ದೆಹಲಿ ಪ್ರಯಾಣದಿಂದ ಕುತೂಹಲ ಹುಟ್ಟಿಸಿದ ರಾಜೇ
ನವದೆಹಲಿ, ಜೂ, 27 : ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ವೀಸಾ ಪ್ರಕರಣದಲ್ಲಿ ಸಿಲುಕಿರುವ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಲು ಶನಿವಾರ ದೆಹಲಿ ತಲುಪಿದ್ದಾರೆ.
ಲಲಿತ್ ಮೋದಿ ಲಂಡನ್ನಿಂದ ಪೋರ್ಚುಗಲ್ ತಲುಪಲು ಸಹಾಯ ಮಾಡಿರುವ ಆರೋಪವನ್ನು ಹೊರಲು ಸಿದ್ಧವಿಲ್ಲದ ವಸುಂಧರಾ ರಾಜೇ ಮೊದಲು ಅರ್ಜಿಗೆ ಸಹಿ ಹಾಕಿರುವುದರ ಬಗ್ಗೆ ಜ್ಞಾಪಕವಿಲ್ಲ ಎಂದಿದ್ದಾರೆ. ಬಳಿಕ ಅರ್ಜಿಗೆ ಸಹಿ ಮಾಡಿಲ್ಲ ಎಂದು ಹೇಳಿ ಎಲ್ಲರ ಅನುಮಾನಕ್ಕೆ ರೆಕ್ಕೆಪುಕ್ಕ ಹಚ್ಚಿದ್ದಾರೆ. ಬಿಜೆಪಿ ಪಕ್ಷ ಹಾಗೂ ನಾಯಕರನ್ನು ಇನ್ನಷ್ಟು ಬಿಕ್ಕಟ್ಟಿಗೆ ತಳ್ಳಿದ್ದಾರೆ. [ವಸುಂಧರಾ ರಾಜೇ ನಮ್ಮ ಫ್ಯಾಮಿಲಿ ಫ್ರೆಂಡ್: ಲಲಿತ್]

ವಸುಂಧರಾ ರಾಜೇ ರಾಜೀನಾಮೆ ನೀಡಬೇಕೆಂದು ರಾಜಕೀಯ ನಾಯಕರುಗಳು ಒತ್ತಾಯಿಸುತ್ತಿರುವುದು ಬಿಜೆಪಿಗೆ ನುಂಗಲಾಗದ ತುತ್ತಾಗಿ ಪರಿಣಮಿಸಿದೆ . ಇಂತಹ ಸಂದರ್ಭದಲ್ಲಿ ಬಿಜೆಪಿ ಮುಖಂಡರ ಭೇಟಿ ಮಾಡುವ ರಾಜೇ ಅವರ ದೆಹಲಿ ಪ್ರಯಾಣದ ಬಗ್ಗೆ ಎಲ್ಲರಲ್ಲೂ ಕುತೂಹಲ ಹುಟ್ಟಿದೆ.
ರಾಜೇ ಅವರ ಪುತ್ರ ಒಡೆತನದ ಹೋಟೆಲ್ಗಳ ಸರಣಿಯಲ್ಲಿ ಲಲಿತ್ ಮೋದಿ ಹೂಡಿಕೆ ಮಾಡಿರುವುದು ಸತ್ಯ. ಆದರೆ ಅದು ಕಾನೂನಿನ ಎಲ್ಲೆ ಮೀರಿಲ್ಲ ಎಂದು ರಾಜಸ್ಥಾನದ ಬಿಜೆಪಿ ನಾಯಕರು ಪ್ರತಿಪಾದಿಸಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications