ಎಟಿಎಂ ಬಳಕೆದಾರರಿಗೆ ಸಿಹಿಸುದ್ದಿ ನೀಡಿದ ಆರ್ ಬಿಐ
ನವದೆಹಲಿ, ಆಗಸ್ಟ್ 15: ಎಟಿಎಂ ಬಳಕೆದಾರರು ನಿರಾಳತೆ ಅನುಭವಿಸುವಂಥ ಸಿಹಿ ಸುದ್ದಿಯೊಂದನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ಬಿಐ) ನೀಡಿದೆ.
ಇಷ್ಟು ದಿನ ಎಟಿಎಂ ಬಳಕೆದಾರರು ಹಣವನ್ನು ಡ್ರಾ ಮಾಡದಿದ್ದರೂ, ಎಟಿಎಂನಲ್ಲಿ ಯಾವುದೇ ರೀತಿಯ ಟ್ರಾನ್ಸಾಕ್ಷನ್ ಮಾಡಿದ್ದರೂ ಅದಕ್ಕೆ ಇಂತಿಷ್ಟು ಶುಲ್ಕ ಕಡಿತವಾಗುತ್ತಿತ್ತು. ಆದರೆ ಇನ್ನು ಮುಂದೆ ಹಣ ಡ್ರಾ ಮಾಡುವ ವ್ಯವಹಾರಕ್ಕೆ ಮಾತ್ರ ಶುಲ್ಕ ಕಡಿತವಾಗಲಿದ್ದು, ನಾನ್ ಕ್ಯಾಶ್ ಟ್ರಾನ್ಸಾಕ್ಷನ್ ಗಳಿಗೆ ಯಾವುದೇ ರೀತಿಯ ಶುಲ್ಕ ಕಡಿತವಾಗುವುದಿಲ್ಲ ಎಂದು ಆರ್ಬಿಐ ತಿಳಿಸಿದೆ.
ತಿಂಗಳಿಗೆ ಗರಿಷ್ಠ ಐದು(ಕೆಲವು ಬ್ಯಾಂಕುಗಳಲ್ಲಿ ಇನ್ನೂ ಕಡಿಮೆ) ಬಾರಿ ಮಾತ್ರವೇ ಉಚಿತ ಎಟಿಎಂ ಟ್ರಾನ್ಸಾಕ್ಷನ್ ಮಾಡಬಹುದಿತ್ತು. ಈ ಸಂದರ್ಭದಲ್ಲಿ ತಾಂತ್ರಿಕ ದೋಷದಿಂದ ಹಣ ಬಾರದೇ ಇದ್ದರೂ, ಅಥವಾ ಇನ್ಯಾವುದೇ ಟ್ರಾನ್ಸಾಕ್ಷನ್ ನಡೆಸಿದರೂ ಶುಲ್ಕ ಕಡಿತವಾಗುತ್ತಿತ್ತು. ಆದ್ದರಿಂದ ಒಂದೇ ಬಾರಿ ಹಣ ಡ್ರಾ ಮಾಡುವಾಗಲೇ ಹೆಚ್ಚಿನ ಮೊತ್ತಡ ಹಣ ಡ್ರಾ ಆಡಬೇಕಾದ ಅನಿವಾರ್ಯ ಸೃಷ್ಟಿಯಾಗಿತ್ತು.

ಇಂಥ ಸಮಸ್ಯೆಗಳನ್ನು ತಪ್ಪಿಸುವ ಸಲುವಾಗಿ ಕೇವಲ ಹಣ ಡ್ರಾ ಮಾಡುವ ಟ್ರಾನ್ಸಾಕ್ಷನ್ನಿಗೆ ಮಾತ್ರವೇ ಶುಲ್ಕ ಕಡಿತಗೊಳಿಸಲು ತೀರ್ಮಾನಿಸಲಾಗಿದೆ.
ಎಟಿಎಂ ಮೂಲಕ ಚೆಕ್ ಬುಕ್ ರಿಕ್ವೆಸ್ಟ್ ಕಳಿಸುವುದು, ಟ್ಯಾಕ್ಸ್ ಕಟ್ಟುವುದು, ಅಥವಾ ನೀವು ಹಣವನ್ನು ಕಳಿಸುವುದು ಇತ್ಯಾದಿ ವ್ಯವಹಾರಗಳನ್ನೂ ಫ್ರಿ ಎಟಿಎಂ ಟ್ರಾನ್ಸಾಕ್ಷನ್ ಎಂದು ಪರಿಗಣಿಸುವುದರಿಂದ ಹಣ ಡ್ರಾ ಮಾಡದ ವ್ಯವಹಾರಕ್ಕೂ ಶುಲ್ಕ ನೀಡಿದಂತಾಗುತ್ತದೆ. ಆದ್ದರಿಂದ ಇವುಗಳನ್ನು ಈ ಪಟ್ಟಿಗೆ ಸೇರಿಸಲಾಗುವುದಿಲ್ಲ ಎಂದು ಆರ್ಬಿಐ ಹೇಳಿದೆ. ಈ ಮೂಲಕ ಎಟಿಎಂ ಬಳಕೆದಾರರಿಗೆ ಸಿಹಿಸುದ್ದಿ ನೀಡಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications