ಕಾಂಗ್ರೆಸ್‌ಗೆ ಮಾತ್ರ ರಕ್ತದಲ್ಲೂ ಬಿತ್ತನೆ ಮಾಡುವುದು ಗೊತ್ತು: ತೋಮರ್

ನವದೆಹಲಿ,ಫೆಬ್ರವರಿ 05: ಇಡೀ ವಿಶ್ವಕ್ಕೆ ಕೃಷಿ ಭೂಮಿಯಲ್ಲಿ ನೀರಿನಲ್ಲಿ ಬಿತ್ತನೆ ಮಾಡುವುದು ತಿಳಿದಿದೆ. ಆದರೆ, ಕಾಂಗ್ರೆಸ್‌ಗೆ ರಕ್ತದಲ್ಲಿ ಬಿತ್ತನೆ ಮಾಡುವುದೂ ಗೊತ್ತು ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಕೃಷಿ ಕಾಯ್ದೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಟೀಕೆಗಳಿಗೆ ಉತ್ತರಿಸಿ ತೋಮರ್ ಮಾತನಾಡಿದರು.ಮೂರು ಕೃಷಿ ಕಾಯ್ದೆಗಳಿಗೆ ಸಂಬಂಧಿಸಿ ಒಂದೇ ಒಂದು ಋಣಾತ್ಮಕ ಅಂಶವನ್ನು ತಿಳಿಸಲು ವಿಫಲವಾಗಿದೆ. ಕೇಲ ಹೋರಾಟಗಾರರ ದಿಕ್ಕು ತಪ್ಪಿಸಲಾಗುತ್ತಿದೆ.

ಬಹುತೇಕ ಒಂದು ರಾಜ್ಯಕ್ಕೆ ಸೀಮಿತವಾಗಿರುವ ಹೋರಾಟವನ್ನು ಇಡೀ ದೇಶದಲ್ಲಿ ನಡೆಯುತ್ತಿದೆ ಎಂದು ಬಿಂಬಿಸಲಾಗುತ್ತಿದೆ.ಅದರಲ್ಲೂ ಕಾಂಗ್ರೆಸ್ ಆಡಳಿತವಿರುವ ರಾಜ್ಯದಲ್ಲಿ ನಡೆಯುತ್ತಿರುವ ಹೋರಾಟವಿದು, ಹೋರಾಟಕ್ಕೆ ಸಂಬಂಧಿಸಿ ಸರ್ಕಾರ ಏನೂ ಮಾಡಿಲ್ಲ ಎಂಬುದು ಅಪಪ್ರಚಾರವಾಗಿದೆ ಎಂದು ತೋಮರ್ ಟೀಕಿಸಿದರು.ಹೋರಾಟದ ಆರಂಭದಿಂದಲೂ ಸರ್ಕಾರ ರೈತರ ಜತೆ ಮಾತುಕತೆ ನಡೆಸುತ್ತಿದೆ.

Only Congress Can Do Farming With Blood: Government Amid Protests

ಈಗಾಗಲೇ ಕಾಯ್ದೆಗೆ ಸಂಬಂಧಿಸಿಸರ್ಕಾರ ತನ್ನ ನಿಲುವನ್ನು ರೈತ ಸಂಘಟನೆಗಳಿಗೆ ಸ್ಪಷ್ಟಪಡಿಸಿದೆ, ಅವರಿಂದ ನಿರ್ದಿಷ್ಟ ಉತ್ತರಕ್ಕಾಗಿ ಕಾಯುತ್ತಿದ್ದೇವೆ ಎಂದು ತೋಮರ್ ಹೇಳಿದರು.

ರೈತರ ಕಲ್ಯಾಣಕ್ಕಾಗಿ ನಮ್ಮ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದೆ ಆತ್ಮ ನಿರ್ಭರ ಯೋಜನೆಯಲ್ಲಿ ಕೃಷಿ ಮೂಲ ಸೌಕರ್ಯಕ್ಕೆ ಒಂದು ಲಕ್ಷ ಕೋಟಿ ರೂ. ಹಣ ಮೀಸಲಿಡಲಾಗಿದೆ.

ಕಳೆದ ಆರು ವರ್ಷಗಳಲ್ಲಿ ಹಿಂದಿನ ಯಾವ ಸರ್ಕಾರಗಳೂ ಮಾಡದ ರೈತ ಪರ ಯೋಜನೆಗಳನ್ನು ಮಾಡಿದ್ದೇವೆ ಎಂದು ಸಮಜಾಯಿಷಿ ನೀಡಿದರು. ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಯಲ್ಲಿ ರೈತರು ಪ್ರತಿಭಟನೆ ಮಾಡುತ್ತಾ 72 ದಿನಗಳು ಕಳೆದಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+