ನಿರ್ಭಯ ದೆಹಲಿ ಗ್ಯಾಂಗ್ ರೇಪ್ ಅಪರಾಧಿಗಳಿಗೆ ಡಬಲ್ ಶಿಕ್ಷೆ
ನವದೆಹಲಿ, ಸೆ, 03 : ನಿರ್ಭಯಾ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಒಳಪಟ್ಟ ನಾಲ್ಕು ಮಂದಿ ಅಪರಾಧಿಗಳು ಎಸಗಿದ್ದ ಮತ್ತೊಂದು ದುಷ್ಕೃತ್ಯಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಜೈಲುವಾಸ ವಿಧಿಸಿದೆ.
ವಿನಯ್ ಶರ್ಮ, ಅಕ್ಷಯ್ ಠಾಕೂರ್, ಮುಖೇಶ್ ಮತ್ತು ಪವನ್ ಗುಪ್ತಾ ಈ ನಾಲ್ವರು ಅತ್ಯಾಚಾರ ಪ್ರಕರಣದ ಜೊತೆ ದರೋಡೆ ಮತ್ತು ಅಪಹರಣ ಪ್ರಕರಣ ಎದುರಿಸುತ್ತಿದ್ದರು. ಅದು ಸಾಬೀತಾಗಿದ್ದು, ಈ ನಾಲ್ವರು ದುಷ್ಕರ್ಮಿಗಳಿಗೆ ನ್ಯಾಯಾಲಯ ಬುಧವಾರ 10 ವರ್ಷ ಸೆರೆವಾಸ ಪ್ರಕಟಿಸಿದೆ.[ಅತ್ಯಾಚಾರಿ ಪರ ಲಾಯರ್ ಹುಚ್ಚುಚ್ಚು ಹೇಳಿಕೆಗಳು!]

ಈ ಮೊದಲೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ರಿತೇಶ್ ಸಿಂಗ್ ಆಗಸ್ಟ್ 27ರ ತೀರ್ಪಿನಲ್ಲಿ ಈ ನಾಲ್ವರನ್ನು ಅಪರಾಧಿಗಳು ಎಂದು ಘೋಷಿಸಿದ್ದರು. ಇವರಿಗೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ದೆಹಲಿ ಹೈಕೋರ್ಟ್ ಗಲ್ಲು ಶಿಕ್ಷೆ ಪ್ರಕಟಿಸಿತ್ತು. ಇದೀಗ ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಏನಿದು ಪ್ರಕರಣ :
2012ರ ಡಿಸೆಂಬರ್ 16 ರಂದು 23 ವರ್ಷ ವಯಸ್ಸಿನ ಫಿಜಿಯೋಥೆರಪಿಸ್ಟ್ ವಿದ್ಯಾರ್ಥಿನಿ ಮೇಲೆ ಆರು ಜನರಿಂದ ಅತ್ಯಾಚಾರ ನಡೆದಿದ್ದು, ಆಕೆ ಚಿಕಿತ್ಸೆಗೆ ಸ್ಪಂದಿಸದೆ ಸಿಂಗಾಪುರದ ಎಲಿಜಬೆತ್ ಆಸ್ಪತ್ರೆಯಲ್ಲಿ ಡಿಸೆಂಬರ್ 29ರಂದು ಸಾವನ್ನಪ್ಪಿದ್ದಳು. ಅತ್ಯಾಚಾರ ಖಂಡಿಸಿ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ನಡೆದವು.[ಗಲ್ಲು ಶಿಕ್ಷೆ ಪ್ರಕಟಿಸಿದ ನ್ಯಾ. ಯೋಗೇಶ್ ಹೇಳಿದ್ದೇನು?]
ಈ ಆರು ಮಂದಿ ಅಪರಾಧಿಗಳು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗುವ ಮುನ್ನ ರಾಮ್ ಆಧಾರ್ ಎಂಬ ಬಡಗಿಯ ಮೇಲೆ ದಾಳಿ ನಡೆಸಿ ಆತನಿಂದ 1,500 ನಗದು ಹಾಗೂ ಮೊಬೈಲ್ ನ್ನು ಅಪಹರಿಸಿದ್ದರು.
ಬಳಿಕ ಬಡಗಿ ರಾಮ್ ಆಧಾರ್ ನೀಡಿದ ದೂರನ್ನು ಪರಿಶೀಲಿಸಿದ ದೆಹಲಿ ಪೊಲೀಸರು 2013ರ ಮಾರ್ಚ್ 15ರಂದು ದರೋಡೆ ಪ್ರಕರಣದ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications