ಟೂಲ್ಕಿಟ್ ವಿವಾದ: ದಿಶಾ ರವಿ ಬಂಧನದ ಬಳಿಕ ವಕೀಲೆ ನಿಕಿತಾ ಜೇಕಬ್ ವಿರುದ್ಧ ವಾರಂಟ್
ನವದೆಹಲಿ, ಫೆಬ್ರವರಿ 15: ರೈತರ ಪ್ರತಿಭಟನೆ ಬೆಂಬಲಿಸುವ ವೇಳೆ ಬಹಿರಂಗವಾದ ಟೂಲ್ಕಿಟ್ಗೆ ಸಂಬಂಧಿಸಿದಂತೆ 22 ವರ್ಷದ ಪರಿಸರ ಹೋರಾಟಗಾರ್ತಿ ದಿಶಾ ರವಿ ಅವರನ್ನು ಬೆಂಗಳೂರಿನಲ್ಲಿ ಬಂಧಿಸಿದ ಬಳಿಕ ದೆಹಲಿ ಪೊಲೀಸರು, ಇನ್ನು ಇಬ್ಬರು ಕಾರ್ಯಕರ್ತರಾದ ನಿಕಿತಾ ಜೇಕಬ್ ಮತ್ತು ಶಂತನು ಅವರ ವಿರುದ್ಧ ವಾರಂಟ್ ಹೊರಡಿಸಿದೆ.
ನಿಕಿತಾ ಮತ್ತು ಶಂತನು ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ. ನಿಕಿತಾ ಜೇಕಬ್ ವೃತ್ತಿಯಿಂದ ವಕೀಲೆಯಾಗಿದ್ದು, ಅವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗ್ರೆಟಾ ಥನ್ಬರ್ಗ್ ಹಂಚಿಕೊಂಡ ಟೂಲ್ಕಿಟ್ ಹಿಂದೆ ಇರುವ ಸಂಘಟನೆ 'ಪಾಯಿಂಟ್ ಫಾರ್ ಜಸ್ಟೀಸ್' ಗಣರಾಜ್ಯೋತ್ಸವ ದಿನದ ರೈತರ ಪ್ರತಿಭಟನೆಗೂ ಮುನ್ನ ಟ್ವಿಟ್ಟರ್ನಲ್ಲಿ ಬಿರುಗಾಳಿ ಎಬ್ಬಿಸುವ ಸಲುವಾಗಿ ನಿಕಿತಾ ಜೇಕಬ್ ಅವರನ್ನು ಸಂಪರ್ಕಿಸಿತ್ತು ಎಂದು ಪೊಲೀಸರು ಆರೋಪಿಸಿದ್ದಾರೆ.

ಪಾಯಿಂಟ್ ಫಾರ್ ಜಸ್ಟೀಸ್ನ ಮುಖ್ಯಸ್ಥ ಎಂಓ ದಲಿವಾಲ್ ಅವರು ನಿಕಿತಾ ಜೇಕಬ್, ದಿಶಾ ರವಿ ಮತ್ತು ಇತರರ ಜತೆ ಜೂಮ್ ಮೂಲಕ ಸಭೆ ನಡೆಸಿದ್ದರು. ಅಲ್ಲಿ ಯೋಜನೆಯನ್ನು ಸಿದ್ಧಪಡಿಸಲಾಗಿತ್ತು. ಪ್ರತಿಭಟನೆಯನ್ನು ತೀವ್ರಗೊಳಿಸುವುದು ಮತ್ತು ಪ್ರತಿಭಟನಾಕಾರರ ನಡುವೆ ಅಸಮಾಧಾನ ಹಾಗೂ ಸುಳ್ಳು ಮಾಹಿತಿಗಳನ್ನು ಹರಡಿಸಲು ಪ್ರಯತ್ನಿಸುವುದರ ಬಗ್ಗೆ ಇದರಲ್ಲಿ ಚರ್ಚಿಸಲಾಗಿತ್ತು ಎಂದು ತಿಳಿಸಿದ್ದಾರೆ.
ಗ್ರೆಟಾ ಟೂಲ್ಕಿಟ್ಅನ್ನು ಆಕಸ್ಮಿಕವಾಗಿ ಬಹಿರಂಗಪಡಿಸಿದ ಬಳಿಕ ನಿಕಿತಾ ತಮ್ಮ ಟ್ವಿಟ್ಟರ್ ಖಾತೆಯನ್ನು ಡಿಲೀಟ್ ಮಾಡಿದ್ದಾರೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications