ಅಸಾರಾಂ ಪರ ಸ್ವಾಮಿ ವಾದಿಸಿದರೂ 'ಜಾಮೀನು' ಸಿಗಲಿಲ್ಲ
ನವದೆಹಲಿ, ಜೂ.20: ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿರುವ ಸ್ವಯಂ ಘೋಷಿತ ದೇವ ಮಾನವ ಅಸಾರಾಂ ಬಾಪು ಅವರಿಗೆ ಮತ್ತೆ ಹಿನ್ನೆಡೆಯಾಗಿದೆ. ಬಿಜೆಪಿ ಮುಖಂಡ ಸುಬ್ರಮಣ್ಯ ಸ್ವಾಮಿ ಅವರು ಬಾಪು ಪರ ವಾದಿಸಿದರೂ ಜೋಧಪುರ್ ನ ಕೋರ್ಟ್ ಶನಿವಾರ ಬಾಪು ಜಾಮೀನು ಅರ್ಜಿ ತಿರಸ್ಕರಿಸಿದೆ.
ಖ್ಯಾತ ವಕೀಲ ರಾಮ್ ಜೇಠ್ಮಲಾನಿ, ಸಲ್ಮಾನ್ ಖುರ್ಷಿದ್ ಅವರು ಈ ಹಿಂದೆ ಅಸಾರಾಂ ಬಾಪು ಪರ ವಾದಿಸಿ ವಿಫಲರಾಗಿದ್ದರು. ಅದರೆ, ಸುಬ್ರಮಣ್ಯ ಸ್ವಾಮಿ ತಮ್ಮ ವಕೀಲಿಕೆಯನ್ನು ಮುಂದುವರೆಸುತ್ತಾ ಬಾಪು ಪರ ಸಮರ್ಥ ವಾದ ಮಂಡಿಸಿದರು.
ಅದರೆ, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ನ್ಯಾ. ಮನೋಜ್ ಕುಮಾರ್ ವ್ಯಾಸ್ ಅವರು ವಾದವನ್ನು ತಳ್ಳಿ ಹಾಕಿ ಜಾಮೀನು ಅರ್ಜಿ ತಿರಸ್ಕರಿಸಿದ್ದಾರೆ. [ವಿವಾದದಲ್ಲೇ ಮುಳುಗೆದ್ದ ಟಾಪ್ 10 'ದೇವಮಾನವರು']

73 ವರ್ಷ ವಯಸ್ಸಿನ ಅಸಾರಾಂ ಬಾಪು ಅವರು 2013ರಲ್ಲಿ ಎಸಗಿದ ಈ ಕೃತ್ಯಕ್ಕೆ ಜಾಮೀನು ನೀಡಲು ಸಾಧ್ಯವಿಲ್ಲ. ಈ ಪ್ರಕರಣದಲ್ಲಿ ಬಾಪು ವಿರುದ್ಧ ತಿರುಚಿದ ದಾಖಲೆಗಳು ಅಥವಾ ಷಡ್ಯಂತ್ರ ಕಂಡು ಬಂದಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಸಂತ್ರಸ್ತೆಯ ವಯಸ್ಸು ಹಾಗೂ ಕ್ರೈಂ ನಡೆದ ರೀತಿಯನ್ನು ಪರಿಗಣಿಸಿ ಜಾಮೀನು ತಿರಸ್ಕರಿಸಬೇಕು ಎಂದು ಪ್ರಾಸಿಕ್ಯೂಷನ್ ಕೌನ್ಸೆಲ್ ಪಿಸಿ ಸೋಲಂಕಿ ಮಂಡಿಸಿದ ವಾದಕ್ಕೆ ಮನ್ನಣೆ ಸಿಕ್ಕಿದೆ. ಈ ಹಿಂದೆ ಕೂಡಾ ಇದೇ ಕೋರ್ಟಿನಿಂದ ಎರಡು ಬಾರಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಒಟ್ಟಾರೆ ಆರು ಬಾರಿ ಜಾಮೀನು ಅರ್ಜಿ ತಿರಸ್ಕಾರಗೊಂಡಿದೆ. [ಅಸಾರಾಮ್ ಬಾಪುಗೇಕೆ ಜಾಮೀನು ನೀಡಬೇಕು?: ಸುಪ್ರೀಂ]
ಆಶ್ರಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಅಸಾರಾಂ ಬಾಪು ಬಂಧನಕ್ಕೊಳಗಾಗಿದ್ದಾರೆ. ಹೈಕೋರ್ಟ್, ಸುಪ್ರೀಂಕೋರ್ಟಿನಲ್ಲೂ ಜಾಮೀನು ಸಿಕ್ಕಿಲ್ಲ. (ಪಿಟಿಐ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications