ನಿರ್ಭಯಾ ಅತ್ಯಾಚಾರ: ಅಪರಾಧಿ ಮುಕೇಶ್ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್
ನವದೆಹಲಿ, ಜನವರಿ 29: ತನ್ನ ಕ್ಷಮಾದಾನದ ಮನವಿಯನ್ನು ತಿರಸ್ಕರಿಸಿದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ನಿರ್ಧಾರವನ್ನು ಪ್ರಶ್ನಿಸಿ ನಿರ್ಭಯಾ ಪ್ರಕರಣದ ಅಪರಾಧಿ ಮುಕೇಶ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ಗಲ್ಲುಶಿಕ್ಷೆಗೆ ಗುರಿಯಾಗಿರುವ ಅಪರಾಧಿ ಮುಕೇಶ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್, ಆದ್ಯತೆ ಮೇರೆಗೆ ವಿಚಾರಣೆಗೆ ಪರಿಗಣಿಸಿತ್ತು. ಬುಧವಾರ ಆತನ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್. ಭಾನುಮತಿ, ಅಶೋಕ್ ಭೂಷಣ್ ಮತ್ತು ಎಎಸ್ ಬೋಪಣ್ಣ ಅವರನ್ನು ಒಳಗೊಂಡ ನ್ಯಾಯಪೀಠ, ಮನವಿಯನ್ನು ವಜಾಗಳಿಸಿತು.
'ಈ ಕ್ಷಮಾದಾನದ ಅರ್ಜಿ ತಿರಸ್ಕರಿಸುವ ವಿಚಾರದಲ್ಲಿ ರಾಷ್ಟ್ರಪತಿ ತಮ್ಮ ವಿವೇಚನೆಯನ್ನು ಬಳಸಿಲ್ಲ ಎಂದು ಹೇಳುವಂತಿಲ್ಲ. ಜೈಲಿನಲ್ಲಿ ಸಮಸ್ಯೆ ಅನುಭವಿಸಿದ ಸಂಗತಿಯು ಕ್ಷಮಾದಾನದ ಅರ್ಜಿಗೆ ಯಾವುದೇ ಬೆಂಬಲ ನೀಡುವುದಿಲ್ಲ' ಎಂದು ನ್ಯಾಯಪೀಠ ಹೇಳಿತು.

ಈ ನಡುವೆ ಮತ್ತೊಬ್ಬ ಅಪರಾಧಿ ಸಲ್ಲಿಸಿರುವ ಕ್ಯುರೇಟಿವ್ ಅರ್ಜಿ ಜತೆ ಇನ್ನಷ್ಟು ದಾಖಲೆಗಳನ್ನು ನೀಡುವಂತೆ ಸುಪ್ರೀಂಕೋರ್ಟ್ ರಿಜಿಸ್ಟ್ರಿ ವಕೀಲರಿಗೆ ಸೂಚಿಸಿದೆ. ಈ ಅಗತ್ಯ ದಾಖಲೆಗಳನ್ನು ಒದಗಿಸಲು ಕೆಲಸ ಮಾಡುತ್ತಿರುವುದಾಗಿ ಆತನ ಪರ ವಕೀಲ ಎ.ಪಿ. ಸಿಂಗ್ ತಿಳಿಸಿದ್ದಾರೆ.
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications