ವಿಪಕ್ಷಗಳಲ್ಲಿ ಒಗ್ಗಟ್ಟಿಲ್ಲ ಅಂದವರ್ಯಾರು? ಸೋನಿಯಾ ಗಾಂಧಿ ಪ್ರಶ್ನೆ
ನವದೆಹಲಿ, ಆಗಸ್ಟ್ 09: "ರಾಜ್ಯಸಭೆ ಉಪಸಭಾಪತಿ ಸ್ಥಾನ ಸಿಕ್ಕಿಲ್ಲವೆಂಬ ಕಾರಣಕ್ಕೆ ವಿಪಕ್ಷಗಳಲ್ಲಿ ಒಗ್ಗಟ್ಟಿಲ್ಲ ಎಂದವರ್ಯಾರು?" ಎಂದು ಕಾಂಗ್ರೆಸ್ ನಾಯಕಿ, ಯುಪಿಎ ಚೇರ್ ಪರ್ಸನ್ ಸೋನಿಯಾ ಗಾಂಧಿ ಪ್ರಶ್ನಿಸಿದ್ದಾರೆ.
ಮುಂಗಾರು ಅಧಿವೇಶನದ ಸಂದರ್ಭಲ್ಲಿ ಇಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ಹರಿವಂಶ ನಾರಾಯಣ ಸಿಂಗ್ ಅವರು ಕಾಂಗ್ರೆಸ್ ಅಭ್ಯರ್ಥಿ ಬಿ ಕೆ ಹರಿಪ್ರಸಾದ್ ಅವರ ವಿರುದ್ಧ ಜಯ ಸಾಧಿಸಿದರು. ಹರಿವಂಶ ಸಿಂಗ್ 125 ಮತಗಳನ್ನು ಪಡೆದರೆ, ಹರಿಪ್ರಸಾದ್ 105 ಮತಗಳನ್ನು ಪಡೆದರು.
ಜಂತರ್ ಮಂತರ್ ನಲ್ಲಿ ಮೋದಿ ವಿರುದ್ಧ ರಾಹುಲ್ ಗುಡುಗು!
ಚುನಾವಣೆಯ ನಂತರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸೋನಿಯಾ ಗಾಂಧಿ, 'ಕೆಲವು ಬಾರಿ ನಾವು ಗೆಲ್ಲುತ್ತೇವೆ, ಕೆಲವು ಬಾರಿ ಸೋಲುತ್ತೇವೆ. ಅದು ಸಹಜ' ಎಂದರು.
"ಉಪಸಭಾಪತಿ ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ ಎಂಬ ಕಾರಣಕ್ಕೆ ವಿಪಕ್ಷಗಳಲ್ಲಿ ಒಗ್ಗಟ್ಟಿಲ್ಲ ಎನ್ನುವುದಕ್ಕೆ ಸಾಧ್ಯವಿಲ್ಲ. ನಾವು ಒಗ್ಗಟ್ಟಿನಿಂದಿದ್ದೇವೆ" ಎಂದು ಅವರು ಹೇಳಿದರು.
ರಾಜ್ಯಸಭಾ ಉಪಸಭಾಪತಿಯಾಗಿದ್ದ ಪಿಜೆ ಕುರಿಯನ್ ಅವರ ಅಧಿಕಾರಾವಧಿ ಜುಲೈ 1 ರಂದು ಮುಕ್ತಾಯವಾಗಿದ್ದು, ತೆರವಾದ ಆ ಸ್ಥಾನಕ್ಕೆ ಇಂದು ಚುನಾವಣೆ ನಡೆದಿತ್ತು.