ಪಾರ್ಟಿಯಲ್ಲಾಗಲೀ ಮನೆಯಲ್ಲಾಗಲೀ 'ಎಣ್ಣೆ' ಹೊಡಿಬೇಡಿ ಎಂದ ಐಎಂಡಿ
ನವದೆಹಲಿ, ಡಿಸೆಂಬರ್ 27: ಉತ್ತರ ಭಾರತದಲ್ಲಿ ವಿಪರೀತ ಚಳಿ ಇರಲಿದ್ದು, ಮನೆ ಅಥವಾ ವರ್ಷಾಂತ್ಯದ ಪಾರ್ಟಿಗಳಲ್ಲಿ ಮದ್ಯಪಾನ ಮಾಡಬೇಡಿ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಸಲಹೆ ಮಾಡಿದೆ. ಪಿಟಿಐ ಸುದ್ದಿ ಸಂಸ್ಥೆ ಈ ಬಗ್ಗೆ ವರದಿ ಮಾಡಿದೆ. ಐಎಂಡಿ ಹೇಳಿರುವಂತೆ, ಪಂಜಾಬ್, ಹರಿಯಾಣ, ದೆಹಲಿ, ಉತ್ತರಪ್ರದೇಶ ಮತ್ತು ಉತ್ತರ ರಾಜಸ್ಥಾನದಲ್ಲಿ ಡಿಸೆಂಬರ್ 28ರಿಂದ "ತೀವ್ರ" ಸ್ವರೂಪದ ಶೀತ ಮಾರುತ ಬೀಸಬಹುದು ಎಂದು ಹೇಳಲಾಗಿದೆ.
ಈ ಶೀತ ಮಾರುತದಿಂದ ಜ್ವರ, ಮೂಗು ಕಟ್ಟುವುದು ಮೊದಲಾದ ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು ಎನ್ನಲಾಗಿದೆ. "ಆಲ್ಕೋಹಾಲ್ ಸೇವಿಸಬೇಡಿ. ಇದರಿಂದ ದೇಹದ ಉಷ್ಣಾಂಶ ಕಡಿಮೆಯಾಗುತ್ತದೆ," ಎಂದು ಐಎಂಡಿಯ ಎಚ್ಚರಿಕೆ ಮಾತುಗಳನ್ನು ಉದಾಹರಿಸಿ, ಪಿಟಿಐ ಸುದ್ದಿ ಮಾಡಿದೆ.
''ಆದಷ್ಟು ಮನೆಯೊಳಗೇ ಇರಿ. ವಿಟಮಿನ್- ಸಿ ಹೆಚ್ಚಾಗಿರುವ ಹಣ್ಣನ್ನು ತಿನ್ನಿ. ಚರ್ಮವು ಒಣಗದಂತೆ ಎಚ್ಚರಿಕೆ ವಹಿಸಿ ಎಂದು ತಿಳಿಸಲಾಗಿದೆ. ಭಾನುವಾರ ಹಾದ್ದಾಗಿರುತ್ತದೆ'' ಎಂದು ಐಎಂಡಿ ಪ್ರಾದೇಶಿಕ ಕೇಂದ್ರದ ಮುಖ್ಯಸ್ಥ ಕುಲ್ ದೀಪ್ ಶ್ರೀಗೂ ಸೋಮವಾರ ಸ್ವಲ್ಪ ಮಟ್ಟಿಗೆ ಉಷ್ಣಾಂಶ ಏರಿಕೆ ಆಗಬಹುದು. ಆದರೆ ಈ ಪರಿಹಾರವು ಅಲ್ಪ ಕಾಲವಾಸ್ತವ ಹೇಳಿದ್ದಾರೆ.

ಉತ್ತರ ಭಾರತದಲ್ಲಿ ತಾಪಮಾನವು ಕನಿಷ್ಠ ಮೂರರಿಂದ ಐದು ಡಿಗ್ರಿ ಸೆಲ್ಷಿಯಸ್ ಗೆ ತಲುಪಬಹುದು ಎಂದು ಐಎಂಡಿ ಹೇಳಿದೆ. ಐಎಂಡಿ ಪ್ರಕಾರ, ದೆಹಲಿಯಲ್ಲಿ ಕನಿಷ್ಠ 6 ಡಿಗ್ರಿ ಸೆಲ್ಷಿಯಸ್ ಹಾಗೂ ಗರಿಷ್ಠ 23 ಡಿಗ್ರಿ ಸೆಲ್ಷಿಯಸ್ ಇರಲಿದೆ. ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ರಾಜಸ್ಥಾನ, ಪೂರ್ವ ಉತ್ತರ ಪ್ರದೇಶದಲ್ಲಿ ಶೀತ ಗಾಳಿ ಆವರಿಸಲಿದೆ. ಈ ರಾಜ್ಯಗಳಲ್ಲಿ ಬೆಳಗ್ಗಿನ ಸಮಯದಲ್ಲಿ ದಟ್ಟ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ತಿಳಿಸಿದೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು












Click it and Unblock the Notifications