ಬಜೆಟ್ ಪ್ರತಿ ಪ್ರಿಂಟಿಗೂ ಮುನ್ನ ಹಲ್ವಾ ಹಂಚಿದ ನಿರ್ಮಲಾ ಸೀತಾರಾಮನ್
ನವದೆಹಲಿ, ಜೂನ್ 22 : ಲೋಕಸಭೆ ಚುನಾವಣೆಯಲ್ಲಿ ಅಭೂತಪೂರ್ವ ಜಯ ಗಳಿಸಿದ ನಂತರ ಮೊದಲ ಬಾರಿ ಆಯವ್ಯಯ ಮಂಡನೆಯಾಗಲಿದ್ದು, ಅದಕ್ಕೂ ಮೊದಲು ಇಂದು ಜರುಗಿದ ಸಾಂಪ್ರದಾಯಿಕ ಹಲ್ವಾ ಸಮಾರಂಭದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಇಲಾಖೆಯ ಸಿಬ್ಬಂದಿಗಳಿಗೆ ಹಲ್ವಾ ಹಂಚಿದರು.
ಹಿಂದಿನ ಮೋದಿ ಸರಕಾರದಲ್ಲಿ ರಕ್ಷಣಾ ಸಚಿವೆಯಾಗಿದ್ದ ನಿರ್ಮಲಾ ಸೀತಾರಾಮನ್ ಅವರ ಹೆಗಲಿಗೆ ಹಣಕಾಸು ನಿರ್ವಹಣೆಯ ಜವಾಬ್ದಾರಿಯನ್ನು ನರೇಂದ್ರ ಮೋದಿಯವರು ಹೊರಿಸಿದ್ದಾರೆ. ದೇಶದ ಆರ್ಥಿಕ ಸ್ಥಿತಿ ನಿರ್ವಹಿಸುವ ಜವಾಬ್ದಾರಿ ಹೊತ್ತಮೇಲೆ ನಿರ್ಮಲಾ ಸೀತಾರಾಮನ್ ಅವರು ಮೊದಲ ಬಾರಿದೆ ಬಜೆಟ್ ಮಂಡಿಸಲಾಗಿದ್ದಾರೆ.
ಜುಲೈ 5ರಂದು ಸ್ವತಂತ್ರ ಭಾರತದ, ಪೂರ್ಣ ಪ್ರಮಾಣದ ಮಹಿಳಾ ಹಣಕಾಸು ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ಅವರು ಆಯವ್ಯಯ ಮಂಡಿಸಲಿದ್ದಾರೆ. ಬಜೆಟ್ ಪ್ರತಿಗಳನ್ನು ಪ್ರಿಂಟಿಗೆ ಕಳುಹಿಸುವ ಮುನ್ನ ಹಣಕಾಸು ಸಚಿವಾಲಯದಲ್ಲಿ ಸಾಂಪ್ರದಾಯಿಕವಾಗಿ ಹಲ್ವಾ ಸಮಾರಂಭ ಆಚರಿಸುವುದು ಚಾಲ್ತಿಯಲ್ಲಿದೆ.

ನಿರ್ಮಲಾ ಸೀತಾರಾಮನ್ ಅವರ ಜೊತೆಗೆ ಹಣಕಾಸು ಮತ್ತು ಕಾರ್ಪೊರೇಟ್ ಖಾತೆಯ ರಾಜ್ಯ ಸಚಿವರಾಗಿರುವ ಅನುರಾಗ್ ಠಾಕೂರ್ ಅವರು ಕೂಡ ಹಲ್ವಾ ಸಮಾರಂಭದಲ್ಲಿ ಭಾಗವಹಿಸಿ, ನಿರ್ಮಲಾ ಅವರ ಜೊತೆಯಲ್ಲಿ ಇಲಾಖೆಯ ಸಿಬ್ಬಂದಿಗಳಿಗೆ ಹಲ್ವಾವನ್ನು ಹಂಚಿದರು.
ಬಜೆಟ್ ಪ್ರತಿಗಳನ್ನು ಪ್ರಿಂಟಿಗೆ ಕಳುಹಿಸುವ ಮೊದಲು ಮತ್ತು ಬಜೆಟ್ ಮಂಡನೆಗೆ ಕೆಲ ದಿನಗಳು ಇರುವಾಗಲೇ ಹಲ್ವಾ ಸಮಾರಂಭವನ್ನು ಆಚರಿಸಲಾಗುತ್ತದೆ. ಹಣಕಾಸು ಸಚಿವಾಲಯ ಕಟ್ಟಡದ ಕೆಳಮಹಡಿಯಲ್ಲಿ, ದೊಡ್ಡ ಕಡಾಯಿಯಲ್ಲಿ ಹಲ್ವಾ ತಯಾರಿಸಲಾಗುತ್ತದೆ ಮತ್ತು 100ಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಹಲ್ವಾ ಹಂಚಲಾಗುತ್ತದೆ.
ಬಜೆಟ್ ತಯಾರಿಕೆ ಸಂದರ್ಭದಿಂದ ಬಜೆಟ್ ಮಂಡನೆಯಾಗುವವರೆಗೆ ಭಾಗಿಯಾಗುವ ಸಿಬ್ಬಂದಿಗಳೆಲ್ಲರೂ ತಮ್ಮ ಮನೆಮಠಗಳನ್ನು, ಹೆಂಡತಿ ಮಕ್ಕಳನ್ನು, ಬಂಧುಮಿತ್ರರನ್ನು ಮರೆತು ಕಚೇರಿಯಲ್ಲಿಯೇ ತೊಡಗಬೇಕಾಗುತ್ತದೆ. ಫೋನ್ ಮುಖಾಂತರವಾಗಲಿ ಮತ್ತಾವುದೇ ರೀತಿಯಲ್ಲಾಗಲು ಅವರು ಯಾರನ್ನೂ ಸಂಪರ್ಕಿಸುವಂತಿಲ್ಲ. ಅಷ್ಟರ ಮಟ್ಟಿಗೆ ಮಾಹಿತಿ ಸೋರಿಕೆಯಾಗದಂತೆ ಎಚ್ಚರಿಕೆ ವಹಿಸಬೇಕಾಗುತ್ತದೆ. ಈ ಕಾರಣದಿಂದಾಗಿಯೇ ಬಜೆಟ್ ಪ್ರತಿಗಳನ್ನು ಪ್ರಿಂಟಿಗೆ ಕಳುಹಿಸುವ ಮುನ್ನ ಹಲ್ವಾ ತಯಾರಿಸಿ ಸಿಬ್ಬಂದಿಗೆ ಹಂಚುವುದು ಸಂಪ್ರದಾಯ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications