'ಕೋವಿಡ್ ಲಾಕ್ಡೌನ್ನಿಂದ ಮಕ್ಕಳ ಮೇಲಿನ ದೌರ್ಜನ್ಯ ಹೆಚ್ಚಳ ಬಗ್ಗೆ ಮಾಹಿತಿಯಿಲ್ಲ': ಕೇಂದ್ರ ಸಚಿವೆ
ನವದೆಹಲಿ, ಜು.22: ''ಕೋವಿಡ್ ಸಂಬಂಧಿತ ಲಾಕ್ಡೌನ್ ಸನ್ನಿವೇಶಗಳಿಂದಾಗಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳ ಹೆಚ್ಚಳ ಬಗ್ಗೆ ಯಾವುದೇ ಮಾಹಿತಿ ಇಲ್ಲ,'' ಎಂದು ಕೇಂದ್ರ ಸರ್ಕಾರ ಗುರುವಾರ ತಿಳಿಸಿದೆ.
ಹಾಗೆಯೇ ''ಕೊರೊನಾವೈರಸ್ ಕಾರಣದಿಂದಾಗಿ ಉಂಟಾದ ಆರ್ಥಿಕ ಸಮಸ್ಯೆಯಿಂದಾಗಿ ದೇಶಾದ್ಯಂತ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಯಾವುದೇ ಮಾಹಿತಿಯಿಲ್ಲ,'' ಎಂದು ಸರ್ಕಾರ ಹೇಳಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ಈ ಹೇಳಿಕೆ ನೀಡಿದ್ದಾರೆ. ಸಾಂಕ್ರಾಮಿಕ ಸಮಯದಲ್ಲಿ ಮಕ್ಕಳ ಆರೈಕೆ ಮತ್ತು ರಕ್ಷಣೆಗಾಗಿ ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಪ್ರದೇಶದ ಆಡಳಿತಗಳಿಗೆ ತಮ್ಮ ಸಚಿವಾಲಯವು ಸಲಹೆಗಳು ಮತ್ತು ಮಾರ್ಗಸೂಚಿಗಳನ್ನು ನೀಡಿದೆ ಎಂದು ಕೂಡಾ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

"ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ (ಎನ್ಸಿಆರ್ಬಿ) ಒದಗಿಸಿದ ಮಾಹಿತಿಯ ಪ್ರಕಾರ, ಕೋವಿಡ್ ಸಂಬಂಧಿತ ಲಾಕ್ಡೌನ್ನಿಂದಾಗಿ ಮಕ್ಕಳ ಮೇಲಿನ ದೌರ್ಜನ್ಯ ಹೆಚ್ಚಾಗಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಹಾಗೆಯೇ ಕೋವಿಡ್ನಿಂದ ಉಂಟಾದ ಆರ್ಥಿಕ ತೊಂದರೆಗಳಿಂದ ದೇಶದಲ್ಲಿ ಬಾಲ್ಯ ವಿವಾಹ ಪ್ರಕರಣಗಳ ಹೆಚ್ಚಳದ ಮಾಹಿತಿಯೂ ಇಲ್ಲ," ಎಂದಿದ್ದಾರೆ.
ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಚಿವೆ ಇರಾನಿ, ಕಳೆದ ಐದು ವರ್ಷಗಳಲ್ಲಿ ಎನ್ಸಿಪಿಸಿಆರ್ ಸ್ವೀಕರಿಸಿದ ಮತ್ತು ವಿಲೇವಾರಿ ಮಾಡಿದ ದೂರುಗಳ ಬಗ್ಗೆ ಮಾಹಿತಿ ನೀಡಿದರು. ಅಂಕಿಅಂಶಗಳ ಪ್ರಕಾರ, 2016-17 ರಿಂದ 2020-21ರವರೆಗಿನ ಕಳೆದ ಐದು ವರ್ಷಗಳಲ್ಲಿ ಮಕ್ಕಳ ರಕ್ಷಣೆಗಾಗಿ ರಾಷ್ಟ್ರೀಯ ಆಯೋಗವು 50,857 ದೂರುಗಳನ್ನು ಸ್ವೀಕರಿಸಿದೆ. ಅದರಲ್ಲಿ 20,836 ವಿಲೇವಾರಿ ಮಾಡಲಾಗಿದೆ. ಮಧ್ಯಪ್ರದೇಶದಿಂದ 9,572, ಉತ್ತರ ಪ್ರದೇಶ 5,340, ಛತ್ತೀಸ್ಗಢದಿಂದ 4,685 ಮತ್ತು ಒಡಿಶಾ 4,276 ಕ್ಕೆ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಇದು ಅಧಿಕ ಪ್ರಕರಣಗಳು ಆಗಿದೆ.
ಈ ನಡುವೆ ಕೊರೊನಾ ಸೋಂಕು ಆರಂಭವಾದ 14 ತಿಂಗಳುಗಳಲ್ಲಿ 21 ದೇಶದಗಳಲ್ಲಿ ಸುಮಾರು 1.5 ಮಿಲಿಯನ್ ಮಕ್ಕಳು ಪೋಷಕರನ್ನು ಕಳೆದುಕೊಂಡಿದ್ದಾರೆ. ಈ ಪೈಕಿ 1,90,000 ಮಕ್ಕಳು ಭಾರತದಲ್ಲಿದ್ದಾರೆ ಎಂದು ಲ್ಯಾನ್ಸೆಟ್ ವರದಿ ಹೇಳಿದೆ. ಭಾರತದಲ್ಲಿ 2,898 ಮಕ್ಕಳು ತಮ್ಮ ಪಾಲನೆ ಮಾಡುತ್ತಿದ್ದ ಅಜ್ಜಿಯಂದಿರನ್ನು ಕಳೆದುಕೊಂಡಿದ್ದರೆ, 9 ಮಕ್ಕಳು ಅಜ್ಜಿ ಅಜ್ಜ ಇಬ್ಬರನ್ನೂ ಕಳೆದುಕೊಂಡಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications