ಅರವಿಂದ ಕೇಜ್ರಿವಾಲ್ ಸಂಪುಟದಲ್ಲಿ ಹೊಸ ಮುಖಗಳಿಲ್ಲ!
Recommended Video
ನವದೆಹಲಿ, ಫೆಬ್ರವರಿ 14: ವಿಧಾನಸಭೆ ಚುನಾವಣೆಯಲ್ಲಿ ಭಾರಿ ಬಹುಮತದಿಂದ ಗೆದ್ದು ಬೀಗುತ್ತಿರುವ ಅರವಿಂದ ಕೇಜ್ರಿವಾಲ್ ಅವರು ತಮ್ಮ ಹಳೆಯ ಸಂಪುಟವನ್ನೇ ಈ ಅವಧಿಗೂ ಮುಂದುವರೆಸಲಿದ್ದಾರೆ.
ಕಳೆದ ಅವಧಿಯಲ್ಲಿ ಮಂತ್ರಿಗಳಾಗಿದ್ದ ತಮ್ಮ ಸಹವರ್ತಿಗಳನ್ನೇ ಈ ಅವಧಿಗೂ ಅರವಿಂದ ಕೇಜ್ರಿವಾಲ್ ನೆಚ್ಚಿಕೊಂಡಿದ್ದಾರೆ. ಕಳೆದ ಬಾರಿ ಉತ್ತಮ ಕೆಲಸ ಮಾಡಿ ದೆಹಲಿ ಬದಲಾವಣೆಗೆ ಕಾರಣವಾದವರನ್ನೇ ಈ ಬಾರಿಯೂ ಉಳಿಸಿಕೊಳ್ಳುವುದು ಉತ್ತಮ ಎಂದು ಅರವಿಂದ ಕೇಜ್ರಿವಾಲ್ ಯೋಚಿಸಿದ್ದಾರೆ.
ಕೇಜ್ರಿವಾಲ್ ಕ್ಯಾಬಿನೆಟ್ಟಿಗೆ ಎಎಪಿ ಪ್ರಮುಖರಾದ ಆತಿಶಿ, ಛಡ್ಡಾ ಇಲ್ಲ?
ಮನೀಷ್ ಸಿಸೋಡಿಯಾ, ಸತ್ಯೇಂದರ್ ಜೈನ್, ಗೋಪಾಲ್ ರಾಯ್, ಕೈಲಾಶ್ ಗಹಲೋಟ್, ಇಮ್ರಾನ್ ಹುಸೇನ್ ಮತ್ತು ರಾಜೇಂದ್ರ ಪಾಲ್ ಗೌತಮ್ ಅರವಿಂದ ಕೇಜ್ರಿವಾಲ್ ಸಂಪುಟದ ಸಚಿವರಾಗಲಿದ್ದಾರೆ.
ಫೆಬ್ರವರಿ 16 ರ ಭಾನುವಾರ ಅರವಿಂದ ಕೇಜ್ರಿವಾಲ್ ಅವರು ಸಿಎಂ ಆಗಿ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಅದೇ ದಿನ ಸಂಪುಟದ ಸಚಿವರೂ ಸಹ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಹೊಸದಾಗಿ ವಿಧಾನಸಭೆಗೆ ಆಯ್ಕೆ ಆಗಿರುವ ಆತಿಶಿ ಅವರಿಗೆ ಈ ಬಾರಿ ಸಂಪುಟದಲ್ಲಿ ಅವಕಾಶ ಸಿಗಬಹುದು ಎನ್ನಲಾಗಿತ್ತು. ಆದರೆ ಅವರಿಗೆ ಅವಕಾಶ ನೀಡುವ ಸಂಭವ ವಿರಳ. ಅವರಿಗೆ ಅವಕಾಶ ನೀಡಬೇಕು ಎಂಬ ಕೂಗು ಸಹ ಪಕ್ಷದಲ್ಲಿ ಕೇಳಿ ಬಂದಿದೆ.