ವಾಷಿಂಗ್ ಮಷಿನ್ ನಲ್ಲಿ ಮುಳುಗಿ ಅವಳಿ ಹಸುಳೆ ದುರ್ಮರಣ
ಹೆತ್ತ ತಾಯಿಯ ನಿರ್ಲಕ್ಷ್ಯವೋ, ದುರ್ವಿಧಿಯೋ ಮೂರು ವರ್ಷ ವಯಸ್ಸಿನ ಅವಳಿ ಮಕ್ಕಳು ನೀರಿನಲ್ಲಿ ಮುಳುಗಿ ದುರಂತ ಸಾವಿಗೀಡಾಗಿರುವ ಘಟನೆ ನಡೆದಿದೆ.
ನವದೆಹಲಿ, ಫೆಬ್ರವರಿ 26: ಹೆತ್ತ ತಾಯಿಯ ನಿರ್ಲಕ್ಷ್ಯವೋ, ದುರ್ವಿಧಿಯೋ ಮೂರು ವರ್ಷ ವಯಸ್ಸಿನ ಅವಳಿ ಮಕ್ಕಳು ದುರಂತ ಸಾವಿಗೀಡಾಗಿರುವ ಘಟನೆ ನಡೆದಿದೆ.
ದೆಹಲಿಯ ರೋಹಿಣಿ ಪ್ರದೇಶದ ಸೆಕ್ಟರ್ 1ನಲ್ಲಿರುವ ಅವಂತಿಕಾ ಅಪಾರ್ಟ್ಮೆಂಟ್ ನಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ವಾಷಿಂಗ್ ಪೌಡರ್ ತರಲು ತಾಯಿ ಅಂಗಡಿಗೆ ಹೋಗಿದ್ದ ಸಂದರ್ಭದಲ್ಲಿ ನೀರು ತುಂಬಿಕೊಂಡಿದ್ದ ವಾಷಿಂಗ್ ಮಷಿನೊಳಗೆ ಇಬ್ಬರು ಮಕ್ಕಳು ಇಳಿದು ಮೃತಪಟ್ಟಿದ್ದಾರೆ.

ಸುಮಾರು 12 ರಿಂದ 15 ಲೀಟರ್ ನೀರಿತ್ತು. ಮಷಿನ್ ನೊಳಗೆ ಹೇಗೆ ಸೇರಿಕೊಂಡರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ, ತನಿಖೆ ನಡೆಸಲಾಗುತ್ತದೆ ಎಂದು ಡಿಸಿಪಿ ಎಂಎನ್ ತಿವಾರಿ ಹೇಳಿದ್ದಾರೆ.
ವಾಷಿಂಗ್ ಪೌಡರ್ ತಂದ ಬಳಿಕ ಮಕ್ಕಳನ್ನು ಕಾಣದೆ ಕಂಗಾಲಾದ ತಾಯಿ ರಾಖಿ ಅವರು ತಮ್ಮ ಪತಿಗೆ ಕರೆ ಮಾಡಿದ್ದಾರೆ. ಕೋಟಕ್ ಮಹೇಂದ್ರ ಕಂಪನಿಯ ಉದ್ಯೋಗಿಯಾಗಿರುವ ರವೀಂದರ್ ಅವರು ತಕ್ಷಣವೇ ಮನೆಗೆ ಧಾವಿಸಿ ಬಂದಿದ್ದಾರೆ. ನೆರೆಮನೆಯವರ ಸಲಹೆಯಂತೆ ಪೊಲೀಸರ ನೆರವು ಕೋರಿದ್ದಾರೆ.
ನಿಶಾಂತ್ ಮತ್ತು ನಕ್ಷ್ಯ ಎಂಬ ಇಬ್ಬರು ಅವಳಿ ಮಕ್ಕಳನ್ನು ಹುಡುಕಲು ಆರಂಭಿಸಿದವರಿಗೆ ಆಘಾತ ಎದುರಾಗಿದೆ. ಇಬ್ಬರು ಮಕ್ಕಳು ವಾಷಿಂಗ್ ಮಷಿನ್ ನ ನೀರಿನಲ್ಲಿ ಕಂಡು ಬಂದಿದ್ದಾರೆ. ಮಕ್ಕಳನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಆದರೆ, ದುಃಖತಪ್ತ ತಂದೆ, ಅಲ್ಲಿಂದ ಜೈಪುರ್ ಗೋಲ್ಡ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲೂ ಕೂಡಾ ಮಕ್ಕಳು ಬದುಕಿಲ್ಲ ಎಂಬುದು ದೃಢಪಟ್ಟಾಗ ಬರಸಿಡಿಲು ಬಡಿದಂತಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications