ಜಮ್ಮು-ಕಾಶ್ಮೀರ ಪುನಾರಚನೆ ವಿಧೇಯಕ ಮಂಡನೆ
ನವದೆಹಲಿ, ಆಗಸ್ಟ್ 6: ರಾಜ್ಯಸಭೆಯಲ್ಲಿ ಆಪರೇಷನ್ ಕಾಶ್ಮೀರ ಉಲ್ಲೇಖಗಳಿಗೆ ಅನುಮೋದನೆ ದೊರೆತ ಬೆನ್ನಲ್ಲೇ ಲೋಕಸಭೆಯಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಧೇಯಕ ಮಂಡಿಸಲಿದ್ದಾರೆ.
ರಾಜ್ಯಕ್ಕೆ ವಿಶೇಷ ರದ್ದತಿ , ಎರಡು ಕೇಂದ್ರಾಡಳಿತ ಪ್ರದೇಶವಾಗಿ ರಚನೆ ಹಾಗೂ ಮೀಸಲಾತಿ ವಿಧೇಯಕಕ್ಕೆ ರಾಜ್ಯಸಭೆ ಸೋಮವಾರ ಸಮ್ಮತಿ ನೀಡಿತ್ತು. ಇದೇ ವಿಧೇಯಕಗಳು ಯಾವುದೇ ತಿದ್ದುಪಡಿ ಇಲ್ಲದೆ ಲೋಕಸಭೆಯಲ್ಲಿ ಮಂಗಳವಾರ ಮಂಡನೆಯಾಗಲಿದೆ.
ಲೋಕಸಭೆಯಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತವಿರುವುದರಿಂದ ವಿಧೇಯಕ ಹಾಗೂ ಪ್ರಸ್ತಾವನೆಗಳು ಅಂಗೀಕಾರಗೊಳ್ಳುವುದರಲ್ಲಿ ಸಂಶಯವಿಲ್ಲ ಆದರೆ ಯಾವ ಪಕ್ಷಗಳು ಸರ್ಕಾರದ ಪರ ಹಾಗೂ ವಿರುದ್ಧ ನಿಲ್ಲಲಿವೆ ಎನ್ನುವುದು ಬಹಿರಂಗವಾಗಲಿದೆ.

ರಾಜ್ಯಸಭೆಯಲ್ಲಿ ಈ ವಿಧೇಯಕ್ಕೆ ಜೆಡಿಯು ಹೊರತುಪಡಿಸಿ ಇತರೆ ಎನ್ಡಿಎ ಪಕ್ಷಗಳು ಸಮ್ಮತಿ ಸೂಚಿಸಿದ್ದವು. ಬಿಎಸ್ಪಿ, ಬಿಜೆಡಿ, ವೈಎಸ್ಆರ್ಪಿ, ಟಿಆರ್ಎಸ್, ಎಐಎಡಿಎಂಕೆ ಬೆಂಬಲ ಸೂಚಿಸಿದ್ದವು.
ಫಾರೂಕ್ ಅಬ್ದುಲ್ಲಾ ಬಂಧನಕ್ಕೆ ಡಿಎಂಕೆ ನಾಯಕ ದಯಾನಿಧಿ ಮಾರನ್ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ನಮಗೆ ಮಾಹಿತಿಯೇ ಇಲ್ಲ, ಸಂಸತ್ತಿನ ಸದಸ್ಯರನ್ನು ರಕ್ಷಿಸುವ ಜವಾಬ್ದಾರಿ ಸ್ಪೀಕರದ್ದು ಎಂದು ಹೇಳಿದ್ದಾರೆ.
ಪುನಾರಚನೆ ವಿಧೇಯಕ ಮಂಡನೆ ನಾವು ಯಾವ ನಿಯಮ ಮೀರಿದ್ದೇವೆಂದು ಹೇಳಲಿ, ಜಮ್ಮು ಕಾಶ್ಮೀರದ ಒಳಗೇ ಪಾಕ್ ಆಕ್ರಮಿತ ಪ್ರದೇಶ ಬರುತ್ತದೆ. ಪಿಓಕೆ ಭಾರತದ ಭಾಗ ಎಂದು ಒಪ್ಪಿಕೊಳ್ಳಲು ನಿಮಗೆ ಇಷ್ಟವಿಲ್ಲವೇ? ಅಮಿತ್ ಶಾ ಪ್ರಶ್ನೆ
ಸಂವಿಧಾನ ವಿಧಿ 370 ಹಾಗೂ 35 ಎ ರದ್ದುಪಡಿಸುತ್ತಿದ್ದಂತೆ, ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದಾಗಿದೆ. ಈ ನೆಲೆಯು ಪಾಕಿಸ್ತಾನದ ಆಕ್ರೋಶಕ್ಕೆ ಕಾರಣವಾಗಿದೆ.
-ಈಗಾಗಲೇ ಪಾಕಿಸ್ತಾನ ಸರ್ಕಾರವು ಈ ವಿಚಾರಕ್ಕೆ ಸಂಬಂಧಿಸಿ ವಿಶ್ವಸಂಸ್ಥೆ ಮೊರೆ ಹೋಗಲು ನಿರ್ಧರಿಸಿದೆ. ಹಾಗೆಯೇ ಸೇನಾ ಮುಖ್ಯಸ್ಥರು ತುರ್ತು ಭದ್ರತಾ ಸಭೆಯನ್ನು ನಡೆಸಿದ್ದಾರೆ.
-ವಿದೇಶಾಂಗ ಇಲಾಖೆ ವಕ್ತಾರರ ಹೇಳಿಕೆ ಬೆನ್ನಲ್ಲೇ ಪ್ರಧಾನಿ ಇಮ್ರಾನ್ ಖಾನ್ ಮಾತನಾಡಿದ್ದು,ಭಾರತದ ನಿರ್ಧಾರವು ಅಣ್ವಸ್ತ್ರ ಹೊಂದಿರುವ ಎರಡು ರಾಷ್ಟ್ರಗಳ ನಡುವಿನ ಸಂಬಂಧವನ್ನು ಇನ್ನಷ್ಟು ಹಾಳುಮಾಡಲಿದೆ. ಈ ನಿರ್ಧಾರ ವಿಶ್ವಸಂಸ್ಥೆಯ ನಿರ್ಣಯಕ್ಕೆ ವಿರುದ್ಧ ಹಾಗೂ ಕಾನೂನು ಬಾಹಿರ ಎಂದು ಹೇಳಿದ್ದಾರೆ.
-ರಾಜ್ಯಕ್ಕೆ ವಿಶೇಷ ರದ್ದತಿ , ಎರಡು ಕೇಂದ್ರಾಡಳಿತ ಪ್ರದೇಶವಾಗಿ ರಚನೆ ಹಾಗೂ ಮೀಸಲಾತಿ ವಿಧೇಯಕಕ್ಕೆ ರಾಜ್ಯಸಭೆ ಸೋಮವಾರ ಸಮ್ಮತಿ ನೀಡಿತ್ತು. ಇದೇ ವಿಧೇಯಕಗಳು ಯಾವುದೇ ತಿದ್ದುಪಡಿ ಇಲ್ಲದೆ ಲೋಕಸಭೆಯಲ್ಲಿ ಮಂಗಳವಾರ ಮಂಡನೆಯಾಗಲಿದೆ.
-ರಾಜ್ಯಸಭೆಯಲ್ಲಿ ಆಪರೇಷನ್ ಕಾಶ್ಮೀರ ಉಲ್ಲೇಖಗಳಿಗೆ ಅನುಮೋದನೆ ದೊರೆತ ಬೆನ್ನಲ್ಲೇ ಲೋಕಸಭೆಯಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಧೇಯಕ ಮಂಡಿಸಲಿದ್ದಾರೆ.
More From
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications