ಏಪ್ರಿಲ್ ನಿಂದ 3 ಲಕ್ಷ ರುಪಾಯಿ ಮೇಲಿನ ನಗದು ವ್ಯವಹಾರಕ್ಕೆ ಬ್ರೇಕ್!
ನವದೆಹಲಿ, ಫೆಬ್ರವರಿ 1: ತೆರಿಗೆ ಕದಿಯುವುದನ್ನು ತಡೆಯುವುದಕ್ಕೆ ಹಾಗೂ ಭ್ರಷ್ಟಾಚಾರ ತಡೆಗಾಗಿ 3 ಲಕ್ಷ ರುಪಾಯಿ ಮೇಲ್ಪಟ್ಟ ನಗದು ವ್ಯವಹಾರ ಮಾಡುವಂತಿಲ್ಲ ಎಂದು ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ. ಏಪ್ರಿಲ್ ನಿಂದ ಮೂರು ಲಕ್ಷ ರುಪಾಯಿ ಮೇಲಿನ ನಗದು ವ್ಯವಹಾರ ಮಾಡುವಂತಿಲ್ಲ.
ವಿಶೇಷ ಕಾರ್ಯಾಚರಣೆ ತಂಡದ ಶಿಫಾರಸನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸಿ, ಜಾರಿಗೆ ತಂದಿದೆ. ಈ ತಂಡದ ನೇತೃತ್ವವನ್ನು ಮಾಜಿ ನ್ಯಾಯಾಧೀಶ ಎಂ.ಬಿ.ಷಾ ವಹಿಸಿದ್ದರು. ಮತ್ತು ವರದಿಯನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದರು. ವಿವಿಧ ದೇಶಗಳಲ್ಲಿ ನಗದು ವ್ಯವಹಾರಕ್ಕೆ ಇರುವ ನಿಯಮಗಳು ಹಾಗೂ ವಿವಿಧ ವರದಿಗಳನ್ನು ಗಮನಿಸಿ ಈ ಶಿಫಾರಸು ಮಾಡಲಾಗಿದೆ.

ಅರುಣ್ ಜೇಟ್ಲಿ ಅವರು ಹೇಳಿದ ಪ್ರಕಾರ, ಮೂರು ಲಕ್ಷ ಮತ್ತು ಹೆಚ್ಚು ಮೊತ್ತದ ನಗದು ವ್ಯವಹಾರ ಪೂರ್ತಿ ನಿಷೇಧಿಸಲು ವಿಶೇಷ ಕಾರ್ಯಾಚರಣೆ ತಂಡ ಶಿಫಾರಸು ಮಾಡಿತ್ತು. ಅದನ್ನು ಸರಕಾರ ಅನುಮೋದಿಸಿದೆ. ಇನ್ನು ರಾಜಕೀಯ ಪಕ್ಷಗಳು ವಂತಿಗೆ ಸಂಗ್ರಹವನ್ನು ಎರಡು ಸಾವಿರ ರುಪಾಯಿ ಮೊತ್ತ ಇದ್ದರೂ ಚೆಕ್ ಅಥವಾ ಡಿಜಿಟಲ್ ವ್ಯವಹಾರದ ಮೂಲಕವೇ ಪಡೆಯಬೇಕು. ಈ ಹಿಂದೆ ಆ ಮೊತ್ತ ಇಪ್ಪತ್ತು ಸಾವಿರ ಇತ್ತು. ಅಷ್ಟರವರೆಗೆ ಮೂಲ ತಿಳಿಸುವ ಅಗತ್ಯ ಇರಲಿಲ್ಲ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications