ದೇಶವನ್ನೇ ಬೆಚ್ಚಿಬೀಳಿಸಿದ ನಿರ್ಭಯಾ ಅತ್ಯಾಚಾರಿಗಳಿಗೆ ಖಿನ್ನತೆ
ನವದೆಹಲಿ, ಡಿಸೆಂಬರ್ 14: ದೇಶದ ಜನರನ್ನು ಹಾಗೂ ನಿರ್ಭಯಾ ಕುಟುಂಬ ಸದಸ್ಯರನ್ನು ಶಾಕ್ಗೆ ದೂಡಿದ್ದ ದುರುಳ ಅತ್ಯಾಚಾರಿಗಳು ಈಗ ಖಿನ್ನತೆಗೆ ಒಳಗಾಗಿದ್ದಾರೆ.
ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೊಳಗಾಗಿರುವ ನಾಲ್ವರು ಅತ್ಯಾಚಾರಿಗಳು ಖಿನ್ನತೆಗೆ ಒಳಗಾಗಿದ್ದು, ಆತ್ಮಹತ್ಯೆ ಮಾಡಿಕೊಳ್ಳುವಷ್ಟರ ಮಟ್ಟಿಗೆ ಖಿನ್ನತೆಗೆ ಒಳಗಾಗಿದ್ದಾರೆ ಎಂದು ತಿಹಾರ್ ಜೈಲಿನ ಮೂಲಗಳು ತಿಳಿಸಿವೆ.
ಅತ್ಯಾಚಾರಿಗಳಾದ ಅಕ್ಷಯ್, ಮುಖೇಶ್, ಪವನ್ ಗುಪ್ತ, ವಿನಯ್ ಶರ್ಮಾ ಸರಿಯಾಗಿ ಆಹಾರ ಸೇವಿಸುತ್ತಿಲ್ಲ. ಹಾಗೂ ಮರಣದಂಡನೆಗೆ ಒಳಗಾಗುತ್ತೇವೆ ಎನ್ನುವ ಆತಂಕದಲ್ಲಿದ್ದಾರೆ ಎನ್ನಲಾಗುತ್ತಿದೆ.

ಹೀಗಾಗಿ ಅವರ ಭದ್ರತೆಗೆ ವಿಶೇಷ ಐವರು ಪೊಲೀಸರನ್ನು ನೇಮಿಸಲಾಗಿದೆ.ಈ ಅತ್ಯಾಚಾರಿಗಳ ಮೇಲೆ ಹಗಲಿರುಳು ಐವರು ಪೊಲೀಸರು ಕಣ್ಣಿಡುತ್ತಿದ್ದಾರೆ.
ಈ ಅತ್ಯಾಚಾರಿಗಳು ಸರಿಯಾದ ಸಮಯಕ್ಕೆ ಆಹಾರ ಸೇವಿಸುವುದು ಹಾಗೂ ಖುದ್ದಾಗಿ ತಮ್ಮ ಮೇಲೆ ಯಾವುದೇ ಸಮಸ್ಯೆಯನ್ನು ಮಾಡಿಕೊಳ್ಳದಂತೆ ಎಚ್ಚರವಹಿಸುತ್ತಿದ್ದಾರೆ.
2013ರಲ್ಲಿ ಪ್ರಕರಣದ ಇನ್ನೋರ್ವ ಅಪರಾಧಿ ರಾಮ್ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಉಳಿದ ನಾಲ್ವರು ಅತ್ಯಾಚಾರಿಗಳು ಇಂತಹ ದುಸ್ಸಾಹಸಕ್ಕೆ ಕೈಹಾಕದಂತೆ ಎಚ್ಚರವಹಿಸಲಾಗುತ್ತಿದೆ.
ಸೋಮವಾರ ಗಲ್ಲುಶಿಕ್ಷೆ: ತಿಹಾರ್ ಜೈಲಿನ ಮೂಲಗಳ ಪ್ರಕಾರ ಸೋಮವಾರ ಅಂದರೆ ಡಿಸೆಂಬರ್ 16ರಂದು ನಾಲ್ವರು ಅತ್ಯಾಚಾರಿಗಳನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಲು ಸಿದ್ಧತೆ ನಡೆಸಲಾಗುತ್ತಿದೆ.
ಗಲ್ಲು ಶಿಕ್ಷೆಯ ಛೇಂಬರ್ನ್ನು ಈಗಾಗಲೇ ನಿರ್ಮಿಸಲಾಗಿದೆ. ಹಾಗೆಯೇ ಗಲ್ಲುಶಿಕ್ಷೆಯನ್ನು ಜಾರಿ ಮಾಡುವ ಹ್ಯಾಂಗ್ ಮ್ಯಾನ್ನ್ನು ಕೂಡ ಕರೆಸಲು ಸಿದ್ಧತೆ ನಡೆಸಲಾಗಿದೆ.
ಉತ್ತರ ಪ್ರದೇಶದ ಡಿಜಿಪಿ ಕೂಡ ಈ ವಿಚಾರವನ್ನು ಖಾತ್ರಿಪಡಿಸಿದ್ದು, ಮೀರತ್ ಜೈಲಿನಿಂದ ಹ್ಯಾಂಗ್ಮ್ಯಾನ್ ಅನ್ನು ಕಳುಹಿಸಿಕೊಡುವಂತೆ ಮನವಿ ಬಂದಿದೆ ಎಂದು ಸ್ಪಷ್ಟಪಡಿಸಿದ್ದಾರೆ. ತಿಹಾರ್ ಜೈಲಿನಿಂದ ಅಂತಿಮ ಕರೆ ಬರುತ್ತಿದ್ದಂತೆ ಹ್ಯಾಂಗ್ಮ್ಯಾನ್ ಮೀರತ್ನಿಂದ ಪ್ರಯಾಣ ಬೆಳೆಸಲಿದ್ದಾರೆ.
ಇದಲ್ಲದೆ ಅಪರಾಧಿಗಳನ್ನು ವಿಡಿಯೋ ಕಾನ್ಫೆರೆನ್ಸ್ ಮೂಲಕ ಕೋರ್ಟ್ ಮುಂದೆ ಹಾಜರುಪಡಿಸಲಾಗಿದ್ದು, ಅಂತಿಮ ವಿಚಾರಣೆ ನಡೆಸಲಾಗಿದೆ ಎನ್ನಲಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications