ಕಾಂಗ್ರೆಸ್ಸಿಗೆ ಭಾರೀ ಆಘಾತ ನೀಡಿದ ಮಾಯಾವತಿ-ಅಖಿಲೇಶ್ ನಡೆ
ನವದೆಹಲಿ, ಜನವರಿ 05: ಲೋಕಸಭಾ ಚುನಾವಣೆಗೂ ಮುನ್ನ ಸೃಷ್ಟಿಯಾಗಲಿರುವ ಸಂಭಾವ್ಯ ಮಹಾಘಟಬಂಧನ ಅಥವಾ ಮಹಾಮೈತ್ರಿಕೂಟಕ್ಕೆ ಆರಂಭಿಕ ವಿಘ್ನ ತಲೆದೂರಿದಂತಾಗಿದೆ.
ಮಹಾಮೈತ್ರಿಕೂಟದಲ್ಲಿ ಕಾಂಗ್ರೆಸ್ ಇರುವುದಾದರೆ ನಮ್ಮ ಬೆಂಬಲವಿಲ್ಲ. ನಾವು ಕಾಂಗ್ರೆಸ್ ಅನ್ನು ಹೊರಗಿಟ್ಟು ಮಹಾಘಟಬಂಧನ ನಿರ್ಮಿಸುತ್ತೇವೆ ಎಂದು ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಮತ್ತು ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಒಮ್ಮತದ ನಿರ್ಧಾರಕ್ಕೆ ಬಂದಿದ್ದಾರೆ.

ನವದೆಹಲಿಯಲ್ಲಿ ಶುಕ್ರವಾರ ಮಾಯಾವತಿ ಅವರನ್ನು ಅಖಿಲೇಶ್ ಯಾದವ್ ಭೇಟಿಯಾದರು. ಕಾಂಗ್ರೆಸ್ ನಿಂದ ಉಭಯ ನಾಯಕರೂ ಬೇಸರಗೊಂಡಿದ್ದು, ಅದನ್ನು ದೂರವಿಟ್ಟು ಸಣ್ಣ ಪುಟ್ಟ ಪ್ರಾದೇಶಿಕ ಪಕ್ಷಗಳನ್ನು ಸೇರಿಸಿ ಮೈತ್ರಿಕೂಟ ನಿರ್ಮಿಸಲು ಮುಂದಾಗಿವೆ.

ವಿರೋಧಿಗಳ ದೋಸ್ತಿ!
ಒಂದು ಕಾಲದಲ್ಲಿ ವಿರೋಧಿಗಳಾಗಿದ್ದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಮತ್ತು ಬಹುಜನ ಸಮಾಜವಾದಿ ಪಕ್ಷದ ನಾಯಕಿ ಮಾಯಾವತಿ ಅವರಿಬ್ಬರೂ ಈಗ ಕುಚುಕು ಸ್ನೇಹಿತರಾಗಿದ್ದಾರೆ. ಸ್ವತಂತ್ರವಾಗಿ ಚುನಾವಣೆ ಎದುರಿಸುವುದು ಕಷ್ಟ ಎಂಬುದನ್ನು ಅರಿತ ಎರಡೂ ಪಕ್ಷಗಳೂ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಮಣಿಸಲು ಒಂದಾಗಿಯೇ ಲೋಕಸಭಾ ಚುನಾವಣೆ ಎದುರಿಸಲಿವೆ.

ಜ.15 ರ ನಂತರ ಸೀಟು ಹಂಚಿಕೆ
ಜನವರಿ 15 ರ ನಂತರ ಎರಡೂ ಪಕ್ಷಗಳೂ ಸೀಟು ಹಂಚಿಕೆಯ ಬಗ್ಗೆ ಚರ್ಚೆ ನಡೆಸಲಿವೆ. ಚುನಾವಣಾ ಪೂರ್ವ ಮೈತ್ರಿಯಾದ್ದರಿಂದ ಎಸ್ಪಿ ಮತ್ತು ಬಿಎಸ್ಪಿ ಒಂದಾದರೆ 60 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಂಥ ರಾಜ್ಯಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡು ಪಕ್ಷಗಳಿಗೆ ನಷ್ಟವಾಗುವ ಸಾಧ್ಯತೆ ಇದೆ.

ಕಾಂಗ್ರೆಸ್ ಗೆ ವಾರ್ನಿಂಗ್ ನೀಡಿದ್ದ ಮಾಯಾ!
ಪರಿಶಿಷ್ಟ ಜಾತಿಯ ಜನರ ಮೇಲೆ ದಾಖಲಾದ ದೂರುಗಳನ್ನು ಕಾಂಗ್ರೆಸ್ ವಾಪಸ್ ಪಡೆಯದಿದ್ದರೆ ನಾವು ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲೂ ಕಾಂಗ್ರೆಸ್ಸಿಗೆ ನೀಡುವ ಬೆಂಬಲ ವಾಪಸ್ ಪಡೆಯುತ್ತೇವೆ ಎಂದು ಈಗಾಗಲೇ ಮಾಯಾವತಿ ಕಾಂಗ್ರೆಸ್ಸಿಗೆ ಖಡಕ್ ವಾರ್ನಿಂಗ್ ನೀಡಿದ್ದರು. ಆದರೆ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಸಮಯದಲ್ಲಿ ಬಿಎಸ್ಪಿ ಮತ್ತು ಎಸ್ಪಿಯೊಂದಿಗೆ ನಿಷ್ಠುರ ಕಟ್ಟಿಕೊಳ್ಳಲು ಕಾಂಗ್ರೆಸ್ ಸಿದ್ಧವಿಲ್ಲ!

ಕಾಂಗ್ರೆಸ್ ಮೇಲೆ ಅಖಿಲೇಶ್ ಮುನಿಸು
ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ಸರ್ಕಾರ ಅಧಿಕಾರಕ್ಕೆ ಬೇಕಿದ್ದ ಬಹುಮತ ಸಿಗುವಲ್ಲಿ ಅಖಿಲಾಶ್ ಪಾತ್ರ ಅಪಾರ. ತಮ್ಮ ಪಕ್ಷದ ಏಕೈಕ ಶಾಸಕ ಕಾಂಗ್ರೆಸ್ಸಿಗೆ ಬೆಂಬಲ ನೀಡುವ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬರುವಂತೆ ಅಖಿಲೇಶ್ ಮಾಡಿದ್ದರು. ಆ ಸಂದರ್ಭದಲ್ಲಿ ತಮ್ಮ ಪಕ್ಷದ ಶಾಸಕನಿಗೆ ಮಂತ್ರಿಸ್ಥಾನ ನೀಡಬೇಕು ಎಂಬ ಬೇಡಿಕೆ ಇಟ್ಟಿದ್ದರು. ಆದರೆ ಆ ಮಾತನ್ನು ಕಾಂಗ್ರೆಸ್ ಉಳಿಸಿಕೊಳ್ಳದಿರುವುದು ಅಖಿಲೇಶ್ ಯಾದವ್ ಗೆ ಕೋಪ ತರಿಸಿದೆ.
-
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications