ಬ್ರಾಹ್ಮಣರಿಗಷ್ಟೇ ಹಿಂದುತ್ವ ಗೊತ್ತು ಎಂದ ಕಾಂಗ್ರೆಸ್ ಮುಖಂಡ!
Recommended Video

ನವದೆಹಲಿ, ನವೆಂಬರ್ 23: "ಕೇವಲ ಬ್ರಾಹ್ಮಣರಿಗಷ್ಟೇ ಹಿಂದುತ್ವ ತಿಳಿದಿರುವುದು. ಆದರೆ ಬ್ರಾಹ್ಮಣೇತರ ಸಮುದಾಯಕ್ಕೆ ಸೇರಿದ ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಚಿವೆ ಉಮಾ ಭಾರತಿಯವರೆಲ್ಲ ಹಿಂದುತ್ವದ ಬಗ್ಗೆ ಹೇಗೆ ಮಾತನಾಡುತ್ತಾರೆ?" ಎಂದು ಕಾಂಗ್ರೆಸ್ ಮುಖಂಡ ಸಿಪಿ ಜೋಷಿಯವರು ಕೇಳಿದ ಪ್ರಶ್ನೆ ಇದೀಗ ವಿವಾದ ಸೃಷ್ಟಿಸಿದೆ.
ಹಿಂದು ಧರ್ಮದ ಬಗ್ಗೆ ಯಾರಾದರೂ ಮಾತನಾಡಬಲ್ಲವರಾದರೆ ಅವರು ಪಂಡಿತರು, ಬ್ರಾಹ್ಮಣರು ಮತ್ತು ಬುದ್ಧಿವಂತರು ಮಾತ್ರ. ಆದರೆ ಉಮಾ ಭಾರತಿ ಲೋದಿ ಸಮುದಾಯಕ್ಕೆ ಸೇರಿದವರು, ಪ್ರಧಾನಿ ನರೇಂದ್ರ ಮೋದಿ, ಸಾದ್ವೀ ಅವರೂ ಬ್ರಾಹ್ಮಣೇತರ ಸಮುದಾಯಕ್ಕೆ ಸೇರಿದವರು. ಆದರೂ ಏಕೆ ಹಿಂತುತ್ವದ ಬಗ್ಗೆ ಮಾತನಾಡುತ್ತಾರೆ? ಕಳೆದ 50 ವರ್ಷಗಳಿಂದ ಬ್ರಾಹ್ಮಣರು ಬುದ್ಧಿ ಕಳೆದುಕೊಂಡಿದ್ದಾರೆ" ಎಂದು ಜೋಷಿ ಹೇಳಿದ್ದರು.
'ಕಾಂಗ್ರೆಸ್ ಪ್ರಧಾನಿಗೆ ಮಾತ್ರವೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸುವುದಕ್ಕೆ ಸಾಧ್ಯವಿರುವುದು. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರೇ ಬಾಬ್ರಿ ಮಸೀದಿಯ ಆವರಣದಲ್ಲಿ ಬಾಗಿಲನ್ನು ತೆರೆದು, ಪೂಜೆಗೆ ಅನುವು ಮಾಡಿಕೊಟ್ಟಿದ್ದು. ಕಾಂಗ್ರೆಸ್ ಪ್ರಧಾನಿ ಮಾತ್ರವೇ ರಾಮಮಂದಿರ ಕಟ್ಟುವುದಕ್ಕೆ ಸಾಧ್ಯ' ಎಂದು ಇತ್ತೀಚೆಗಷ್ಟೇ ಅವರು ಹೇಳಿಕೆ ನೀಡಿದ್ದರು.

ಹೇಳಿಕೆ ವಿರೋಧಿಸಿದ ರಾಹುಲ್ ಗಾಂಧಿ
ಪಿ ಸಿ ಜೋಶಿ ಅವರ ವಿವಾದಾತ್ಮಕ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, 'ಇಂಥ ಹೇಳಿಕೆಗಳನ್ನು ಕಾಂಗ್ರೆಸ್ ಎಂದಿಗೂ ಸಹಿಸೋಲ್ಲ. ಇವು ಸಮಾಜದ ಒಂದು ನಿರ್ದಿಷ್ಟ ವರ್ಗಕ್ಕೆ ನೋವುಂಟು ಮಾಡುತ್ತದೆ. ದಯವಿಟ್ಟು ಇಂಥ ಹೇಳಿಕೆಗಳನ್ನು ನೀಡಬೇಡಿ. ಜೋಷಿಯವರಿಗೆ ತಮ್ಮ ಹೇಳಿಕೆಯ ತಪ್ಪಿನ ಬಗ್ಗೆ ಅರಿವಾಗುತ್ತದೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಅವರ ಹೇಳಿಕೆ ವ್ಯತಿರಿಕ್ತವಾಗಿದೆ' ಎಂದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications