ಉಗ್ರ ಭಟ್ಕಳನ ಆಪ್ತ ಎನ್ಐಎ ಬಲೆಗೆ ಬಿದ್ದ
ನವದೆಹಲಿ, ಅ.1: ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ಉಗ್ರ ಯಾಸಿನ್ ಭಟ್ಕಳನ ಆಪ್ತ ಸಹಚರನೊಬ್ಬನನ್ನು ರಾಷ್ಟ್ರೀಯ ಭಧ್ರತಾ ಸಂಸ್ಥೆ (ಎನ್ಐಎ)ಯ ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.
ಕೇರಳದ ಎರ್ನಾಕುಲಂನಲ್ಲಿ ಕಾರ್ಯಾಚರಣೆ ನಡೆಸಿದ ಎನ್ ಐಎ ಅಧಿಕಾರಿಗಳು ಭಟ್ಕಳ್ ನ ಸಹಚರ ಮಹಮದ್ ಮಂಜೀರ್ ಇಮಾಮ್ ಎಂಬಾತನನ್ನು ಬಂಧಿಸಿದ್ದಾರೆ. 2003ರಿಂದ ಈಚೆಗೆ ಭಾರತದಲ್ಲಿ ನಡೆದ ಎಲ್ಲ ಪ್ರಮುಖ ಬಾಂಬ್ ಸ್ಫೋಟಗಳಲ್ಲಿ ಈತನ ಕೈವಾಡ ಇತ್ತು ಎಂಬ ಅಂಶವನ್ನು ಎನ್ ಐಎ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಬಂಧಿತ ಉಗ್ರ ಇಮಾಮ್ ನನ್ನು ಎನ್ ಐಎ ಅಧಿಕಾರಿಗಳು ಮಂಗಳವಾರ(ಅ.1) ಜಿಲ್ಲಾ ನ್ಯಾಯಾಧೀಶರಾದ ಐಎಸ್ ಮೆಹ್ತಾ ಅವರ ಮುಂದೆ ಹಾಜರುಪಡಿಸಿ, 15 ದಿನಗಳ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಇಂಡಿಯನ್ ಮುಜಾಹಿದ್ದೀನ್ ಉಗ್ರ ಯಾಸಿನ್ ಭಟ್ಕಲನನ್ನು ವಿಚಾರಣೆ ಮಾಡುವ ಸಂದರ್ಭದಲ್ಲಿ ಆತ ತನ್ನ ಮೂವರು ಸಹಚರರ ಬಗ್ಗೆ ಬಾಯಿ ಬಿಟ್ಟಿದ್ದನು. ಆತ ನೀಡಿದ ಮಾಹಿತಿಯ ಮೇರೆಗೆ ಎನ್ ಐಎ ಅಧಿಕಾರಿಗಳು ಇಮಾಮ್ ನನ್ನು ಬಂಧಿಸಿದ್ದಾರೆ.

ಬಂಧಿತ ಮಹಮದ್ ಮಂಜೀರ್ ಇಮಾಮ್ ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಸಂಸ್ಥಾಪಕರಾದ ರಿಯಾಜ್ ಭಟ್ಕಳ್ ಮತ್ತು ತೆಹಸೀನ್ ಅಖ್ತರ್ ನ ಆಣತಿಯಂತೆ ಕೆಲಸ ಮಾಡುತ್ತಿದ್ದನು. ಅಲ್ಲದೆ ಬಾಂಬ್ ಸ್ಫೋಟ ನಡೆಸುವ ಪ್ರದೇಶಗಳ ಸಂಪೂರ್ಣ ಮಾಹಿತಿಯನ್ನು ಇವರಿಗೆ ತಲುಪಿಸುತ್ತಿದ್ದನು ಎಂದು ಎನ್ ಐಎ ಮೂಲಗಳು ತಿಳಿಸಿವೆ. ಪ್ರಸ್ತುತ ಮಹಮದ್ ಮಂಜೀರ್ ಇಮಾಮ್ ನನ್ನು ನ್ಯಾಯಾಲಯ ಅಕ್ಟೋಬರ್ 15ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಇಂಡಿಯನ್ ಮುಜಾಹಿದ್ದೀನ್ ಸಂಸ್ಥಾಪಕರಾದ ಯಾಸಿನ್ ಭಟ್ಕಳ ಹಾಗೂ ರಿಯಾಜ್ ಭಟ್ಕಳ ಅವರ ವಿಚಾರಣೆ ಸಂದರ್ಭದಲ್ಲಿ ಅನೇಕ ಬಾರಿ ಇಮಾಮ್ ಹೆಸರು ಪ್ರಸ್ತಾಪಿಸಿದ್ದರು. ರಿಯಾಜ್ ಆದೇಶದಂತೆ ಭಾರತದಲ್ಲಿ ಅನೇಕ ವಿಧ್ವಂಸಕ ಕೃತ್ಯಗಳಲ್ಲಿ ಇಮಾಮ್ ಪಾಲ್ಗೊಂಡಿದ್ದರ ಬಗ್ಗೆ ಪುರಾವೆಗಳು ಸಿಕ್ಕಿತ್ತು.
ಸದ್ಯ ಇಂಡಿಯನ್ ಮುಜಾಹಿದ್ದೀನ್ ಅಡಗುತಾಣಗಳ ಬಗ್ಗೆ ತಿಳಿಯಲು ರಾಷ್ಟ್ರೀಯ ಭದ್ರತಾ ಪಡೆ ತನಿಖೆ ಮುಂದುವರೆಸಿದೆ. ದಕ್ಷಿಣದಲ್ಲಿ ಕರ್ನಾಟಕ, ಗೋವಾ ನಂತರ ಕೇರಳದಲ್ಲೂ ಐಎಂ ಉಗ್ರರ ತಾಣಗಳ ಗುರುತು ಸಿಕ್ಕಿದೆ. ಕೇರಳದಲ್ಲಿ ಇಮಾಂ ಮುಂದಾಳತ್ವದಲ್ಲಿ ಉಗ್ರರ ಸಂಘಟನೆ ಕಾರ್ಯ ನಡೆದಿತ್ತು ಎನ್ನಲಾಗಿದೆ. (ಪಿಟಿಐ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications