ಬಿಜೆಪಿ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದೆ ಎಂದಿದ್ದ ನಿತಿನ್ ಗಡ್ಕರಿ ಯೂ ಟರ್ನ್
ನವದೆಹಲಿ, ಅಕ್ಟೋಬರ್ 10: ಖಾಸಗಿ ವಾಹಿನಿಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಬಿಜೆಪಿಯು ಅವಾಸ್ತವಿಕ ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದೆ ಎಂದಿದ್ದ ಕೇಂದ್ರ ಬಿಜೆಪಿ ಮಂತ್ರಿ ನಿತಿನ್ ಗಡ್ಕರಿ ಇದೀಗ 'ನಾನು ಹಾಗೆ ಹೇಳಿಯೇ ಇಲ್ಲ' ಎಂದಿದ್ದಾರೆ.
ಮರಾಠಿ ಚಾನೆಲ್ ಒಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಮಾತನಾಡಿದ್ದ ನಿತಿನ್ ಗಡ್ಕರಿ 'ನಾವು ಅವಾಸ್ತವಿಕ ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದ್ದು, ನಾವು ಮಾಡಿದ್ದ ಭರವಸೆಗಳನ್ನು ಜನರು ನೆಪಿಸಿದಾಗ ನಕ್ಕು ಸುಮ್ಮನಾಗುತ್ತೇವೆ' ಎಂದು ನಿತಿನ್ ಗಡ್ಕರಿ ಹೇಳಿದ್ದರು. ಅವರ ಸಂದರ್ಶನದ ವಿಡಿಯೋ ಈಗ ವೈರಲ್ ಆಗಿದೆ.

ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ನಿತಿನ್ ಗಡ್ಕರಿ, 'ನಾನು ಮೋದಿ ಅವರ ಬಗ್ಗೆಯಾಗಲಿ, 15 ಲಕ್ಷದ ಬಗ್ಗೆಯಾಗಲಿ ಮಾತನಾಡೇ ಇಲ್ಲ ಎಂದಿದ್ದಾರೆ. ಆ ಸಂದರ್ಶನ ಮರಾಠಿ ಭಾಷೆಯಲ್ಲಿದೆ ರಾಹುಲ್ ಗಾಂಧಿ ಯಾವಾಗ ಮರಾಠಿ ಕಲಿತರು ಎಂದು ರಾಹುಲ್ ಗಾಂಧಿ ಬಗ್ಗೆ ಕೊಂಕು ನುಡಿದಿದ್ದಾರೆ.
सही फ़रमाया, जनता भी यही सोचती है कि सरकार ने लोगों के सपनों और उनके भरोसे को अपने लोभ का शिकार बनाया है| pic.twitter.com/zhlKTrKHgU
— Rahul Gandhi (@RahulGandhi) October 9, 2018
ನಿತಿನ್ ಗಡ್ಕರಿ ಮಾತನಾಡಿರುವ ವಿಡಿಯೋವನ್ನು ರಾಹುಲ್ ಗಾಂಧಿ ಸಹ ಟ್ವೀಟ್ ಮಾಡಿ, ಬಿಜೆಪಿ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದೆ ಎಂದು ಒಪ್ಪಿಕೊಂಡಿದೆ ಎಂದು ಹೇಳಿದ್ದರು.
-
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications