ಯೆಸ್ ಬ್ಯಾಂಕ್ ಕುರಿತು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಿಷ್ಟು
ನವದೆಹಲಿ, ಮಾರ್ಚ್ 6: ಯೆಸ್ ಬ್ಯಾಂಕ್ನಲ್ಲಿರುವ ನಿಮ್ಮ ಹಣ ಸುರಕ್ಷಿತವಾಗಿದೆ ಗ್ರಾಹಕರ್ಯಾರೂ ಕೂಡ ಆತಂಕಗೊಳ್ಳಬೇಕಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಭಯ ನೀಡಿದ್ದಾರೆ.
ನಿಮ್ಮ ಹಣ ಸುರಕ್ಷಿತವಾಗಿರಲಿದೆ. 50 ಸಾವಿರಕ್ಕಿಂತ ಕಡಿಮೆ ಹಣವನ್ನು ನೀವು ಪಡೆದುಕೊಳ್ಳಲು ಈಗಲೇ ಸೂಚನೆ ನೀಡುತ್ತೇನೆ. ಆರ್ಬಿಐ ಜೊತೆ ನಿತ್ಯ ಸಂಪರ್ಕದಲ್ಲಿದ್ದೇನೆ. ನಿಮ್ಮ ಹಣ ಏನೂ ಆಗುವುದಿಲ್ಲ ಎನ್ನುವ ಭರವಸೆ ನೀಡುತ್ತೇನೆ ಎಂದು ಹೇಳಿದರು.
ಸುಸ್ಥಿ ಸಾಲಗಳಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ಯೆಸ್ ಬ್ಯಾಂಕ್ ಅನ್ನು ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಸುಪರ್ದಿಗೆ ತೆಗೆದುಕೊಂಡು, ಬ್ಯಾಂಕ್ ಆಡಳಿತ ಮಂಡಳಿಯನ್ನು ಸೂಪರ್ ಸೀಡ್ ಆಗಿ ಮಾಡಿದೆ. ನಗದು ಚಿತ್ ಡ್ರಾ ಮಿತಿಯನ್ನು 50 ಸಾವಿರಕ್ಕೆ ನಿಗದಿಗೊಳಿಸಲಾಗಿದ್ದು, ಸಾವಿರಾರು ಗ್ರಾಹಕರು ಹಣ ತೆಗೆದುಕೊಳ್ಳಲು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ಗುರುವಾರದಂದು ಯೆಸ್ ಬಾಂಕ್ ನಲ್ಲಿ ವಿಥ್ ಡ್ರಾ ಮಿತಿಯನ್ನು 50 ಸಾವಿರಕ್ಕೆ ನಿಗದಿಗೊಳಿಸಿತ್ತು. ದೇಶದ ನಾಲ್ಕನೇ ಅತಿ ದೊಡ್ಡ ಖಾಸಗಿ ಬ್ಯಾಂಕ್ ಆದ ಯೆಸ್ ಬ್ಯಾಂಕ್ ಗೆ ಹೇಗೆ ನೆರವಾಗಬಹುದು ಎಂಬ ಬಗ್ಗೆ 30 ದಿನದೊಳಗೆ ಯೋಜನೆ ರೂಪಿಸಲಾಗುತ್ತದೆ ಎಂದು ತಿಳಿಸಲಾಗಿದೆ.
ಆರ್ ಬಿಐ ಮತ್ತು ಸರ್ಕಾರವು ಯೆಸ್ ಬ್ಯಾಂಕ್ ನ ಸಮಸ್ಯೆಯನ್ನು ಕೂಲಂಕಷವಾಗಿ ಗಮನಿಸುತ್ತಿದೆ. ಎಲ್ಲರ ಹಿತಾಸಕ್ತಿಯನ್ನೂ ದೃಷ್ಟಿಯಲ್ಲಿ ಇಟ್ಟುಕೊಂಡು ಮುಂದೆ ಏನು ಮಾಡಬೇಕು ಎಂದು ನಿರ್ಧರಿಸಲಾಗುತ್ತದೆ.
ಸದ್ಯಕ್ಕೆ ಯೆಸ್ ಬ್ಯಾಂಕ್ ಗ್ರಾಹಕರು 50 ಸಾವಿರ ರುಪಾಯಿಯೊಳಗಿನ ಮೊತ್ತವನ್ನು ವಿಥ್ ಡ್ರಾ ಮಾಡಲು ಸಾಧ್ಯವಾಗುತ್ತಿದೆಯೇ ಎಂಬುದನ್ನು ಖಾತ್ರಿ ಪಡಿಸುವುದು ಆದ್ಯತೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಯೆಸ್ ಬ್ಯಾಂಕ್ ಆಡಳಿತ ಮಂಡಳಿಯನ್ನು ವಜಾಗೊಳಿಸಿರುವ ಆರ್ಬಿಐ, ವಿತ್ಡ್ರಾ ಮಿತಿಯನ್ನು ತಕ್ಷಣವೇ ಜಾರಿಗೆ ಬರುವಂತೆ 50 ಸಾವಿರ ರುಪಾಯಿಗೆ ನಿಗದಿ ಮಾಡುವ ಮೂಲಕ ಬ್ಯಾಂಕ್ ಗ್ರಾಹಕರಿಗೆ ಆಘಾತ ನೀಡಿದೆ. ಈ ಮೂಲಕ ಗ್ರಾಹಕರು ಕೇವಲ 50 ಸಾವಿರ ಮಾತ್ರ ವಿತ್ಡ್ರಾ ಮಾಡಿಕೊಳ್ಳಬಹುದು.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications