಕ್ಕಾಗಿ ರಚಿಸಿದ್ದ ಶಾ ನವಾಜ್ ಸಮಿತಿ, ನ್ಯಾ.ಜೆ.ಡಿ.ಕೋಸ್ಲಾ ಸಮಿತಿ ಮತ್ತು ನ್ಯಾ. ಮುಖರ್ಜಿ ಸಮಿತಿ ನಡೆಸಿದ ತನಿಖೆಯ ವರದಿಯನ್ನು ಗಮನಿಸಿದ ಕೇಂದ್ರ ಸರ್ಕಾರ ನೇತಾಜಿ ಅಸುನೀಗಿದ್ದು ವಿಮಾನಾಪಘಾತದಲ್ಲೇ 'ಎಂದಿತ್ತು' ಎನ್ನುವ ಬದಲು ಆರ್ ಟಿ ಐ ಪ್ರತಿಕ್ರಿಯೆಯಲ್ಲಿ 'ಎಂದಿದೆ' ಎಂದು ಮುದ್ರಿಸಲಾಗಿದ್ದು, ಈ ಮಾತು ವರ್ತಮಾನಕಾಲವನ್ನು ಸೂಚಿಸುವಂತಿದೆ.
ಆದರೆ ಹಾಲಿ ಗೃಹಸಚಿವಾಲಯ, 2006 ರಲ್ಲಿ ಸರ್ಕಾರ ನೇತಾಜಿ ಸಾವಿನ ಊಹಾಪೋಹಗಳಿಗೆ ಈ ರೀತಿ ಉಪಸಂಹಾರ ನೀಡಿತ್ತು ಎಂದಷ್ಟೇ ಹೇಳಿದೆಯೇ ಹೊರತು, ತನ್ನ ತೀರ್ಮಾನವನ್ನು ಇನ್ನೂ ಹೇಳಿಲ್ಲ ಎಂದು ಇದೀಗ ಸ್ಪಷ್ಟಪಡಿಸಿದೆ.
ನೇತಾಜಿ ಸಾವಿನ ಕುರಿತು ಮಾಹಿತಿ ಹಕ್ಕು ಕಾಯ್ದೆಯಡಿ ಸಾಯಕ್ ಸೇನ್ ಎನ್ನುವವರು ಅರ್ಜಿ ಸಲ್ಲಿಸಿದ್ದರು. ಉತ್ತರ ಪ್ರದೇಶದಲ್ಲಿ 1985 ರವರೆಗೂ ಬದುಕಿದ್ದ ಗುಮ್ನಾಮಿಬಾಬಾ ಅಥವಾ ಭಗವಾನ್ ಜಿಯೇ ಸುಭಾಷ್ ಚಂದ್ರ ಬೋಸ್ ಎಂದು ಹಲವು ವದಂತಿಗಳು ಹಬ್ಬಿದ್ದವು. ಈ ಕುರಿತೂ ಸಾಯಕ್ ಸೇನ್ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.
ಕೇಂದ್ರ ಸರ್ಕಾರದ ಈ ದ್ವಂದ್ವ ತೀರ್ಮಾನದ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದ್ದು, ಗೃಹಸಚಿವಾಲಯದ ಈ ಹೇಳಿಕೆಯಿಂದಾಗಿ ನೇತಾಜಿ ಸಾವಿನ ನಿಗೂಢತೆ ಮತ್ತಷ್ಟು ಜಟಿಲವಾದಂತಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications