ಜೈಲಿನಲ್ಲಿ ಉಪವಾಸ ಕೂತ ನಿರ್ಭಯ ಪ್ರಕರಣದ ಅಪರಾಧಿ
ನವದೆಹಲಿ, ಫೆಬ್ರವರಿ 17 : ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಯೊಬ್ಬ ಜೈಲಿನಲ್ಲಿ ಉಪವಾಸ ಕುಳಿತಿದ್ದಾನೆ. ಮಾರ್ಚ್ 3ರಂದು ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸಲು ನ್ಯಾಯಾಲಯ ಡೆತ್ ವಾರೆಂಟ್ ಜಾರಿ ಮಾಡಿದೆ.
26 ವರ್ಷದ ವಿನಯ್ ಕುಮಾರ್ ಶರ್ಮಾ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾನೆ. ರಾಷ್ಟ್ರಪತಿಗಳು ಈಗಾಗಲೇ ಆತನ ಕ್ಷಮಾದಾನ ಅರ್ಜಿಯನ್ನು ವಜಾಗೊಳಿಸಿದ್ದಾರೆ. ರಾಷ್ಟ್ರಪತಿಗಳ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಸೋಮವಾರ ದೆಹಲಿ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ವಿನಯ್ ಕುಮಾರ್ ಶರ್ಮಾ ಪರ ವಕೀಲರು ಹಲವಾರು ಮಾಹಿತಿಗಳನ್ನು ನೀಡಿದ್ದಾರೆ. ಅಪರಾಧಿಯ ಮಾನಸಿಕ ಸ್ಥಿತಿ ಸರಿ ಇಲ್ಲ, ಈಗ ಗಲ್ಲು ಶಿಕ್ಷೆ ಜಾರಿಗೊಳಿಸಬಾರದು ಎಂದು ಹೇಳಿದ್ದಾರೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಧರ್ಮೇಂದ್ರ ರಾಣಾ ಅವರ ಪೀಠದ ಮುಂದೆ ವಾದ ಮಂಡನೆ ಮಾಡಿದ ವಕೀಲರು, ಅಪರಾಧಿ ಜೈಲಿನಲ್ಲಿ ಉಪವಾಸ ಕೂತಿದ್ದಾನೆ ಎಂದು ಮಾಹಿತಿ ನೀಡಿದರು. ಜೈಲಿನ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ನ್ಯಾಯಾಧೀಶರು ಸೂಚಿಸಿದರು.
2012ರ ಡಿಸೆಂಬರ್ 23ರಂದು ದಕ್ಷಿಣ ದೆಹಲಿಯಲ್ಲಿ ಚಲಿಸುವ ಬಸ್ನಲ್ಲಿ 23 ವರ್ಷದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ನಿರ್ಭಯ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಗುಪ್ತಾಂಗಕ್ಕೆ ಕಬ್ಬಿಣದ ರಾಡ್ ತುರುಕಿ ವಿಕೃತಿ ಮೆರೆಯಲಾಗಿತ್ತು. ಬಳಿಕ ಆಕೆ ಮೃತಪಟ್ಟಿದ್ದಳು.
ನಿರ್ಭಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪ್ರಕರಣದಲ್ಲಿ ಮುಕೇಶ್ ಕುಮಾರ್ ಸಿಂಗ್ (32), ಪವನ್ ಗುಪ್ತಾ (25), ವಿನಯ್ ಕುಮಾರ್ ಶರ್ಮಾ (26) ಮತ್ತು ಅಕ್ಷಯ್ ಕುಮಾರ್ (31) ಅಪರಾಧಿಗಳು.
ಎಲ್ಲಾ ಅಪರಾಧಿಗಳಿಗೂ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಎರಡು ಬಾರಿ ಡೆತ್ ವಾರೆಂಟ್ ಜಾರಿಗೊಳಿಸಿದರೂ ಶಿಕ್ಷೆ ಜಾರಿಯಾಗಿರಲಿಲ್ಲ. ಸೋಮವಾರ 3ನೇ ಬಾರಿಗೆ ಡೆತ್ ವಾರೆಂಟ್ ಜಾರಿಗೊಂಡಿದ್ದು ಮಾರ್ಚ್ 3ರ ಬೆಳಗ್ಗೆ 6 ಗಂಟೆಗೆ ಶಿಕ್ಷೆ ಜಾರಿಗೊಳಿಸಲು ಆದೇಶ ನೀಡಲಾಗಿದೆ.
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications