ಮುಂಗಾರು ಅಧಿವೇಶ ಆರಂಭಕ್ಕೂ ಮುನ್ನ ಸರ್ವಪಕ್ಷ ಸಭೆ ಇಲ್ಲ
ನವದೆಹಲಿ, ಸಪ್ಟೆಂಬರ್.13: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಸೋಮವಾರದಿಂದ ಮುಂಗಾರು ಸಂಸತ್ ಅಧಿವೇಶನ ಆರಂಭವಾಗಲಿದೆ. 20 ವರ್ಷಗಳಲ್ಲೇ ಮೊದಲ ಬಾರಿಗೆ ಸರ್ವಪಕ್ಷ ಸಭೆ ನಡೆಸದೇ ಅಧಿವೇಶನ ಶುರು ಮಾಡುವುದಕ್ಕೆ ತೀರ್ಮಾನಿಸಲಾಗಿದೆ.
ಸಂಸದೀಯ ಅಧಿವೇಶನಗಳು ಪ್ರಾರಂಭವಾಗುವ ಮೊದಲು ಅಜೆಂಡಾ ಮತ್ತು ಗುರಿಗಳ ಬಗ್ಗೆ ಚರ್ಚಿಸುವುದಕ್ಕೆ ನಡೆಸುವ ಸಭೆಯನ್ನು ನಡೆಸುವುದಿಲ್ಲ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಈ ಮೊದಲೇ ನಿಗದಿಗೊಳಿಸಿದಂತೆ ರಾಜ್ಯಸಭೆಯ ವ್ಯವಹಾರ ಸಲಹಾ ಸಮಿತಿಯ ಸಭೆ ಭಾನುವಾರ ಸಂಸತ್ತಿನಲ್ಲಿ ನಡೆಯಲಿದೆ. ಮುಂಗಾರು ಸಂಸತ್ ಅಧಿವೇಶನದಲ್ಲಿ ಪ್ರಶ್ನಾವಳಿ ಅವಧಿ ಮತ್ತು ಶೂನ್ಯ ಅವಧಿಯಲ್ಲಿನ ಚರ್ಚೆ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಆಕ್ಟೋಬರ್.01ರವರೆಗೂ ನಡೆಯುವ ಕಲಾಪದ ವಿಷಯಗಳು ಮತ್ತು ಅಜೆಂಡಾ ಬಗ್ಗೆ ಸಭಾಪತಿಗಳ ನೇತೃತ್ವದಲ್ಲಿ ಚರ್ಚೆ ನಡೆಸಲಾಗುತ್ತದೆ.

ಸೋಮವಾರದಿಂದ ಸಂಸತ್ ಕಲಾಪ ಶುರು:
ನವದೆಹಲಿಯಲ್ಲಿ ಸಪ್ಟೆಂಬರ್.14ರಿಂದ ಸಂಸತ್ ಉಭಯ ಕಲಾಪಗಳು ಆರಂಭವಾಗಲಿವೆ. ಮೊದಲ ದಿನ ಲೋಕಸಭೆ ಕಲಾಪ ಬೆಳಗ್ಗೆ 1 ರಿಂದ 3 ಗಂಟೆವರೆಗೂ ನಡೆಯಲಿದ್ದು, ರಾಜ್ಯಸಭಾ ಕಲಾಪ ಮಧ್ಯಾಹ್ನ 3 ರಿಂದ 7 ಗಂಟೆವರೆಗೂ ನಡೆಯಲಿದೆ. ಸಪ್ಟೆಂಬರ್.14ರ ನಂತರದಲ್ಲಿ ರಾಜ್ಯಸಭಾ ಕಲಾಪವು ಬೆಳಗ್ಗೆ 1 ರಿಂದ 3 ಗಂಟೆವರಗೂ ಹಾಗೂ ಲೋಕಸಭಾ ಕಲಾಪವು ಮಧ್ಯಾಹ್ನ 3 ರಿಂದ 7 ಗಂಟೆವರೆಗೂ ನಡೆಸಲು ಸಮಯ ನಿಗದಿಗೊಳಿಸಲಾಗಿದೆ.
ಪ್ರತಿಪಕ್ಷಗಳಿಗೆ ಚರ್ಚೆಯ ವಿಷಯ:
ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಬಿರುಸಿನ ಬಾಣಗಳನ್ನು ಬೀಸುವುದಕ್ಕೆ ಪ್ರತಿಪಕ್ಷಗಳೂ ಸಿದ್ಧತೆ ನಡೆಸುತ್ತಿದೆ. ಭಾರತದ ಜಿಡಿಪಿ, ನಿರುದ್ಯೋಗ ಸಮಸ್ಯೆ, ಕೊವಿಡ್-19 ಬಿಕ್ಕಟ್ಟು ಮತ್ತು ಭಾರತ-ಚೀನಾ ನಡುವಿನ ಗಡಿ ಸಮಸ್ಯೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸುವುದಕ್ಕೆ ವಿರೋಧಪಕ್ಷಗಳು ಅಣಿಯಾಗಿವೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications