251 ರೂಗೆ ಸ್ಮಾರ್ಟ್ ಫೋನ್ ಆಯ್ತು, ಈಗ ಡ್ರೈಫ್ರೂಟ್ ಮಾರಾಟದಲ್ಲಿ ಕೋಟ್ಯಂತರ ರೂಪಾಯಿ ವಂಚನೆ
ನವದೆಹಲಿ, ಜನವರಿ 12: ಕೇವಲ 251 ರೂಪಾಯಿಗೆ ಸ್ಮಾರ್ಟ್ ಫೋನ್ ಮಾರಾಟ ಮಾಡುತ್ತೇವೆಂದು ಸಾವಿರಾರು ಜನರಿಗೆ ವಂಚನೆ ಎಸಗಿ ಬಂಧಿತನಾಗಿದ್ದವ ಈಗ ಮತ್ತೆ ಡ್ರೈಫ್ರೂಟ್ ಮಾರಾಟದಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿ ಸಿಕ್ಕಿಬಿದ್ದಿದ್ದಾನೆ.
2017ರಲ್ಲಿ ರಿಂಗಿಂಗ್ ಬೆಲ್ಸ್ ಎಂಬ ಹೆಸರಿನ ಕಂಪನಿ ಶುರು ಮಾಡಿ, 251 ರೂಪಾಯಿಗೆ ಸ್ಮಾರ್ಟ್ ಫೋನ್ ಪರಿಚಯಿಸುವುದಾಗಿ ಹೇಳಿ ಎಷ್ಟೋ ಜನರಿಂದ ಹಣ ಪೀಕಿದ್ದ ನೋಯ್ಡಾ ಮೂಲದ ಮೋಹಿತ್ ಗೋಯಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಆದರೂ ಈತ ತನ್ನ ವಂಚನೆಯ ಚಾಳಿಯನ್ನು ಬಿಟ್ಟಿಲ್ಲ. ಇದೀಗ ಡ್ರೈಫ್ರೂಟ್ ಗಳ ಮಾರಾಟದಲ್ಲಿ ಎಷ್ಟೋ ವ್ಯಾಪಾರಿಗಳಿಗೆ ವಂಚನೆ ಮಾಡಿ ಸಿಕ್ಕಿಬಿದ್ದಿದ್ದಾನೆ.
ಡ್ರೈಫ್ರೂಟ್ ಮಾರಾಟದಲ್ಲಿ ಈತ ಸುಮಾರು 200 ಕೋಟಿ ರೂ ವಂಚನೆ ಎಸಗಿರುವುದಾಗಿ ತಿಳಿದುಬಂದಿದೆ. ದುಬೈ ಡ್ರೈಫ್ರೂಟ್ ಮತ್ತು ಸ್ಪೈಸ್ ಹಬ್ ಎಂಬ ಕಂಪನಿ ನಡೆಸುತ್ತಿರುವ ಮೋಹಿತ್, ಹೆಚ್ಚಿನ ಬೆಲೆ ನೀಡುತ್ತೇವೆಂದು ಸಗಟು ವ್ಯಾಪಾರಿಗಳಿಂದ ಡ್ರೈಫ್ರೂಟ್ ಗಳನ್ನು ಖರೀದಿಸುತ್ತಿದ್ದ. ಅವರ ನಂಬಿಕೆ ಗಳಿಸಲು ಆರಂಭದಲ್ಲಿ ಹಣವನ್ನೂ ನೀಡುತ್ತಿದ್ದ. ಆದರೆ ಖರೀದಿ ನಂತರ ವಂಚನೆ ಮಾಡಲು ಶುರು ಮಾಡಿದ್ದ. ಆ ಡ್ರೈಫ್ರೂಟ್ ಗಳನ್ನು ಮಾರಾಟ ಮಾಡಿ ಕೋಟ್ಯಂತರ ರೂಪಾಯಿ ಗಳಿಸಿದ್ದ ಎನ್ನಲಾಗಿದೆ.

ಇದೇ ರೀತಿ ಸುಮಾರು 500 ಮಂದಿಗೆ ವಂಚನೆ ನಡೆಸಿರುವುದಾಗಿ ತಿಳಿದುಬಂದಿದೆ. ಈತನ ವಿರುದ್ಧ 40 ಮಂದಿ ದೂರು ದಾಖಲಿಸಿದ್ದಾರೆ. ಪಂಜಾಬ್, ಹರಿಯಾಣ, ರಾಜಸ್ಥಾನ, ಮಹಾರಾಷ್ರ, ಕರ್ನಾಟಕ, ತಮಿಳುನಾಡಿನಲ್ಲಿ ಡ್ರೈಫ್ರೂಟ್ ಖರೀದಿ ಮಾಡಿ ವಂಚಿಸಿದ್ದಾನೆ ಎಂದು ತಿಳಿದುಬಂದಿದೆ.
ಈತನ ಕಂಪನಿಯಲ್ಲಿ 56 ಮಂದಿ ಕೆಲಸ ಮಾಡುತ್ತಿದ್ದಾರೆ. ಸದ್ಯಕ್ಕೆ ಮೋಹಿತ್ ಗೋಯಲ್ ಹಾಗೂ ಆತನ ಸ್ನೇಹಿತ ಓಂಪ್ರಕಾಶ್ ಜಂಗಿದ್ ಎಂಬುವರನ್ನು ವಂಚನೆ ಪ್ರಕರಣದಲ್ಲಿ ನೋಯ್ಡಾ ಪೊಲೀಸರು ಬಂಧಿಸಿದ್ದಾರೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications