ಮೋದಿ ಅಲೆ ಮಾಧ್ಯಮದ ಸೃಷ್ಟಿ : ಸಿಂಗ್ ಉವಾಚ
ಗೌಹಾತಿ, ಏ. 24 : "ದೇಶದಲ್ಲಿ ಮೋದಿ ಅಲೆ ಇದೆ ಎಂದು ನನಗೆ ಅನಿಸುತ್ತಿಲ್ಲ. ಇದೆಲ್ಲ ಮಾಧ್ಯಮದ ಸೃಷ್ಟಿ. ಮೋದಿ ಅಲೆಯಿಂದ ದೇಶವೇನು ಕೊಚ್ಚಿ ಹೋಗುತ್ತಿಲ್ಲ" ಎಂದು ಹತ್ತು ವರ್ಷ ಪ್ರಧಾನಿಯಾಗಿ ದೇಶ ಆಳಿದ ನಂತರ ತೆರೆಮರೆಗೆ ಸರಿಯುತ್ತಿರುವ ಡಾ. ಮನಮೋಹನ ಸಿಂಗ್ ಅವರು, ಮತದಾನ ಮಾಡಿದ ನಂತರ ಪ್ರತಿಕ್ರಿಯಿಸಿದ್ದಾರೆ.
ದೇಶಾದ್ಯಂತ ಲೋಕಸಭೆ ಚುನಾವಣೆಯ ಪ್ರಚಾರ, ಹಲವಾರು ರಾಜ್ಯಗಳಲ್ಲಿ ಮತದಾನ ನಡೆಯುತ್ತಿದ್ದರೂ ಒಂದೇ ಒಂದು ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳದ, ಕಾಂಗ್ರೆಸ್ಸಿಗೆ ಒಂದೇ ಒಂದು ಮತ ನೀಡಿ ಎಂದು ಕೇಳದ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರು, ಮತದಾನ ನಡೆಸಿದ ನಂತರ ಮೊದಲ ಬಾರಿ ಮೋದಿ ಅಲೆಯ ಬಗ್ಗೆ ಮಾತನಾಡಿದ್ದಾರೆ. [ಜನಪ್ರವಾಹದ ನಡುವೆ ಮೋದಿ ನಾಮಪತ್ರ ಸಲ್ಲಿಕೆ]

ತಮ್ಮ ಪತ್ನಿ ಗುರುಶರಣ್ ಸಿಂಗ್ ಜೊತೆ ದಿಸ್ಪುರ ಸರಕಾರಿ ಮಾಧ್ಯಮಿಕ ಶಾಲೆಯಲ್ಲಿ ಮತದಾನ ಮಾಡಿದ ನಂತರ ಸಿಂಗ್ ಅವರು ಪತ್ರಕರ್ತರೊಡನೆ ಕೆಲಸಮಯ ಹರಟಿದರು. ಪ್ರಶ್ನೆಯೊಂದಕ್ಕೆ, "ದೇಶದಲ್ಲಿ ಕಾಂಗ್ರೆಸ್ ತನ್ನ ನೆಲೆ ಕಳೆದುಕೊಳ್ಳುತ್ತಿದೆ ಎಂದು ನನಗೆ ಅನಿಸುತ್ತಿಲ್ಲ. ಮೇ 16ರಂದು ಫಲಿತಾಂಶ ಬರುವವರೆಗೆ ಕಾದುನೋಡಿ. ಕಾಂಗ್ರೆಸ್ ಖಂಡಿತ ಬಹುಮತ ಗಳಿಸುತ್ತದೆ" ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
1991ರಿಂದ ರಾಜ್ಯಸಭೆಯಲ್ಲಿ ಆಸ್ಸಾಂ ರಾಜ್ಯವನ್ನು ಡಾ. ಮನಮೋಹನ ಸಿಂಗ್ ಅವರು ಪ್ರತಿನಿಧಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ದಿ. ಹಿತೇಶ್ವರ್ ಸೈಕಿಯಾ ಅವರ ಪತ್ನಿ ಹೆಮೋಪ್ರವಾ ಸೈಕಿಯಾ ಅವರಿಗೆ ಸೇರಿದ ಸರುಮೊಟೋರಿಯಾ ಪ್ರದೇಶದಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ಸಿಂಗ್ ಅವರು ಬಾಡಿಗೆಗಿದ್ದಾರೆ ಎಂದು ದಾಖಲೆಯಲ್ಲಿ ತೋರಿಸಲಾಗಿದೆ.
ದೆಹಲಿಯಿಂದ ತಮ್ಮ ಪತ್ನಿಯ ಜೊತೆಗೆ ಐಎಎಫ್ ನ ವಿಶೇಷ ವಿಮಾನದಲ್ಲಿ ಗೌಹಾತಿಯ ಲೋಕಪ್ರಿಯ ಗೋಪಿನಾಥ್ ಬೊರ್ಡೊಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಅವರು, ಐಎಎಫ್ ನ ಹೆಲಿಕಾಪ್ಟರ್ ಮುಖಾಂತರ ಖಾನಾಪರಕ್ಕೆ ಬಂದಿಳಿದರು. ಮುಖ್ಯಮಂತ್ರಿ ತರುಣ್ ಗೊಗೊಯ್ ಅವರು ಸಿಂಗ್ ದಂಪತಿಗಳನ್ನು ಬರಮಾಡಿಕೊಂಡರು.
ದೇಶದ ಎಲ್ಲ ನಾಗರಿಕರು ಈ ಮಹಾ ಚುನಾವಣೆಯಲ್ಲಿ ತಪ್ಪದೆ ಮತ ಚಲಾಯಿಸಬೇಕೆಂದು ಡಾ. ಮನಮೋಹನ ಸಿಂಗ್ ಅವರು ಆಗ್ರಹಿಸಿದ್ದಾರೆ. (ಪಿಟಿಐ)
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications