ಅಣ್ವಸ್ತ್ರ ಬಳಕೆ: ಸಂಚಲನ ಮೂಡಿಸಿದ ರಾಜನಾಥ್ ಸಿಂಗ್ ಹೇಳಿಕೆ
ನವದೆಹಲಿ, ಆಗಸ್ಟ್ 16: ಪಾಕಿಸ್ತಾನದೊಂದಿಗಿನ ಸಂಬಂಧ ಮತ್ತಷ್ಟು ಹಳಸಿ, ಆತಂಕದ ಸನ್ನಿವೇಶ ಸೃಷ್ಟಿಯಾಗಿರುವ ಸಂದರ್ಭದಲ್ಲಿಯೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನೀಡಿರುವ ಹೇಳಿಕೆ ತೀವ್ರ ಸಂಚಲನ ಮೂಡಿಸಿದೆ.
'ನಾವು ಮೊದಲು ಅಣ್ವಸ್ತ್ರ ಬಳಕೆ ಮಾಡುವುದಿಲ್ಲ' ಎಂಬ ನೀತಿಯನ್ನು ಭವಿಷ್ಯದಲ್ಲಿಯೂ ಅನುಸರಿಸುತ್ತೇವೆ ಎಂದು ಹೇಳಲಾಗದು. ಮುಂದೆ ಅದು ಬದಲಾಗಬಹುದು ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಪೋಖ್ರಾನ್ನಲ್ಲಿ ಶುಕ್ರವಾರ ಮಾತನಾಡಿದ ಅವರು, ''ಇಂದಿನವರೆಗೂ ನಮ್ಮ ಪರಮಾಣು ನೀತಿಯು 'ಮೊದಲು ಬಳಕೆ ಇಲ್ಲ' ಎಂಬುದಾಗಿತ್ತು. ಮುಂದೆ ಆಗುವುದು ಭವಿಷ್ಯದ ಸನ್ನಿವೇಶಗಳನ್ನು ಅವಲಂಬಿಸಿರುತ್ತದೆ'' ಎಂದು ಹೇಳಿದ್ದಾರೆ.
ಬಳಿಕ ಟ್ವೀಟ್ ಮಾಡಿರುವ ರಾಜನಾಥ್ ಸಿಂಗ್, ''ಪೋಖ್ರಾನ್ ಪ್ರದೇಶವು ಅಟಲ್ಜಿ ಅವರು ಭಾರತವನ್ನು ಪರಮಾಣು ಶಕ್ತಿಯ ದೇಶವನ್ನಾಗಿ ಮಾಡುವ ಅಚಲ ನಿಲುವಿಗೆ ಸಾಕ್ಷಿಯಾಗಿತ್ತು. ಈಗಲೂ ನಾವು ಅಣ್ವಸ್ತ್ರದ ಮೊದಲ ಬಳಕೆ ಮಾಡುವುದಿಲ್ಲ ಎಂಬ ನಿಲುವಿಗೆ ದೃಢವಾಗಿ ಅಂಟಿಕೊಂಡಿದ್ದೇವೆ. ಈ ನೀತಿಗೆ ಭಾರತ ಕಠಿಣವಾಗಿ ಬದ್ಧವಾಗಿರುತ್ತದೆ. ಭವಿಷ್ಯದಲ್ಲಿ ನಡೆಯುವುದು ಸನ್ನಿವೇಶಗಳ ಮೇಲೆ ಅವಲಂಬಿತವಾಗಿರುತ್ತದೆ'' ಎಂದು ಹೇಳಿದ್ದಾರೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಮೊದಲ ವರ್ಷದ ಪುಣ್ಯತಿಥಿಯಂದು ಅವರಿಗೆ ಗೌರವ ಸಲ್ಲಿಸಲು ರಾಜನಾಥ್ ಸಿಂಗ್ ಅವರು ಶುಕ್ರವಾರ ಬೆಳಿಗ್ಗೆ ಪೋಖ್ರಾನ್ಗೆ ಭೇಟಿ ನೀಡಿದ್ದರು.
''ಭಾರತವು ಅಣ್ವಸ್ತ್ರವುಳ್ಳ ಜವಾಬ್ದಾರಿಯುತ ದೇಶವೆಂಬ ಮಾನ್ಯತೆ ಪಡೆದುಕೊಂಡಿರುವುದು ಈ ದೇಶದ ಪ್ರತಿಯೊಬ್ಬ ಪ್ರಜೆಗೂ ರಾಷ್ಟ್ರೀಯ ಹೆಮ್ಮೆಯ ವಿಚಾರವಾಗಿದೆ. ಅಟಲ್ಜಿ ಅವರ ಮಹಾನ್ ಚೇತನಕ್ಕೆ ಭಾರತ ಸದಾ ಋಣಿಯಾಗಿರುತ್ತದೆ'' ಎಂದು ರಾಜನಾಥ್ ಹೇಳಿದ್ದಾರೆ.
ನರೇಂದ್ರ ಮೋದಿ ಸರ್ಕಾರದ ಮೊದಲ ಅವಧಿಯಲ್ಲಿ ರಕ್ಷಣಾ ಸಚಿವರಾಗಿದ್ದ ಮನೋಹರ್ ಪರಿಕ್ಕರ್ ಅವರು 2016ರಲ್ಲಿ ಇದೇ ರೀತಿಯ ಹೇಳಿಕೆ ನೀಡಿದ್ದರು. ಭಾರತವು 'ಅಣ್ವಸ್ತ್ರ ಮೊದಲು ಬಳಸುವುದಿಲ್ಲ' ಎಂಬ ನೀತಿಯನ್ನು ಏಕೆ ಪಾಲಿಸಬೇಕು? ಎನ್ನುವ ಮೂಲಕ ವಿವಾದ ಸೃಷ್ಟಿಸಿದ್ದರು.
-
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications