ಸೀತೆ ಸುಡುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ 'ಏನ್' ಕೌಂಟರ್?
ದೆಹಲಿ, ಡಿಸೆಂಬರ್.06: ತೆಲಂಗಾಣ ಪಶುವೈದ್ಯೆ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳಿಗೆ ಪೊಲೀಸರು ಎನ್ ಕೌಂಟರ್ ನಲ್ಲಿ ಮೂಲಕ ಮುಕ್ತಿ ನೀಡಿದರು. ಇನ್ನೊಂದೆಡೆ ಅದೇ ಪ್ರಕರಣ ಇಂದು ಲೋಕಸಭೆಯಲ್ಲೂ ಪ್ರತಿಧ್ವನಿಸಿತು.
ದೇಶದಲ್ಲಿ ಮಹಿಳಾ ದೌರ್ಜನ್ಯಕ್ಕೆ ತಡೆಯೇ ಇಲ್ಲದಂತೆ ಆಗಿದೆ ಎಂದು ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಛಾಟಿ ಬೀಸಿದವು. ಮಹಿಳಾ ಸುರಕ್ಷತೆ ಹಾಗೂ ದೌರ್ಜನ್ಯ ತಡೆ ಬಗ್ಗೆ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಲೋಕಸಭೆಯಲ್ಲಿ ಪ್ರಸ್ತಾಪಿಸಿದರು.
ದೇಶದಲ್ಲಿ ಒಂದು ಕಡೆಯಲ್ಲಿ ಸರ್ಕಾರ ರಾಮನ ಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕುತ್ತಿದೆ. ಅದೇ ದೇಶದಲ್ಲಿ ಇನ್ನೊಂದು ಕಡೆ ಸೀತೆಯನ್ನು ಬಹಿರಂಗವಾಗಿ ಸುಟ್ಟು ಹಾಕುತ್ತಿದೆ. ಇದೆಂಥಾ ವ್ಯವಸ್ಥೆ ಎಂದು ಕೇಂದ್ರ ಸರ್ಕಾರವನ್ನು ಲಘುವಾಗಿ ಟೀಕಿಸಿದ್ದಾರೆ.

ಲೋಕಸಭೆಯಲ್ಲಿ ಪಶುವೈದ್ಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಉಲ್ಲೇಖಿಸಿದ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ, ದೇಶದಲ್ಲಿ ಕಾನೂನು ವ್ಯವಸ್ಥೆಯೇ ಹದಗೆಟ್ಟು ಹೋಗಿದೆ. ಜನರಿಗೆ ಕಾನೂನಿನ ಬಗ್ಗೆ ಭಯವೇ ಇಲ್ಲದಂತೆ ಆಗಿದೆ. ಇದರ ಮಧ್ಯೆ ಸರ್ಕಾರ ರಾಮ ಮಂದಿರ ನಿರ್ಮಾಣಕ್ಕೆ ಒತ್ತು ಕೊಡುತ್ತಿದೆಯೇ ವಿನಃ, ಸೀತೆಯ ರಕ್ಷಣೆಗೆ ಆದ್ಯತೆ ನೀಡುತ್ತಿಲ್ಲ ಎಂದು ಆರೋಪಿಸಿದರು.
ಉನ್ನಾವೋ ಅತ್ಯಾಚಾರ ಪ್ರಕರಣವನ್ನೂ ಪ್ರಸ್ತಾಪಿಸಿದ ಕಾಂಗ್ರೆಸ್ ಸಂಸದರು, ಸರ್ಕಾರ ರಾಮ ಮಂದಿರ ನಿರ್ಮಿಸಲು ಹಾತೊರೆಯುತ್ತಿದೆ. ಇತ್ತ ಉನ್ನಾವೋದಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆಸಿ ಬಹಿರಂಗವಾಗಿಯೇ ಸುಟ್ಟು ಹಾಕಿದ್ದಾರೆ. ಒಂದು ಕಡೆ ರಾಮ ಮಂದಿರ ನಿರ್ಮಾಣ, ಇನ್ನೊಂದು ಕಡೆ ಸೀತೆಗೆ ಹಾಡಹಗಲೇ ಬೆಂಕಿ. ಇದು ಎಂಥಾ ವ್ಯವಸ್ಥೆಯಲ್ಲಿದ್ದೇವೆ ನಾವು ಎಂದು ಪ್ರಶ್ನೆ ಮಾಡಿದ್ದಾರೆ.
ನಂತರ ಹೈದ್ರಾಬಾದ್ ಪೊಲೀಸ್ ಎನ್ ಕೌಂಟರ್ ಪ್ರಕರಣದ ಬಗ್ಗೆ ಹೇಳಿದ ಅವರು, ನಾಲ್ವರು ಆರೋಪಿಗಳು ಈಗಾಗಲೇ ಮೃತಪಟ್ಟಿದ್ದಾರೆ. ಪೊಲೀಸರ ಕಾರ್ಯವೈಖರಿಯನ್ನು ನಾವೀಗ ಬೆಂಬಲಿಸಬೇಕಿದೆ ಎಂದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications