ನೋಟುಗಳಿಗೆ ಹೊಸ ಭದ್ರತಾ ಅಂಶ: ಕೇಂದ್ರ ಸರ್ಕಾರ ಆಶ್ವಾಸನೆ
ನೋಟು ಮುದ್ರಣಾಲಯಗಳಲ್ಲಿ ಬಳಸಲಾಗುತ್ತಿರುವ ನೋಟುಗಳ ಭದ್ರತಾ ಅಂಶಗಳನ್ನು 2005ರಲ್ಲಿ ಸಿದ್ಧಪಡಿಸಲಾಗಿತ್ತು. ಆನಂತರ, ಆ ಅಂಶಗಳಲ್ಲಿ ಯಾವುದೇ ಪರಿಷ್ಕರಣೆಯಾಗಿರಲಿಲ್ಲ.
ನವದೆಹಲಿ, ಏಪ್ರಿಲ್ 3: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ವತಿಯಿಂದ ಬಿಡುಗಡೆಗೊಂಡಿರುವ ಹೊಸ 500 ಹಾಗೂ 2000 ರು. ನೋಟುಗಳ ಭದ್ರತಾ ಅಂಶಗಳನ್ನು ಪಾಕಿಸ್ತಾನದಲ್ಲಿ ನಕಲು ಮಾಡಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ತಯಾರಿಸಲಾಗುವ ನೋಟುಗಳಿಗೆ ಹೊಸ ಭದ್ರತಾ ಅಂಶಗಳನ್ನು ಅಳವಡಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.
ಸದ್ಯಕ್ಕೆ, ನೋಟು ಮುದ್ರಣಾಲಯಗಳಲ್ಲಿ ಬಳಸಲಾಗುತ್ತಿರುವ ನೋಟುಗಳ ಭದ್ರತಾ ಅಂಶಗಳನ್ನು 2005ರಲ್ಲಿ ಸಿದ್ಧಪಡಿಸಲಾಗಿತ್ತು. ಆನಂತರ, ಆ ಅಂಶಗಳಲ್ಲಿ ಯಾವುದೇ ಪರಿಷ್ಕರಣೆಯಾಗಿರಲಿಲ್ಲ.[ಕಾಶ್ಮೀರದ ಉಗ್ರರು, ಯುವಕರಿಗೆ ಪಾಕ್ ಕಡೆಯಿಂದ ನೇರ ಸೂಚನೆ!]

ಕೇಂದ್ರ ಸರ್ಕಾರವು ಕಳೆದ ವರ್ಷ ನವೆಂಬರ್ 8ರಂದು ಅಪನಗದೀಕರಣ ನಿರ್ಧಾರವನ್ನು ಏಕಾಏಕಿ ಕೈಗೊಂಡ ಹಿನ್ನೆಲೆಯಲ್ಲಿ, ಭಾರತೀಯ ರಿಸರ್ವ ಬ್ಯಾಂಕ್ ನ ತಜ್ಞರಿಗೆ ಸಮಯದ ಅಭಾವ ತಲೆದೋರಿ, ಹೊಸ 500, 1000 ರು. ನೋಟುಗಳಿಗೆ ಹೊಸ ಭದ್ರತಾ ಅಂಶಗಳನ್ನು ಅಳವಡಿಸಲು ಸಾಧ್ಯವಾಗಿರಲಿಲ್ಲ.
ಹಾಗಾಗಿ, 2005ರಿಂದಲೂ ಚಾಲ್ತಿಯಲ್ಲಿದ್ದ ಭದ್ರತಾ ಅಂಶಗಳನ್ನು ಆಧರಿಸಿಯೇ ಹೊಸ ನೋಟುಗಳನ್ನು ಮುದ್ರಿಸಲಾಯಿತು. ಆದರೆ, ಇದರಿಂದಾಗಿ, 2005ರ ಭದ್ರತಾ ಅಂಶಗಳನ್ನು ಕೆಲ ವರ್ಷಗಳ ಹಿಂದೆಯೇ ತನ್ನಲ್ಲಿ ನಕಲು ಮಾಡಿಟ್ಟುಕೊಂಡಿದ್ದ ಪಾಕಿಸ್ತಾನಕ್ಕೆ ಹೊಸ ನೋಟುಗಳನ್ನು ಬೇಗನೇ ನಕಲು ಮಾಡುವುದು ಸಾಧ್ಯವಾಯಿತು.[ಕೇರಳದ ISIS ಸಹ ಸಂಸ್ಥೆಯಿಂದ ನ್ಯಾಯಾಧೀಶರ ಹತ್ಯೆಗೆ ಸಂಚು!]
ಅಪನಗದೀಕರಣ ನಿರ್ಧಾರದ ನಂತರದ ಮೂರು ತಿಂಗಳ ಅವಧಿಯಲ್ಲಿ ಭಾರತದಲ್ಲಿ ಸುಮಾರು 2 ಸಾವಿರ ರು. ಮುಖಬೆಲೆಯ ಸುಮಾರು 3,346 ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ, ಶೀಘ್ರದಲ್ಲೇ ಹೊಸ ಭದ್ರತಾ ಅಂಶಗಳನ್ನು ಅಳವಡಿಸಲಾಗುವುದು ಎಂದು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ತಿಳಿಸಿದೆ. ಅಲ್ಲದೆ, ಭದ್ರತಾ ಅಂಶಗಳನ್ನು ಪ್ರತಿ ಮೂರು ವರ್ಷಗಳಿಗೊಮ್ಮೆ ಪರಿಷ್ಕರಿಸಲಾಗುವುದು ಎಂದೂ ಅದು ಆಶ್ವಾಸನೆ ನೀಡಿತು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications