ನಿರ್ಭಯಾ ಜೀವಂತವಿದ್ದಿದ್ದರೆ ಮತ್ತಷ್ಟು ಖುಷಿಯಾಗುತ್ತಿತ್ತು: ವಕೀಲೆ ಸೀಮಾ
ನವದೆಹಲಿ, ಮಾರ್ಚ್ 20: 'ತಡವಾದರೂ ನ್ಯಾಯ ಸಿಕ್ಕಿದೆ, ನಿರ್ಭಯಾ ಜೀವಂತವಿದ್ದಿದ್ದರೆ ಮತ್ತಷ್ಟು ಖುಷಿಯಾಗುತ್ತಿತ್ತು' ಎಂದು ನಿರ್ಭಯಾ ಪರ ವಕೀಲೆ ಸೀಮಾ ಕುಷ್ವಾಹ ತಿಳಿಸಿದ್ದಾರೆ.
ನಾನು ಒಂದು ವಿಷಯ ಹೇಳಲು ಇಷ್ಟಪಡುತ್ತೇನೆ. ಅಪರಾಧಿಗಳು ನಿರ್ಭಯಾ ಮೇಲೆ ಕೇವಲ ಅತ್ಯಾಚಾರ ಮಾಡಿಲ್ಲ, ಹತ್ಯೆ ಮಾಡಿದ್ದಾರೆ. ನಿರ್ಭಯಾಳನ್ನು ಕೊಲೆ ಮಾಡಿ ಆಕೆಯ ದೇಹವನ್ನು ಸಂಪೂರ್ಣವಾಗಿ ನಾಶ ಮಾಡಿದ್ದರು.
ಯಾವ ರೀತಿ ನಿರ್ಭಯಾಯನ್ನು ಹತ್ಯೆ ಮಾಡಿದ್ದಾರೋ, ಪ್ರಾಣಿಗಳು ಕೂಡ ಆ ರೀತಿ ಮಾಡಲ್ಲ. ಆದರೆ ಇಂದು ನಾಲ್ವರು ಅಪರಾಧಿಗಳನ್ನು ಗಲ್ಲುಗೇರಿಸಲಾಗಿದೆ ಎಂದರು. ನಾಲ್ವರು ಹಂತಕರನ್ನು ಇಂದು ಮ್ಯಾಜಿಸ್ಟ್ರೇಟ್ ಎದುರು ಗಲ್ಲಿಗೇರಿಸಲಾಯಿತು.

ನಾವು ಆಕೆಯನ್ನು ಬದುಕಿಸಿಕೊಳ್ಳಲಾಗಲಿಲ್ಲ
ನಾವು ಆಕೆಯನ್ನು ಬದುಕಿಸಿಕೊಳ್ಳಲು ಆಗಲಿಲ್ಲ. ದೇಶದ ಕಾನೂನು ಸುವ್ಯವಸ್ಥೆ ಇದರಲ್ಲಿ ಫೇಲ್ ಆಗಿದೆ. ದೇಶದ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ. ಆದರೆ ಹಂತಕರನ್ನು ಗಲ್ಲಿಗೇರಿಸುವ ಮೂಲಕ ನಿರ್ಭಯಾಗೆ ನ್ಯಾಯ ಸಿಕ್ಕಿದೆ.

ನಿರ್ಭಯಾ ವೈದ್ಯಕೀಯ ಶಿಕ್ಷಣ ಮುಗಿಸಿದ್ದಳು
ನಿರ್ಭಯಾ ವೈದ್ಯಕೀಯ ಶಿಕ್ಷಣ ಮುಗಿಸಿ ಇಂಟರ್ನ್ಶಿಪ್ ಮಾಡಲು ಇಲ್ಲಿಗೆ ಬಂದಿದ್ದಳು. ಈ ಘಟನೆ ನಡೆದ ಮರುದಿನ ನಿರ್ಭಯಾ ತನ್ನ ಇಂಟರ್ನ್ಶಿಪ್ಗೆ ಹೋಗಬೇಕಿತ್ತು. ಅದು ಆಕೆಯ ಕನಸ್ಸಾಗಿತ್ತು. ಆದರೆ ಈ ಘಟನೆ ನಡೆದ ನಂತರ ಆಕೆಯ ಕನಸು ನುಚ್ಚುನೂರಾಗಿ ಹೋಯಿತು. ಒಂದು ಕ್ಷಣದಲ್ಲಿ ಎಲ್ಲವೂ ಬದಲಾಯಿತು ಎಂದರು.

ಎಲ್ಲಾ ಹೆಣ್ಣುಮಕ್ಕಳಿಗೂ ನ್ಯಾಯ ದೊರೆಯಬೇಕು
ಇಂತಹ ಪ್ರಕರಣದಲ್ಲಿ ಬೇರೆ ಹೆಣ್ಣು ಮಕ್ಕಳಿಗೂ ನ್ಯಾಯ ಸಿಕ್ಕಿಲ್ಲ ಎಂಬುದು ನನಗೆ ಗೊತ್ತಿದೆ. ಇಂತಹ ಹಲವು ಪ್ರಕರಣಗಳು ಬಾಕಿ ಇದೆ ಎಂಬುದು ನನಗೆ ಗೊತ್ತಿದೆ. ನಿರ್ಲಕ್ಷ್ಯದಿಂದ ಈ ಪ್ರಕರಣ ಇಷ್ಟು ವರ್ಷ ನಡೆಯಿತು. ತಡವಾದರೂ ನಿರ್ಭಯಾಗೆ ನ್ಯಾಯ ಸಿಕ್ಕಿದೆ ಎಂದು ತಿಳಿಸಿದರು.

ಹೆಣ್ಣುಮಕ್ಕಳಿಗೆ ನ್ಯಾಯಕೊಡಿಸುವ ಕಲಸವಾಗಬೇಕು
ದೇಶದಲ್ಲಿ ಹಲವು ಹೆಣ್ಣು ಮಕ್ಕಳ ಜೊತೆ ನಿರ್ಭಯಾದಂತಹ ಪ್ರಕರಣ ನಡೆದಿದೆ. ಅವರು ಕೂಡ ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ಮಾಧ್ಯಮದವರು ಅಂತಹ ಪ್ರಕರಣಗಳನ್ನು ಬೆಳಕಿಗೆ ತಂದು ಅವರಿಗೂ ನ್ಯಾಯ ಕೊಡಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications