ಒಂದು ಕಾಲದ ಚಹಾವಾಲ ಈಗ ಉತ್ತರ ದೆಹಲಿಯ ಮೇಯರ್
ನವದೆಹಲಿ, ಏಪ್ರಿಲ್ 30: ಒಂದು ಕಾಲದಲ್ಲಿ ಜೀವನೋಪಾಯಕ್ಕಾಗಿ ಚಹಾ ಮಾರುತ್ತಿದ್ದವರು ಇಂದು ಉತ್ತರ ದೆಹಲಿಯ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಕೌನ್ಸಿಲರ್ ಅವತಾರ್ ಸಿಂಘ್ ಸಿಂಗ್ ಅವರ ಬಗ್ಗೆ ಪ್ರಧಾನಿ ಮೋದಿ ಕೂಡಾ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.
ಮೇಯರ್ ಸ್ಥಾನಕ್ಕೆ ಆಯ್ಕೆಯಾಗುವ ಮೂಲಕ ಈ ಸ್ಥಾನಕ್ಕೇರಿದ ಮೊದಲ ದಲಿತ ಸಿಖ್ ಸಮುದಾಯಕ್ಕೆ ಸೇರಿದ ಕಾರ್ಪೊರೇಟರ್ ಎನಿಸಿಕೊಂಡಿದ್ದಾರೆ.
ಟ್ರೆಂಡ್ ಸೆಟ್ಟರ್ : ಪುಣೆಯ ಚಹಾವಾಲ ನವನಾಥ್ ಯವ್ಲೆ
ಅವತಾರ್ ಸಿಂಗ್ ಅವರ ಹೆಸರನ್ನು ಉತ್ತರ ದೆಹಲಿ ಮೇಯರ್ ಸ್ಥಾನಕ್ಕೆ ದೆಹಲಿ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿ ಸೂಚಿಸಿದ್ದರು. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅವತಾರ್ ಸಿಂಗ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಮೂಲಗಳಿಂದ ತಿಳಿದು ಬಂದಿದೆ.
ಅವತಾರ್ ಸಿಂಗ್ ಅವರು ಕಠಿಣ ಪರಿಶ್ರಮದಿಂದ ಈ ಹಂತಕ್ಕೇರಿದ್ದಾರೆ. ಒಂದು ಕಾಲದಲ್ಲಿ ಟೀ ಮಾರುತ್ತಿದ್ದವರು ಇಂದು ಮೇಯರ್ ಹುದ್ದೆಗೆ ಏರಿದ್ದಾರೆ ಎಂದು ದೆಹಲಿ ಬಿಜೆಪಿ ನಾಯಕರು ಹರ್ಷ ವ್ಯಕ್ತಪಡಿಸಿದ್ದಾರೆ.
Had a great interaction with Smt. Sunita Kangra, Shri Avtar Singh and Smt. Anju Kamalkant. They will be serving as Mayors of South Delhi, North Delhi and East Delhi Municipal Corporations respectively.
— Chowkidar Narendra Modi (@narendramodi) April 28, 2019
My best wishes to them as they embark on their efforts to transform Delhi. pic.twitter.com/8l1j5ey7ql
ಮೋದಿ ಬಾಯಲ್ಲಿ ಉಲಿದ ಆ ಹೆಸರು, ಕೊಳಗೇರಿ ಮಕ್ಕಳ ಬದುಕಿನ ಬೆಳಕು!
ದೆಹಲಿ ದಕ್ಷಿಣ, ಉತ್ತರ ಹಾಗೂ ಪೂರ್ವದಲ್ಲಿ ಮೇಯರ್ ಆಗಿ ಆಯ್ಕೆಯಾದವರು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದಾರೆ.ಮೇಯರ್ ಹುದ್ದೆ ಕಾಲಾವಧಿ ಒಂದು ವರ್ಷ ಆಗಿದೆ. ನವದೆಹಲಿ ಮುನ್ಸಿಪಾಲಿಟಿ ಕೌನ್ಸಿಲ್(ಎನ್ ಡಿ ಎಂಸಿ)ಯಲ್ಲಿ ಬಿಜೆಪಿ ಬಹುಮತ ಹೊಂದಿದೆ. ದೆಹಲಿ ದಕ್ಷಿಣಕ್ಕೆ ಬಿಜೆಪಿಯ ಅಂಜು ಕಂಗ್ರಾ ಮೇಯರ್ ಆಗಿದ್ದರೆ, ಪೂರ್ವ ದೆಹಲಿಗೆ ಅಂಜು ಕಮ್ಲಾಕರ್ ಅವಿರೋಧವಾಗಿ ಆಯ್ಕೆಯಾಗುವ ನಿರೀಕ್ಷೆಯಿದೆ.