ಹಫೀಜ್ ಸಯೀದ್ ಪ್ರಕರಣದಲ್ಲಿ ಲಂಚದ ಆರೋಪ; NIA ಅಧಿಕಾರಿಗಳು ವರ್ಗಾ
ನವದೆಹಲಿ, ಆಗಸ್ಟ್ 20: ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಒಳಗೊಂಡ ಉಗ್ರ ಕೃತ್ಯಕ್ಕೆ ಹಣಕಾಸು ನೆರವು ಒದಗಿಸಿದ ಪ್ರಕರಣದಲ್ಲಿ ದೆಹಲಿ ಮೂಲದ ಉದ್ಯಮಿಯ ಹೆಸರನ್ನು ಸೇರಿಸದಿರಲು ಎರಡು ಕೋಟಿ ರುಪಾಯಿ ಲಂಚ ಕೇಳಿದ ಆರೋಪದಲ್ಲಿ ರಾಷ್ಟ್ರೀಯ ತನಿಖಾ ದಳದ (ಎನ್ ಐಎ) ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಅಧಿಕಾರಿಗಳ ವಿರುದ್ಧ ದುರ್ನಡತೆಯ ದೂರು ಬಂದಿದೆ. ಈ ಆರೋಪದ ಬಗ್ಗೆ ಡಿಐಜಿ ಮಟ್ಟದ ಅಧಿಕಾರಿ ತನಿಖೆ ನಡೆಸಲಿದ್ದಾರೆ. ನ್ಯಾಯ ಸಮ್ಮತವಾದ ತನಿಖೆ ಆಗಬೇಕು ಎಂಬ ಕಾರಣಕ್ಕೆ ಮೂವರು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ವರದಿ ಆಗಿದೆ.
ಈಗ ವರ್ಗಾವಣೆ ಆಗಿರುವ ಮೂವರು ಅಧಿಕಾರಿಗಳ ಪೈಕಿ ಒಬ್ಬರು ಸೂಪರಿಂಟೆಂಡೆಂಟ್ ಆಫ್ ಪೊಲೀಸ್. ಸಂಝೌತ ಎಕ್ಸ್ ಪ್ರೆಸ್ ಸ್ಫೋಟ ಪ್ರಕರಣದಂಥದ್ದರಲ್ಲಿ ಅವರು ವಿಚಾರಣೆ ತಂಡದಲ್ಲಿ ಇದ್ದರು. ಇತರ ಇಬ್ಬರು ಕಿರಿಯ ಅಧಿಕಾರಿಗಳು. ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಲಷ್ಕರ್-ಇ-ತೈಬಾದ ಮುಖ್ಯಸ್ಥ ಹಫೀಜ್ ಸಯೀದ್ ನ ಫಲ್ಹಾ- ಇ- ಇನ್ಸಾನಿಯತ್ ಫೌಂಡೇಷನ್ ಬಗ್ಗೆ ಈ ಮೂವರು ತನಿಖೆ ನಡೆಸುತ್ತಿದ್ದರು.

ಉತ್ತರ ದೆಹಲಿಯ ಉದ್ಯಮಿ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿ, ಪ್ರಕರಣದಿಂದ ಹೆಸರನ್ನು ಹೊರಗೆ ಇಡುವುದಕ್ಕೆ ಲಂಚ ಕೇಳಿದ್ದರು. ಕಳೆದ ತಿಂಗಳು ಆರೋಪ ಪಟ್ಟಿ ಸಲ್ಲಿಸಲಾಗಿದೆ. ಅದರಲ್ಲಿ ಹಫೀಜ್ ಸಯೀದ್ ಸೇರಿ ಏಳು ಮಂದಿಯನ್ನು ಹೆಸರಿಸಲಾಗಿದೆ. ಕಾನೂನುಬಾಹಿರ ಚಟುವಟಿಕೆ ನಿಗ್ರಹ ಕಾಯ್ದೆ ಅಡಿಯಲ್ಲಿ ಕ್ರಿಮಿನಲ್ ಪಿತೂರಿ ಆರೋಪ ಮಾಡಲಾಗಿದೆ.
ಆ ದಾಖಲೆ ಬಹಿರಂಗ ಪಡಿಸುವ ಪ್ರಕಾರ, ಎಫ್ ಐಎಫ್ ನ ಎರಡನೇ ಮುಖ್ಯಸ್ಥ ಶಾಹಿದ್ ಮೆಹ್ಮೂದ್ ತನ್ನ ಸಹವರ್ತಿ ದುಬೈನಲ್ಲಿರುವ ಮೊಹ್ಮದ್ ಕಮ್ರಾನ್ (ಪಾಕಿಸ್ತಾನ ಮೂಲದ ವ್ಯಕ್ತಿ) ಮೂಲಕ ಭಾರತಕ್ಕೆ ಹಣ ರವಾನೆ ಮಾಡುತ್ತಿದ್ದ. ಇನ್ನು ಹೊಸದಾಗಿ ತಿದ್ದುಪಡಿ ಆಗಿರುವ ಎನ್ ಐಎ ಮಸೂದೆ ಹಾಗೂ ಯುಎಪಿಎ ಅಡಿಯಲ್ಲಿ ತನಿಖೆಗೆ ದೊಡ್ಡ ಮಟ್ಟದ ಅಧಿಕಾರ ದೊರೆಯುತ್ತದೆ.
ಧಾರ್ಮಿಕ ಕೆಲಸದ ನೆಪದಲ್ಲಿ ಶಾಹಿದ್ ಮೆಹ್ಮೂದ್ ದೆಹಲಿ, ಹರಿಯಾಣದಲ್ಲಿ ಸ್ಲೀಪರ್ ಸೆಲ್ ಸೃಷ್ಟಿಸಿದ ಆರೋಪವನ್ನು ಕಳೆದ ವರ್ಷ ಎನ್ ಐಎ ಮಾಡಿತ್ತು. ಉಗ್ರ ಕೃತ್ಯಗಳಿಗೆ ಹಣಕಾಸು ನೆರವು ನೀಡಿದ ಆರೋಪದಲ್ಲಿ ಹಫೀಜ್ ಸಯೀದ್ ನನ್ನು ಪಾಕಿಸ್ತಾನದಲ್ಲಿ ಬಂಧಿಸಿ, ಕಳೆದ ತಿಂಗಳು ಲಾಹೋರ್ ಜೈಲಿಗೆ ಕಳುಹಿಸಲಾಗಿತ್ತು. ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅಮೆರಿಕ ಭೇಟಿಗೆ ಕೆಲ ದಿನಗಳ ಮುನ್ನ ಆ ಕಾರ್ಯಾಚರಣೆ ನಡೆದಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications