ಕಾಂಗ್ರೆಸ್ಗೆ ಮಾತ್ರ ರಕ್ತದಲ್ಲೂ ಬಿತ್ತನೆ ಮಾಡುವುದು ಗೊತ್ತು: ತೋಮರ್
ನವದೆಹಲಿ,ಫೆಬ್ರವರಿ 05: ಇಡೀ ವಿಶ್ವಕ್ಕೆ ಕೃಷಿ ಭೂಮಿಯಲ್ಲಿ ನೀರಿನಲ್ಲಿ ಬಿತ್ತನೆ ಮಾಡುವುದು ತಿಳಿದಿದೆ. ಆದರೆ, ಕಾಂಗ್ರೆಸ್ಗೆ ರಕ್ತದಲ್ಲಿ ಬಿತ್ತನೆ ಮಾಡುವುದೂ ಗೊತ್ತು ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ಕೃಷಿ ಕಾಯ್ದೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಟೀಕೆಗಳಿಗೆ ಉತ್ತರಿಸಿ ತೋಮರ್ ಮಾತನಾಡಿದರು.ಮೂರು ಕೃಷಿ ಕಾಯ್ದೆಗಳಿಗೆ ಸಂಬಂಧಿಸಿ ಒಂದೇ ಒಂದು ಋಣಾತ್ಮಕ ಅಂಶವನ್ನು ತಿಳಿಸಲು ವಿಫಲವಾಗಿದೆ. ಕೇಲ ಹೋರಾಟಗಾರರ ದಿಕ್ಕು ತಪ್ಪಿಸಲಾಗುತ್ತಿದೆ.
ಬಹುತೇಕ ಒಂದು ರಾಜ್ಯಕ್ಕೆ ಸೀಮಿತವಾಗಿರುವ ಹೋರಾಟವನ್ನು ಇಡೀ ದೇಶದಲ್ಲಿ ನಡೆಯುತ್ತಿದೆ ಎಂದು ಬಿಂಬಿಸಲಾಗುತ್ತಿದೆ.ಅದರಲ್ಲೂ ಕಾಂಗ್ರೆಸ್ ಆಡಳಿತವಿರುವ ರಾಜ್ಯದಲ್ಲಿ ನಡೆಯುತ್ತಿರುವ ಹೋರಾಟವಿದು, ಹೋರಾಟಕ್ಕೆ ಸಂಬಂಧಿಸಿ ಸರ್ಕಾರ ಏನೂ ಮಾಡಿಲ್ಲ ಎಂಬುದು ಅಪಪ್ರಚಾರವಾಗಿದೆ ಎಂದು ತೋಮರ್ ಟೀಕಿಸಿದರು.ಹೋರಾಟದ ಆರಂಭದಿಂದಲೂ ಸರ್ಕಾರ ರೈತರ ಜತೆ ಮಾತುಕತೆ ನಡೆಸುತ್ತಿದೆ.

ಈಗಾಗಲೇ ಕಾಯ್ದೆಗೆ ಸಂಬಂಧಿಸಿಸರ್ಕಾರ ತನ್ನ ನಿಲುವನ್ನು ರೈತ ಸಂಘಟನೆಗಳಿಗೆ ಸ್ಪಷ್ಟಪಡಿಸಿದೆ, ಅವರಿಂದ ನಿರ್ದಿಷ್ಟ ಉತ್ತರಕ್ಕಾಗಿ ಕಾಯುತ್ತಿದ್ದೇವೆ ಎಂದು ತೋಮರ್ ಹೇಳಿದರು.
ರೈತರ ಕಲ್ಯಾಣಕ್ಕಾಗಿ ನಮ್ಮ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದೆ ಆತ್ಮ ನಿರ್ಭರ ಯೋಜನೆಯಲ್ಲಿ ಕೃಷಿ ಮೂಲ ಸೌಕರ್ಯಕ್ಕೆ ಒಂದು ಲಕ್ಷ ಕೋಟಿ ರೂ. ಹಣ ಮೀಸಲಿಡಲಾಗಿದೆ.
ಕಳೆದ ಆರು ವರ್ಷಗಳಲ್ಲಿ ಹಿಂದಿನ ಯಾವ ಸರ್ಕಾರಗಳೂ ಮಾಡದ ರೈತ ಪರ ಯೋಜನೆಗಳನ್ನು ಮಾಡಿದ್ದೇವೆ ಎಂದು ಸಮಜಾಯಿಷಿ ನೀಡಿದರು. ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಯಲ್ಲಿ ರೈತರು ಪ್ರತಿಭಟನೆ ಮಾಡುತ್ತಾ 72 ದಿನಗಳು ಕಳೆದಿವೆ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications