ದೆಹಲಿ - ಆಗ್ರಾ ಶತಾಬ್ದಿ ಎಕ್ಸ್ ಪ್ರೆಸ್ ರೈಲಿನಲ್ಲೊಂದು ವಿಲಕ್ಷಣ ಘಟನೆ
ನವದೆಹಲಿ, ಜುಲೈ 3: ನವದೆಹಲಿ - ಆಗ್ರಾ - ಹಬೀಬ್ ಗಂಜ್ ಶತಾಬ್ದಿ ಎಕ್ಸ್ ಪ್ರೆಸ್ ರೈಲಿನ ಪ್ರಯಾಣಿಕರು ವಿಲಕ್ಷಣ ಘಟನೆಯೊಂದಕ್ಕೆ ಸಾಕ್ಷಿಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕಳೆದ ಭಾನುವಾರ (ಜೂ 30) ನವದೆಹಲಿ ನಿಲ್ದಾಣದಿಂದ 32ವರ್ಷದ ಮನೀಶ್ ಅರೋರಾ ಎನ್ನುವ ವ್ಯಕ್ತಿ, ತನ್ನ ತಾಯಿಯೊಂದಿಗೆ ಈ ರೈಲಿನಲ್ಲಿ ಪ್ರಯಾಣಿಸುತ್ತಿದ್ದ. ಮಥುರಾ ಜಂಕ್ಷನ್ ನಲ್ಲಿ ಇವರಿಬ್ಬರು ಇಳಿಯಬೇಕಾಗಿತ್ತು.
ದೆಹಲಿ ನಿಲ್ದಾಣದಿಂದ ಹೊರಟ ಕೂಡಲೇ ತಾಯಿಗೆ ಬೆಳಗ್ಗಿನ ತಿಂಡಿಯನ್ನು ಈತ ನೀಡಿದ್ದ. ಆದರೆ, ಮಥುರಾ ನಿಲ್ದಾಣ ಬಂದರೂ ತಾಯಿ ತಿಂಡಿ ತಿಂದು ಮುಗಿಸಿರಲಿಲ್ಲ. ಆದರೆ, ಅಷ್ಟೊತ್ತಿಗೆ ಮಥುರಾ ನಿಲ್ದಾಣದಿಂದ ಹೊರಡಲು ರೈಲಿನ ಸೈರನ್ ಮೊಳಗಲಾರಂಭಿಸಿತು.

ತಾಯಿಯ ತಿಂಡಿ ತಿಂದು ಇನ್ನೂ ಮುಗಿಸಲಿಲ್ಲ ಎನ್ನುವ ಕಾರಣಕ್ಕಾಗಿ ರೈಲಿನ ಚೈನ್ ಅನ್ನು ಎಳೆದು ಈತ ಟ್ರೈನ್ ಅನ್ನು ನಿಲ್ಲಿಸಿದ್ದಾನೆ. ಸ್ಥಳಕ್ಕೆ ಕೂಡಲೇ ಆಗಮಿಸಿದ ರೈಲ್ವೆ ಅಧಿಕಾರಿಗಳು ಮತ್ತು ಪೊಲೀಸರು ಈತನನ್ನು ವಿಚಾರಿಸಿದಾಗ, ತಾಯಿಯ ತಿಂಡಿ ತಿಂದು ಮುಗಿದಿಲ್ಲ ಎನ್ನುವ ಕಾರಣಕ್ಕಾಗಿ ಚೈನ್ ಎಳೆದೆ ಎಂದು ಹೇಳಿದ್ದಾನೆ.
ರೈಲ್ವೆ ಪೊಲೀಸರು ಈತನನ್ನು ಬಂಧಿಸಿ, ಮ್ಯಾಜಿಸ್ಟ್ರೇಟರ್ ಮುಂದೆ ಹಾಜರು ಪಡಿಸಿ, ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಅರೋರಾ, ನವದೆಹಲಿಯ ಯಮುನ ವಿಹಾರಿ ನಿವಾಸಿಯಾಗಿದ್ದು, ಕೋರ್ಟ್ ನಿಗದಿ ಪಡಿಸಿದ ದಿನಾಂಕದಂದು ಹಾಜರಾಗುವಂತೆ ಸೂಚಿಸಲಾಗಿದೆ.
ಕ್ಷುಲ್ಲಕ ಕಾರಣಕ್ಕಾಗಿ ಚೈನ್ ಎಳೆಯುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು, ಆಗ್ರಾ ರೈಲ್ವೆ ನಿಲ್ದಾಣ ಒಂದರಲ್ಲೇ ಇದುವರೆಗೆ ಸುಮಾರು ಆರು ಲಕ್ಷ ದಂಡ ಸಂಗ್ರಹಿಸಲಾಗಿದೆ
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications