ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ದೀಪಾವಳಿ ಸಮಯದಲ್ಲಿ ಪಟಾಕಿ ನಿಷೇಧ ಇಲ್ಲ"

By Mahesh
|
Google Oneindia Kannada News

ನವದೆಹಲಿ, ಅ.29: ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿಗಳಿಗೆ ಸಂಪೂರ್ಣ ನಿಷೇಧ ಹೇರುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ತಳ್ಳಿ ಹಾಕಿದೆ. ಪಟಾಕಿಯಿಂದ ಆಗುವ ಅನಾಹುತಗಳ ಬಗ್ಗೆ ಜನ ಜಾಗೃತಿ ಮೂಡಿಸಲು ನಿರ್ದೇಶಿಸಲಾಗಿದೆ.

ಪಟಾಕಿಗೆ ಸಂಬಂಧಿಸಿ 2005ರ ಆದೇಶವನ್ನೇ ಪಾಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ದ್ವಿಸದಸ್ಯ ನ್ಯಾಯಪೀಠ ಸೂಚಿಸಿದೆ. ಅಕ್ಟೋಬರ್ 31ರಿಂದ ನವೆಂಬರ್ 12ರವರೆಗೆ ಕಡ್ಡಾಯವಾಗಿ ಸಾಧ್ಯವಾಗುವ ಎಲ್ಲೆಡೆ ಪಟಾಕಿ ಅನಾಹುತ, ಶಬ್ದ ಹಾಗೂ ವಾಯು ಮಾಲಿನ್ಯದ ಬಗ್ಗೆ ಜಾಗೃತಿ ಮೂಡಿಸಲು ಜಾಹೀರಾತು ಪ್ರಕಟಿಸುವಂತೆ ಕೇಂದ್ರ ಸರ್ಕಾರಕ್ಕೆ ಆದೇಶಿಸಲಾಗಿದೆ.

No ban on Fire Crackers this Deepavali SC rejects PIL

ಮುಖ್ಯ ನ್ಯಾಯಮೂರ್ತಿ ಎಚ್.ಎಲ್. ದತ್ತು ಹಾಗೂ ನ್ಯಾಯಮೂರ್ತಿ ಅರುಣ್ ಮಿಶ್ರಾರಿದ್ದ ದ್ವಿಸದಸ್ಯ ಪೀಠ ಪಟಾಕಿ ಮಾರಾಟಕ್ಕೆ ನಿರ್ಬಂಧ ಅಥವಾ ನಿಷೇಧ ತಕ್ಷಣಕ್ಕೆ ತೆಗೆದುಕೊಳ್ಳಲು ಸಾಧ್ಯವಿಲ್ಲ. ಮಾಲಿನ್ಯ ನಿಯಂತ್ರಣಕ್ಕಾಗಿ ಬೇರೆ ಕ್ರಮಗಳನ್ನು ಅನುಸರಿಸಲು ಸೂಚಿಸಲಾಗಿದೆ. ಎಂದು ಸ್ಪಷ್ಟಪಡಿಸಿದೆ.

2005ರ ಆದೇಶವನ್ನು ಪರಿಣಾಮಕಾರಿಯಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿಲ್ಲ. ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಪಟಾಕಿಗೆ ನಿರ್ಬಂಧ ವಿಧಿಸಿದ್ದರೂ ಪಟಾಕಿ ದುರಂತಗಳ ಬಗ್ಗೆ ವರದಿ ಬಂದಿದೆ. ಈ ಬಗ್ಗೆ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಸರ್ಕಾರವನ್ನು ನ್ಯಾಯಪೀಠ ತರಾಟೆ ತೆಗೆದುಕೊಂಡಿತು.

English summary
SC refuses to impose blanket ban on crackers,asks Centre to create awareness against pollution till Deepavali. Arjun Gopal, Aarav Bhandari and Zoya Rao Bhasin, all aged between 6 and 14 months, had knocked the doors of the Supreme Court seeking immediate steps to curb pollution
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X