ಅರವಿಂದ ಕೇಜ್ರಿವಾಲ್ ಸಂಪುಟದಲ್ಲಿ ಹೊಸ ಮುಖಗಳಿಲ್ಲ!
Recommended Video
ನವದೆಹಲಿ, ಫೆಬ್ರವರಿ 14: ವಿಧಾನಸಭೆ ಚುನಾವಣೆಯಲ್ಲಿ ಭಾರಿ ಬಹುಮತದಿಂದ ಗೆದ್ದು ಬೀಗುತ್ತಿರುವ ಅರವಿಂದ ಕೇಜ್ರಿವಾಲ್ ಅವರು ತಮ್ಮ ಹಳೆಯ ಸಂಪುಟವನ್ನೇ ಈ ಅವಧಿಗೂ ಮುಂದುವರೆಸಲಿದ್ದಾರೆ.
ಕಳೆದ ಅವಧಿಯಲ್ಲಿ ಮಂತ್ರಿಗಳಾಗಿದ್ದ ತಮ್ಮ ಸಹವರ್ತಿಗಳನ್ನೇ ಈ ಅವಧಿಗೂ ಅರವಿಂದ ಕೇಜ್ರಿವಾಲ್ ನೆಚ್ಚಿಕೊಂಡಿದ್ದಾರೆ. ಕಳೆದ ಬಾರಿ ಉತ್ತಮ ಕೆಲಸ ಮಾಡಿ ದೆಹಲಿ ಬದಲಾವಣೆಗೆ ಕಾರಣವಾದವರನ್ನೇ ಈ ಬಾರಿಯೂ ಉಳಿಸಿಕೊಳ್ಳುವುದು ಉತ್ತಮ ಎಂದು ಅರವಿಂದ ಕೇಜ್ರಿವಾಲ್ ಯೋಚಿಸಿದ್ದಾರೆ.
ಮನೀಷ್ ಸಿಸೋಡಿಯಾ, ಸತ್ಯೇಂದರ್ ಜೈನ್, ಗೋಪಾಲ್ ರಾಯ್, ಕೈಲಾಶ್ ಗಹಲೋಟ್, ಇಮ್ರಾನ್ ಹುಸೇನ್ ಮತ್ತು ರಾಜೇಂದ್ರ ಪಾಲ್ ಗೌತಮ್ ಅರವಿಂದ ಕೇಜ್ರಿವಾಲ್ ಸಂಪುಟದ ಸಚಿವರಾಗಲಿದ್ದಾರೆ.

ಫೆಬ್ರವರಿ 16 ರ ಭಾನುವಾರ ಅರವಿಂದ ಕೇಜ್ರಿವಾಲ್ ಅವರು ಸಿಎಂ ಆಗಿ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಅದೇ ದಿನ ಸಂಪುಟದ ಸಚಿವರೂ ಸಹ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಹೊಸದಾಗಿ ವಿಧಾನಸಭೆಗೆ ಆಯ್ಕೆ ಆಗಿರುವ ಆತಿಶಿ ಅವರಿಗೆ ಈ ಬಾರಿ ಸಂಪುಟದಲ್ಲಿ ಅವಕಾಶ ಸಿಗಬಹುದು ಎನ್ನಲಾಗಿತ್ತು. ಆದರೆ ಅವರಿಗೆ ಅವಕಾಶ ನೀಡುವ ಸಂಭವ ವಿರಳ. ಅವರಿಗೆ ಅವಕಾಶ ನೀಡಬೇಕು ಎಂಬ ಕೂಗು ಸಹ ಪಕ್ಷದಲ್ಲಿ ಕೇಳಿ ಬಂದಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications