ಸುನಂದಾ ಹತ್ಯೆ ಪ್ರಕರಣದ ಎಫ್ ಬಿಐ ವರದಿ ಬಹಿರಂಗ
ನ್ಯೂಯಾರ್ಕ್, ನ.11: ಕೇಂದ್ರದ ಮಾಜಿ ಸಚಿವ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಬಿಐ ಫೊರೆನ್ಸಿಕ್ಸ್ ವರದಿ ಬಹಿರಂಗಗೊಂಡಿದೆ. ಅಮೆರಿಕದಿಂದ ಬಂದ ವರದಿ ಈಗ ದೆಹಲಿ ಪೊಲೀಸರ ಕೈ ಸೇರಿದೆ. ಸುನಂದಾ ಅವರ ವಿಸೇರಾವನ್ನು ಪರೀಕ್ಷೆಗಾಗಿ ಎಫ್ ಬಿಐಗೆ ಕಳಿಸಲಾಗಿತ್ತು. ಅದರಂತೆ, ಪರೀಕ್ಷೆ ವರದಿಯಲ್ಲಿ ವಿಸೇರಾದಲ್ಲಿ ರೇಡಿಯೋ ವಿಕಿರಣ ಪದಾರ್ಥ ಇಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ.
ಸುನಂದಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿ ತರೂರ್ ಆಪ್ತಬಳಗದ ಮೂವರು ಸಾಕ್ಷಿಗಳ ಪೈಕಿ ಒಬ್ಬರು ಸುಳ್ಳು ಹೇಳಿರುವುದು ಪತ್ತೆಯಾಗಿತ್ತು. ನಂತರ ವಿಸೇರಾದಲ್ಲಿರುವ ವಿಷದಲ್ಲಿ ಇರುವ ಪದಾರ್ಥದ ಬಗ್ಗೆ ಪರೀಕ್ಷೆ ನಡೆಸಲು ಎಫ್ ಬಿಐ ಲ್ಯಾಬ್ ಗೆ ಕಳಿಸಲಾಗಿತ್ತು. [ಸುನಂದಾ ಹತ್ಯೆ : ಕುರುಡು ಕಾಂಚಾಣದ ಕೈವಾಡ?]

ಈ ವರದಿಯಂತೆ ಪೊಲೊನಿಯಂ ಸೇರಿದಂತೆ ಯಾವುದೇ ರೆಡಿಯೋ ವಿಕಿರಣ ವಸ್ತು ಪತ್ತೆಯಾಗಿಲ್ಲ. ಸುನಂದಾ ಪುಷ್ಕರ್ ಸಾವಿಗೆ ಪೊಲೊನಿಯಂ ಕಾರಣ ಎಂಬ ಅನುಮಾನ ವ್ಯಕ್ತವಾದ ಹಿನ್ನಲೆಯಲ್ಲಿ ಈ ಪರೀಕ್ಷೆ ನಡೆಸಲಾಗಿತ್ತು. [ಸುನಂದಾ ಸಾವು ಹುಟ್ಟುಹಾಕಿದ 5 ಪ್ರಶ್ನೆಗಳು]
ಅಮೆರಿಕಕ್ಕೆ ಕಳಿಸಿದ್ದು ಏಕೆ?: ಭಾರತದಲ್ಲಿರುವ ಪ್ರಯೋಗಾಲಯಗಳಲ್ಲಿ ಅಣುವಿಕಿರಣ ಪದಾರ್ಥ ಇರುವುದನ್ನು ಪತ್ತೆ ಮಾಡಲು ಸಾಧ್ಯವಿರಲಿಲ್ಲ. ಅಲ್ಲದೆ, ಸುನಂದಾ ಸಾವಿಗೆ ಬಳಸಲಾದ ವಿಷವನ್ನು ವಿದೇಶದಿಂದ ಆಮದು ಮಾಡಿಕೊಳ್ಳಲಾಗಿತ್ತು. ಈ ವಿಷದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಎಫ್ ಬಿಐ ನೆರವು ಕೋರಲಾಯಿತು. ವಾಷಿಂಗ್ಟನ್ ನಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಸುನಂದಾ ಅವರ ವಿಸೇರಾ ಸ್ಯಾಂಪಲ್ ಗಳ ಪರೀಕ್ಷೆ ನಡೆಸಲಾಯಿತು.
51 ವರ್ಷ ವಯಸ್ಸಿನ ಸುನಂದಾ ಅವರು ನವದೆಹಲಿಯ ಹೋಟೆಲ್ ನಲ್ಲಿ 2014ರ ಜನವರಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದರು. ಸುನಂದಾ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಬಿಜೆಪಿ ಮುಖಂಡ ಸುಬ್ರಮಣ್ಯ ಸ್ವಾಮಿ ಸೇರಿದಂತೆ ಅನೇಕರು ತನಿಖೆಗೆ ಆಗ್ರಹಿಸಿದ್ದರು.(ಒನ್ ಇಂಡಿಯಾ ಸುದ್ದಿ)
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications