ಗೋರಖ್ ಪುರ ದುರಂತದಲ್ಲಿ ಮಧ್ಯ ಪ್ರವೇಶ ಮಾಡುವುದಿಲ್ಲ: ಸುಪ್ರೀಂ

ಗೋರಖ್ ಪುರ ಬಾಬಾ ರಾಘವ ದಾಸ್ ಆಸ್ಪತ್ರೆಯಲ್ಲಿ ಮಕ್ಕಳ ಸಾವು ಪ್ರಕರಣದಲ್ಲಿ ತಾನು ಮಧ್ಯ ಪ್ರವೇಶಿಸುವುದಿಲ್ಲ ಎಂದ ಸುಪ್ರೀಂ ಕೋರ್ಟ್. ಕಳೆದ ವಾರ, ಆಸ್ಪತ್ರೆಯಲ್ಲಿನ ಆಮ್ಲಜನಕ ಸೌಲಭ್ಯ ಸಿಗದ ಕಾರಣ 70 ಮಕ್ಕಳ ಸಾವಾಗಿತ್ತು.

ನವದೆಹಲಿ, ಆಗಸ್ಟ್ 14: ಗೋರಖ್ ಪುರ ಬಿಆರ್ ಡಿ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕ ಸೌಲಭ್ಯದ ಕೊರತೆಯಿಂದಾಗಿ ನಡೆದ ಸುಮಾರು 70 ಮಕ್ಕಳ ದಾರುಣ ಸಾವಿನ ಪ್ರಕರಣದಲ್ಲಿ ತಾನು ಮಧ್ಯ ಪ್ರವೇಶಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಆಗ್ರಹಿಸಿದೆ.

Recommended Video

      Gorakhpur Tragedy : 30 children lost their lives in 48 hours | Oneindia Kannada

      ಗೋರಖ್ ಪುರ ವೈದ್ಯಕೀಯ ಆಸ್ಪತ್ರೆಯಲ್ಲಿ ಕಳೆದ ವಾರ ಆಮ್ಲಜನಕದ ಕೊರತೆಯುಂಟಾಗಿದ್ದ ಹಿನ್ನೆಲೆಯಲ್ಲಿ ಆರು ದಿನಗಳಲ್ಲಿ ಸುಮಾರು 70 ಮಕ್ಕಳು ಸಾವನ್ನಪ್ಪಿದ್ದವು.

      On Gorakhpur Child Deaths, Supreme Court Refuses To Intervene

      ಆದರೆ, ಇದನ್ನು ಆಮ್ಲಜನಕದ ಕೊರತೆ ಎಂದು ಹೇಳಲು ಸಿದ್ಧವಿರದ ಸರ್ಕಾರ, ಆಸ್ಪತ್ರೆಯ ಸಿಬ್ಬಂದಿಯ ವೈದ್ಯಕೀಯ ನಿರ್ಲಕ್ಷ್ಯದಿಂದಲೇ ಮಕ್ಕಳು ಸಾವನ್ನಪ್ಪಿರುವುದಾಗಿ ಹೇಳಿ, ಆ ಆಸ್ಪತ್ರೆಯ ಉಸ್ತುವಾರಿ ಹೊಂದಿರುವ ಬಿಆರ್ ಡಿ ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಹಾಗೂ ಅಲ್ಲಿನ ವೈದ್ಯರೊಬ್ಬರನ್ನು ಅಮಾನತುಗೊಳಿಸಿದೆ.

      ಈ ಹಿನ್ನೆಲೆಯಲ್ಲಿ, ವಕೀಲರೊಬ್ಬರು ಸುಪ್ರೀಂ ಕೋರ್ಟ್ ಗೆ ಈ ಕುರಿತಂತೆ ಮನವಿ ಸಲ್ಲಿಸಿ, ಸರ್ವೋಚ್ಛ ನ್ಯಾಯಾಲಯವು ಈ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿ, ಉತ್ತರ ಪ್ರದೇಶ ರಾಜ್ಯ ಸರ್ಕಾರಕ್ಕೆ ಸೂಕ್ತ ಮಾರ್ಗದರ್ಶನ ನೀಡಬೇಕೆಂದು ಆಗ್ರಹಿಸಿದ್ದರು.

      ಆದರೆ, ಈ ಮನವಿಯನ್ನು ಸುಪ್ರೀಂ ಕೋರ್ಟ್ ನಯವಾಗಿ ತಿರಸ್ಕರಿಸಿದೆ. ಈಗಾಗಲೇ, ಈ ಪ್ರಕರಣದ ಅಲಹಾಬಾದ್ ಹೈಕೋರ್ಟ್ ನಲ್ಲಿದೆ. ಅಲ್ಲದೆ, ಉತ್ತರ ಪ್ರದೇಶ ಸರ್ಕಾರವೂ ಈ ಪ್ರಕರಣದ ಕುರಿತಂತೆ ಕೆಲವಾರು ಕ್ರಮಗಳನ್ನು ಕೈಗೊಂಡಿದೆ ಹಾಗಾಗಿ, ಈ ಸಂದರ್ಭದಲ್ಲಿ ತಾನು ಮಧ್ಯಪ್ರವೇಶಿಸುವುದು ಅನವಶ್ಯಕ ಎನಿಸುತ್ತದೆ ಎಂದು ನ್ಯಾಯಪೀಠ ತಿಳಿಸಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+