ದೆಹಲಿ: ಪ್ರತಿಭಟನೆ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ರೈತ ಸಾವು
ದೆಹಲಿ, ಜನವರಿ 26:ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ಪ್ರತಿಭಟನೆ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ರೈತ ಮೃತಪಟ್ಟಿದ್ದಾರೆ. ಪ್ರತಿಭಟನಾ ಮೆರವಣಿಗೆ ವೇಳೆ ಘಟನೆ ನಡೆದಿದೆ.
ರೈತ ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನ ಮಾಡಿದರೆ ದೊಡ್ಡ ಬೆಲೆ ತೆರಬೇಕಾಗುತ್ತದೆ:ಸಿದ್ದರಾಮಯ್ಯ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತರು ಕಳೆದ ಎರಡು ತಿಂಗಳಿಂದ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು., ಇಂದು ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ರೈತರು ಟ್ರ್ಯಾಕ್ಟರ್ ಮೆರವಣಿಗೆ ನಡೆಸುತ್ತಿದ್ದಾರೆ.
ರೈತ ಮೃತಪಟ್ಟಿರುವ ಘಟನೆ ದೀನ್ ದಯಾಳ್ ಉಪಾಧ್ಯಾಯ್ ರಸ್ತೆಯಲ್ಲಿ ಸಂಭವಿಸಿದೆ. ದೆಹಲಿಯ ಸಿಂಘು ಹಾಗೂ ಟಿಖ್ರಿ ಗಡಿಯಿಂದ ಟ್ರ್ಯಾಕ್ಟರ್ ಮೂಲಕ ಹೊರಟಿದ್ದ ರೈತರು ವಿವಿಧ ಮಾರ್ಗಗಳಿಂದ ದೆಹಲಿಯೊಳಕ್ಕೆ ನುಗ್ಗಲು ಯತ್ನಿಸಿದ ಪರಿಣಾಮ ಪೊಲೀಸರು ಮತ್ತು ರೈತರ ನಡುವೆ ಘರ್ಷಣೆ ನಡೆದಿತ್ತು. ಘಟನೆಯಲ್ಲಿ ಹಲವಾರು ಪೊಲೀಶರು ಗಾಯಗೊಂಡಿದ್ದರು.
ಪೊಲೀಸರು ಕೂಡಾ ಪ್ರತಿಭಟನಾಕಾರರನ್ನು ತಡೆಯಲು ಲಾಠಿಚಾರ್ಜ್ , ಅಶ್ರುವಾಯು ಸಿಡಿಸಿದರೂ ಕೂಡ ಯಾವುದಕ್ಕೂ ಬಗ್ಗದ ಪರಿಣಾಮ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.