ನರೇಂದ್ರ ಮೋದಿ ವಿರುದ್ಧ ಅಯ್ಯರ್ ಪರೋಕ್ಷ ವಾಕ್ಸಮರ
ದೆಹಲಿ, ಆಗಸ್ಟ್ 11: "ಮುಸ್ಲಿಮರನ್ನು ನಾಯಿಮರಿಗೆ ಹೋಲಿಸಿದ್ದ ಮುಖ್ಯಮಂತ್ರಿಯೊಬ್ಬರು ಪ್ರಧಾನಿಯಾಗುತ್ತಾರೆ ಎಂದು ನಾನು ಅಂದುಕೊಂಡಿರಲಿಲ್ಲ" ಎಂದು ಕಾಂಗ್ರೆಸ್ಸಿನ ಉಚ್ಛಾಟಿತ ನಾಯಕ ಮಣಿಶಂಕರ್ ಅಯ್ಯರ್ ಹೇಳಿದ್ದಾರೆ.
ದೆಹಲಿಯಲ್ಲಿ 'ಎನಫ್ ವಿತ್ ಇಂಟಾಲರೆನ್ಸ್ ನ್ಯಾಶ್ನಲ್ ಕ್ಯಾಂಪೇನ್'ನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅಯ್ಯರ್, '2014 ಕ್ಕೂ ಮೊದಲು ಮುಸ್ಲಿಮರನ್ನು ನಾಯಿಮರಿ ಎಂದಿದ್ದ ಮುಖ್ಯಮಂತ್ರಿಯೊಬ್ಬರು ಭಾರತದ ಪ್ರಧಾನಿಯಾಗುತ್ತಾರೆ ಎಂದು ನಾನು ಭಾವಿಸಿರಲಿಲ್ಲ. 2002 ರ ಗಲಭೆಯಲ್ಲಿ ಹಲವು ಮುಸ್ಲಿಮರು ತಮ್ಮ ಪ್ರಾಣ ಕಳೆದುಕೊಂಡಿದ್ದಕ್ಕೆ ನಿಮಗೆ ಪಶ್ಚಾತ್ತಾಪವಿಲ್ಲವೇ ಎಂದು ಪ್ರಶ್ನಿಸಿದಾಗ, 'ನನ್ನ ಕಾರ ಹತ್ತಿರ ಒಂದು ನಾಯಿಮರಿ ಸಿಲುಕಿಕೊಂಡರೂ ನನಗೆ ನೋವಾಗುತ್ತದೆ' ಎಂದು ಒಬ್ಬರು ಉತ್ತರಿಸಿದ್ದರು. ಆದರೆ ಅವರು ಈ ಗಲಭೆಯಾದ ಎಷ್ಟೋ ದಿನದವರೆಗೆ ಮುಸ್ಲಿಂ ಸಂತ್ರಸ್ಥ ಕೇಂದ್ರಗಳಿಗೆ ಭೇಟಿ ನೀಡಿರಲಿಲ್ಲ. ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಂತ್ರಸ್ಥ ಕೇಂದ್ರಗಳಿಗೆ ಭೇಟಿ ನೀಡಿದಾಗ ಶಿಷ್ಟಾಚಾರ ಪಾಲಿಸುವುದಕ್ಕಾಗಿ ಇವರೂ ಅಲ್ಲಿಗೆ ಬಂದಿದ್ದರು' ಎಂದು ಪರೋಕ್ಷವಾಗಿ ಪ್ರಧಾನಿ ಮೋದಿ ಅವರಿಗೆ ಮಾತಿನ ಚಾಟಿ ನೀಡಿದ್ದಾರೆ.
'ನನಗೆ ಈ ಸಮಯದಲ್ಲಿ ನಮ್ಮ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರು ನೆನಪಾಗುತ್ತಾರೆ. ಅವರು ಜಾತ್ಯತೀತ ತತ್ತ್ವದಲ್ಲಿ ನಂಬಿಕೆ ಇಟ್ಟವರಾಗಿದ್ದರು. ಅಲ್ಪಸಂಖ್ಯಾತರ ಕೋಮುವಾದಕ್ಕಿಂತ, ಬಹುಸಂಖ್ಯಾತ ಕೋಮುವಾದ ಹೆಚ್ಚು ಅಪಾಯಕಾರಿ ಎಂದು ಅವರು ಹೇಳುತ್ತಿದ್ದರು. ಅವರ ಮಾತು ನನಗೆ ಈಗ ಅರ್ಥವಾಗುತ್ತಿದೆ. ನನಗೆ ಹಿಂದುಗಳ, ಬೌದ್ಧರ, ಜೈನರ, ಕ್ರೈಸ್ತರ ಮೇಲೆ ಹೆಮ್ಮೆ ಇದೆ. ಹಾಗೆಯೇ ಮುಸ್ಲಿಮರ ಮೇಲೆ ಮತ್ತಷ್ಟು ಹೆಮ್ಮೆ ಇದೆ. ಅವರು 666 ವರ್ಷಗಳಿಂದ ದೆಹಲಿಯಲ್ಲಿ ಕೂತು ಈ ದೇಶವನ್ನು ಆಳಿದ್ದಾರೆ. ಮುಸ್ಲಿಮರು ಭಾರತವನ್ನು ಆಳಿದರೂ ನಾವು ದೊಡ್ಡ ದೇಶವಾಗಿಯೇ ಉಳಿದಿದ್ದೇವೆ' ಎಂದು ಅವರು ಮುಸ್ಲಿಂ ದೊರೆಗಳನ್ನು ಶ್ಲಾಘಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ನೀಚ' ಎಂಬ ಪದಬಳಕೆ ಮಾಡಿದ್ದರಿಂದ ಮಾಜಿ ಕೇಂದ್ರ ಸಚಿವ ಅಯ್ಯರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿತ್ತು.
-
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications